AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕರಿಸುವಂತಿಲ್ಲ

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ.

ಇನ್ಮುಂದೆ ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕರಿಸುವಂತಿಲ್ಲ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Jun 05, 2021 | 9:49 PM

Share

ಬೆಂಗಳೂರು: ಉಪ ನೋಂದಣಿ ಕಚೇರಿಯಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿದೆ. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಕರ್ನಾಟಕದಲ್ಲಿ ಇಂದು 13,800 ಜನರಲ್ಲಿ ಕೊವಿಡ್ ಸೋಂಕು ಪತ್ತೆ; ಪಾಸಿಟಿವಿಟಿ ಪ್ರಮಾಣ ಶೇ.10ಕ್ಕೆ ಇಳಿಕೆ ಕರ್ನಾಟಕದಲ್ಲಿ ಇಂದು ಒಂದೇ ದಿನ 13,800 ಜನರಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಶೇ.10ಕ್ಕೆ ಕೊರೊನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಏಪ್ರಿಲ್‌ ಬಳಿಕ ಮೊದಲ ಬಾರಿಗೆ ಕರ್ನಾಟಕದ ಕೊವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ 1,42, 291 ಕೊವಿಡ್ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, 13,800 ಜನರಿಗೆ ಕೊರೊನಾ ದೃಢಪಟ್ಟಿದೆ. ಅಲ್ಲದೇ ಇದೇ ಅವಧಿಯಲ್ಲಿ 25,346 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದವರ ಪೈಕಿ 8,852ಜನರು ಬೆಂಗಳೂರಿನವರೇ ಆಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗಿನ ಕೊವಿಡ್ ಸೋಂಕಿತರ ಸಂಖ್ಯೆ 26,83,314ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 365 ಜನರ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 31,260 ಕ್ಕೆ ಏರಿಕೆಯಾಗಿದೆ.  ಸೋಂಕಿತರ ಪೈಕಿ 23,83,758 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,  2,68,275 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್​ ಲಸಿಕೆ ಹಾಕಿಸಿಕೊಂಡ ಧ್ರುವ ಸರ್ಜಾ; ಬೈಸೆಪ್ಸ್​ ನೋಡಿ ದಂಗಾದ ಫ್ಯಾನ್ಸ್​

ಕೊವಿಡ್ 2ನೇ ಅಲೆಯಲ್ಲಿ ದೇಶದಲ್ಲಿ 646, ಕರ್ನಾಟಕದಲ್ಲಿ 9 ವೈದ್ಯರು ನಿಧನ

(Cash and DD are not acceptable in sub registration offices orders Karnataka Govt)

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ