AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕು ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನಿಡಿದ ಸಿಸಿ ಕ್ಯಾಮಾರ; ಅಸಲಿಗೆ ಅಂದು ಆಗಿದ್ದೇನು ಗೊತ್ತಾ?

ಸೃಷ್ಟಿ ಎಂಬ ಹೆಸರಿನ ಬೆಕ್ಕು ನಾಪತ್ತೆಯಾದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದ್ದು, ಬೆಕ್ಕನ್ನು ಯುವಕನೊಬ್ಬ ಎತ್ತಿಕೊಂಡು ಹೋದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಕ್ಕು ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನಿಡಿದ ಸಿಸಿ ಕ್ಯಾಮಾರ; ಅಸಲಿಗೆ ಅಂದು ಆಗಿದ್ದೇನು ಗೊತ್ತಾ?
ನಾಪತ್ತೆಯಾದ ಬೆಕ್ಕು
TV9 Web
| Edited By: Rakesh Nayak Manchi|

Updated on:Aug 06, 2022 | 8:41 AM

Share

ಮೈಸೂರು: ಬೆಕ್ಕು ನಾಪತ್ತೆಯಾದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದ್ದು, ಬೆಕ್ಕನ್ನು ಯುವಕನೊಬ್ಬ ಎತ್ತಿಕೊಂಡು ಹೋದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೇವರಾಜ ಅರಸು ರಸ್ತೆಯ ಬಾಟ ಶೋರೂಂನಲ್ಲಿದ್ದ ಸೃಷ್ಟಿ ಎಂಬ ಬೆಕ್ಕನ್ನು ನೋಡಿದ ಯುವಕನೊಬ್ಬ ಅದರ ಹತ್ತಿರ ಹೋಗಿ ಕರೆಯುತ್ತಾನೆ. ನಂತರ ಅದನ್ನು ಎತ್ತಿಕೊಂಡು ಹೋಗುವುದು ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ.

ಪ್ರಕರಣದ ಹಿನ್ನೆಲೆ ಏನು?

ಸೃಷ್ಟಿ ಹೆಸರಿನ ಬೆಕ್ಕು ಆ.4ರಂದು ಮೈಸೂರಿನ ದೇವರಾಜ ಅರಸು ರಸ್ತೆಯ ಬಾಟ ಶೋರೂಂನಿಂದ ರಾತ್ರಿ ಬೆಕ್ಕು ನಾಪತ್ತೆಯಾಗಿದೆ. ಬೆಕ್ಕನ್ನು ಹುಡುಕಿ ಕೊಟ್ಟವರಿಗೆ 5 ಸಾವಿರ ಬಹುಮಾನ ನೀಡುವುದಾಗಿ ನಾಚಪ್ಪ ಎಂಬವರು ಘೋಷಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಬೆಕ್ಕನ್ನು ಪತ್ತೆಹಚ್ಚಿದರೆ ಕರೆಮಾಡುವಂತೆ ಸೂಚಿಸಿ ಮೊಬೈಲ್ ನಂಬರ್ ಕೂಡ ಹಂಚಿಕೊಂಡಿದ್ದರು. ಈ ಫೋಟೋ ವೈರಲ್ ಆಗಿದ್ದು, ಇದೀಗ ಬೆಕ್ಕನ್ನು ಯುವಕನೊಬ್ಬ ಎತ್ತಿಕೊಂಡಿ ಹೋಗಿರುವುದು ತಿಳಿದುಬಂದಿದೆ.

ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷ

ಬೆಳಗಾವಿ: ಜಿಲ್ಲೆಯ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷಗೊಂಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅದರಂತೆ ಅಧಿಕಾರಿಗಳು ಬೋನಿನಲ್ಲಿ ನಾಯಿಯನ್ನು ಇಟ್ಟು ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಮಿಕ ಸಿದ್ದರಾಯಿ ಎಂಬುವರ ಮೇಲೆ ದಾಳಿ ಬಳಿಕ ಚಿರತೆ ಮರೆಯಾಗಿತ್ತು. ಇದೀಗ ಶುಕ್ರವಾರ ಮಧ್ಯಾಹ್ನ 12.26ರ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಚಲನವಲನ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ನಿರಂತರ ಕಾರ್ಯಾಚರಣೆ ನಡುವೆಯೂ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿಲ್ಲ. ಅದಾಗ್ಯೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ಅನವಶ್ಯಕವಾಗಿ ಯಾರೂ ಓಡಾಡದಂತೆ ಹಾಗೂ ಮಕ್ಕಳನ್ನು ಮನೆಯಿಂದ ಹೊರಬಿಡದಂತೆ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಗುಡ್ಡಗಾಡಿನಲ್ಲಿ 2 ಚಿರತೆಗಳು ಪ್ರತ್ಯಕ್ಷ

ಬಳ್ಳಾರಿ: ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು, ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಜಿಲ್ಲೆಯ ಇನ್‌ಫ್ಯಾಂಟ್ರಿ ರಸ್ತೆಯ ದಯಾ ಕೇಂದ್ರದ ಬಳಿಯ ಗುಡ್ಡ ಪ್ರದೇಶದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ. ಕಳೆದ ಒಂದು ವಾರದಿಂದ ಚಿರತೆಗಳು ಗುಡ್ಡದಂಚಿನಲ್ಲಿ ಓಡಾಡುತ್ತಿದ್ದು, ಜನರು ಭಯಬೀತರಾಗಿದ್ದಾರೆ. ಅಲ್ಲದೆ ಕೂಡಲೇ ಚಿರತೆಗಳನ್ನು ಸೆರೆಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅದರಂತೆ ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರೆದಿದೆ.

ಮತ್ತಷ್ಟು ಕ್ರೈಂ ಸಿದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Sat, 6 August 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ