AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಭಾರತದಲ್ಲೂ ಇಂತಹ ಘಟನೆ ನಡೆದಿರಲಿಲ್ಲ; ಬೆಳಗಾವಿಯಲ್ಲಿ ಮಹಿಳೆ ಮೇಲಿನ ಹಲ್ಲೆ ಬಗ್ಗೆ ಹೈಕೋರ್ಟ್ ಕಳವಳ

ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ ಯುವತಿ ಕುಟುಂಬಸ್ಥರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಹೈಕೋರ್ಟ್, ಮಹಾಭಾರತದ ಘಟನೆಯನ್ನು ಉಲ್ಲೇಖಿಸಿದರು. ವಸ್ತ್ರಾಪಹರಣದ ವೇಳೆ ದ್ರೌಪದಿಯ ರಕ್ಷಣೆಗೆ ಪರಮಾತ್ಮ ಶ್ರೀಕೃಷ್ಣ ಧಾವಿಸಿದಂತೆ, ಈಗಿನ ಕಾಲದಲ್ಲಿ ಯಾರು ಕೂಡ ಬರುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದೆ.

ಮಹಾಭಾರತದಲ್ಲೂ ಇಂತಹ ಘಟನೆ ನಡೆದಿರಲಿಲ್ಲ; ಬೆಳಗಾವಿಯಲ್ಲಿ ಮಹಿಳೆ ಮೇಲಿನ ಹಲ್ಲೆ ಬಗ್ಗೆ ಹೈಕೋರ್ಟ್ ಕಳವಳ
ಬೆಳಗಾವಿಯಲ್ಲಿ ಮಹಿಳೆ ಮೇಲಿನ ಹಲ್ಲೆ ಬಗ್ಗೆ ಹೈಕೋರ್ಟ್ ಕಳವಳ
Follow us
TV9 Web
| Updated By: Rakesh Nayak Manchi

Updated on:Dec 15, 2023 | 9:11 AM

ಬೆಂಗಳೂರು, ಡಿ.15: ಬೆಳಗಾವಿಯಲ್ಲಿ (Belagavi) ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ (Women Assault) ನಡೆಸಿದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿರುವ ಹೈಕೋರ್ಟ್ (High Court), ಮಹಾಭಾರತದಲ್ಲಿ ವಸ್ತ್ರಾಪಹರಣದ ವೇಳೆ ದ್ರೌಪದಿಯ ರಕ್ಷಣೆಗೆ ಪರಮಾತ್ಮ ಶ್ರೀಕೃಷ್ಣ ಧಾವಿಸಿದಂತೆ, ಈಗಿನ ಕಾಲದಲ್ಲಿ ಯಾರು ಕೂಡ ಬರುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದೆ.

ಇತ್ತೀಚೆಗೆ ಕರ್ನಾಟಕದ ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿದಂತಹ ದೌರ್ಜನ್ಯಗಳು ಮಹಾಭಾರತದ ಅವಧಿಯಲ್ಲಿ ಶ್ರೀಕೃಷ್ಣನು, ಕೌರವರು ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿದ್ದಾಗ ರಕ್ಷಿಸಲು ಬಂದಾಗಲೂ ನಡೆದಿರಲಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಹೇಳಿದೆ.

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಇಂದಿನ ಜಗತ್ತಿನಲ್ಲಿ ದುರ್ಯೋಧನರು ಅಥವಾ ದುಶ್ಯಾಸನರು ಬಂದರೆ ಯಾವ ಕೃಷ್ಣನೂ ಸಹಾಯಕ್ಕೆ ಬರುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ತನಿಖೆಯ ವಿವರಗಳಿಗೆ ಅತೃಪ್ತಿ ವ್ಯಕ್ತಪಡಿಸಿ ಹೆಚ್ಚುವರಿ ಸ್ಥಿತಿ ವರದಿಯನ್ನು ಕೋರಿತು.

ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಕಾರಣಕ್ಕೆ ಆತನ ತಾಯಿಯನ್ನ ಬೆತ್ತಲೆಗೊಳಿಸಿ ಥಳಿಸಿ ಮೃಗೀಯ ವರ್ತನೆ ತೋರಿದ ಘಟನೆ ಇಡೀ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿತ್ತು. ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು; ಸಿದ್ದರಾಮಯ್ಯ

ಘಟನೆ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ನಂತರ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿತು. ಮುಂದಿನ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಸ್ಥಿತಿ ವರದಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ಬೆಳಗಾವಿ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತು. ನಮಗೆ ಸಂಪೂರ್ಣ ವಿವರಗಳು ಬೇಕು. ಇದನ್ನು ಅಸಾಧಾರಣ ಘಟನೆ ಎಂದು ಪರಿಗಣಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ವರಾಲೆ ಅವರು ಹೇಳಿದರು.

ನನ್ನ ಬಳಿ ಪದಗಳಿಲ್ಲ. ಮಹಿಳೆ ಎರಡು ಗಂಟೆಗಳ ಕಾಲ ಅನುಭವಿಸಿದ ಆಘಾತವನ್ನು ನೋಡಿ, ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ, ಪ್ರಾಣಿಯಂತೆ ಥಳಿಸಿರಬಹುದು. ಕೃತ್ಯ ಎಸಗಿದವರನ್ನು ಮನುಷ್ಯರೆಂದು ಕರೆಯಲು ನಾಚಿಕೆಯಾಗುತ್ತದೆ. ಪ್ರಾಣಿಗಳು ಕೂಡ ಉತ್ತಮವಾಗಿ ವರ್ತಿಸುತ್ತವೆ. ಅತ್ಯಂತ ಅಪಾಯಕಾರಿ ಸಂಕೇತವನ್ನು ಕಳುಹಿಸಲಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿ ವರಾಳೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Fri, 15 December 23