AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಜಿಲ್ಲೆಗೂ ಕಾಲಿಟ್ಟ ಮಲೆನಾಡ ಗೋಡಂಬಿ; ಉತ್ತಮ ಆದಾಯದ ನಿರೀಕ್ಷೆಯಲ್ಲಿರುವ ಗೋಡಂಬಿ ಬೆಳೆದ ರೈತರು

ಸರ್ಕಾರದ ಯಾವುದೇ ಪ್ರೋತ್ಸಾಹ ಧನ, ಪಡೆಯದೇ ಸ್ವಯಂ ಪ್ರೇರಣೆಯಿಂದ ತಮ್ಮ ಜಮೀನ ಸುತ್ತಲೂ ಪ್ರಾಯೋಗಿಕವಾಗಿ ಜಿಲ್ಲೆಯ ನೂರಾರು ರೈತರು ಗೋಡಂಬಿ ಗಿಡ ನೆಟ್ಟು ಈಗ ಕೈತುಂಬ ಹಣ ಪಡೆಯುತ್ತಿದ್ದಾರೆ.

ಬೀದರ್ ಜಿಲ್ಲೆಗೂ ಕಾಲಿಟ್ಟ ಮಲೆನಾಡ ಗೋಡಂಬಿ; ಉತ್ತಮ ಆದಾಯದ ನಿರೀಕ್ಷೆಯಲ್ಲಿರುವ ಗೋಡಂಬಿ ಬೆಳೆದ ರೈತರು
ಬೀದರ್ ಜಿಲ್ಲೆಗೂ ಕಾಲಿಟ್ಟಿದೆ ಮಲೆನಾಡಿನ ಗೋಡಂಬಿ ಬೆಳೆ
preethi shettigar
|

Updated on: Apr 02, 2021 | 4:30 PM

Share

ಬೀದರ್: ಕೇವಲ ಮಲೆನಾಡಿಗಷ್ಟೇ ಸೀಮಿತವಾಗಿದ್ದ ಗೋಡಂಬಿ ಬೆಳೆ ಈಗ ಬಿಸಿಲ ನಗರಿ, ಗಡಿ ಜಿಲ್ಲೆ ಬೀದರ್​ಗೂ ಕಾಲಿಟ್ಟಿದೆ. ಕಳೆದ ಮೂರು ವರ್ಷಗಳಿಂದ ಭೀಕರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆಯ ಜನರಿಗೆ ಗೋಡಂಬಿ ಬೆಳೆ ಕೈಹಿಡಿದಿದೆ. ಬಡವರ ಬೆಳೆ, ಶ್ರೀಮಂತರ ಆಹಾರ ಎಂದೇ ಕರೆಯಿಸಿಕೊಳ್ಳುವ ಗೋಡಂಬಿ ಬೆಳೆದ ರೈತರ ಮೊಗದಲ್ಲಿ ಸದ್ಯ ಮಂದಹಾಸ ಮೂಡಿದೆ.

ಬಯಲು ಸೀಮೆಯ ಬರಡು ಭೂಮಿಯಲ್ಲಿ ಗೋಡಂಬಿಯನ್ನು ಬೆಳೆಯುವುದರ ಮೂಲಕ ಬೀದರ್ ಜಿಲ್ಲೆಯ ರೈತರು ಸೈ ಎಣಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸರಿಸುಮಾರು 300 ಹೆಕ್ಟೇರ್ ಪ್ರದೇಶದಲ್ಲಿ ಗೇರು ಗಿಡ ನೆಟ್ಟ ರೈತರು ಉತ್ತಮ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಕೇವಲ ಮಲೆನಾಡಿಗಷ್ಟೇ ಸೀಮತವಾಗಿದ್ದ ಗೋಡಂಬಿ ಬೆಳೆ ಬೀದರ್ ಜಿಲ್ಲೆಗೂ ಕಾಲಿಟ್ಟು ರೈತರ ಪಾಲಿಗೆ ಹಣ ನೀಡುವ ಯಂತ್ರವಾಗಿ ಪರಿಣಮಿಸಿದೆ.

ಬೀದರ್ ಜಿಲ್ಲೆಯ ಹವಾಮಾನಕ್ಕೆ ಗೇರು ಗಿಡಗಳನ್ನ ನೆಟ್ಟರೆ ಉತ್ತಮ ಇಳುವರಿಯನ್ನು ಕೊಡುತ್ತದೆ ಎಂದು ತೋಟಗಾರಿಕೆಯ ಇಲಾಖೆಯ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದರು. ಅದರಂತೆ ಶೂನ್ಯ ಬಂಡವಾಳದೊಂದಿಗೆ ಬೆಳೆದ ಗೋಡಂಬಿ ಬೆಳೆಯಿಂದ ರೈತರು ಸಾಂಪ್ರದಾಯಿಕ ಬೆಳೆಗಳಷ್ಟೇ ಆದಾಯ ಪಡೆಯುತ್ತಿದ್ದಾರೆ. ಜವಗು ಮಿಶ್ರಿತ ಕೆಂಪು ಭೂ ಪ್ರದೇಶವನ್ನು ಹೊಂದಿರುವ ಬೀದರ್ ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಸಮೃದ್ಧವಾಗಿ ಬೆಳೆದಿರುವ ಗೋಡಂಬಿ ಮರಗಳು ನಿರೀಕ್ಷೆಗೂ ಮಿರಿ ಆದಾಯವನ್ನು ನೀಡುತ್ತಿವೆ.

ಯಾವುದೇ ರಾಸಾಯನಿಕ ಬಳಸದೆ ಸಾವಯವ ಕೃಷಿ ಪದ್ಧತಿಯಲ್ಲಿ ಜಮೀನಿನ ಬದುವಿನಲ್ಲಿ ಹಾಕಲಾದ ಗೋಡಂಬಿ ಬೀಜಗಳು, ನೈಸರ್ಗೀಕ ಕೃಷಿ ಪದ್ಧತಿಯಿಂದಾಗಿ ಹುಲುಸಾಗಿ ಬೆಳೆದು ಇದೀಗ ಲಕ್ಷ ಲಕ್ಷ ರೂಪಾಯಿ ಆದಾಯ ಬರುವಂತಾಗಿದೆ ಎಂದು ಗೋಡಂಬಿ ಬೆಳೆದ ರೈತ ಶರಣಪ್ಪ ಹೇಳಿದ್ದಾರೆ.

Cashew crop

ಗೋಡಂಬಿ ಹಣ್ಣು

ಇಷ್ಟೊಂದು ವೈಶಿಷ್ಟ್ಯಪೂರ್ಣ ಗೋಡಂಬಿಯನ್ನು ಉತ್ತಮ ರೀತಿಯಲ್ಲಿ ಬೆಳೆದ ರೈತರು ಇತರ ತೋಟಗಾರಿಕೆ ಬೆಳೆಗಾರರಿಗೆ ಮಾದರಿಯಾಗಿ ನಿಂತಿದ್ದಾರೆ. ಸರ್ಕಾರದ ಯಾವುದೇ ಪ್ರೋತ್ಸಾಹಧನ  ಪಡೆಯದೇ ಸ್ವಯಂ ಪ್ರೇರಣೆಯಿಂದ ತಮ್ಮ ಜಮೀನ ಸುತ್ತಲೂ ಪ್ರಾಯೋಗಿಕವಾಗಿ ಜಿಲ್ಲೆಯ ನೂರಾರು ರೈತರು ಗೋಡಂಬಿ ಗಿಡ ನೆಟ್ಟು ಈಗ ಕೈತುಂಬ ಹಣ ಪಡೆಯುತ್ತಿದ್ದಾರೆ.

Cashew crop

ಗೋಡಂಬಿ ಹೂವು ಮರದ ತುಂಬಾ ಬಿಟ್ಟಿರುವ ದೃಶ್ಯ

ಬೀದರ್ ಜಿಲ್ಲೆಯಲ್ಲಿ ಗೋಡಂಬಿ ಬೆಳೆ ಬೆಳೆಯಲು ಸೂಕ್ತವಾದ ವಾತಾವರಣ ಮತ್ತು ಅದಕ್ಕೆ ಬೇಕಾದ ಕೆಂಪು ಮಿಶ್ರಿತ ಮಣ್ಣು ಇಲ್ಲಿ ಇರುವುದರಿಂದ ರೈತರು ಗೋಡಂಬಿ ಬೆಳೆಯಲು ಅನುಕೂಲವಾಗಿದ್ದು, ನಾವು ನಮ್ಮ ಹೊಲದಲ್ಲಿ ಗೋಡಂಬಿ ನಾಟಿ ಮಾಡಿದ್ದೇವೆ ಎಂದು ಚಿಟ್ಟಾ ಗ್ರಾಮದ ರೈತರಾದ ಗುಂಡಪ್ಪ ಹೇಳಿದ್ದಾರೆ.

ಈ ಹಿಂದಿನ ವರ್ಷಗಳಿಗೆ ಹೋಲಿಸಿದಾಗ ಪ್ರಸಕ್ತ ವರ್ಷ ಮರಗಳು ಮೈತುಂಬ ಹೂಗಳನ್ನು ಸುರಿದುಕೊಂಡು ಕಂಗೊಳಿಸುತ್ತಿದೆ. ಹೀಗಾಗಿ ಈ ವರ್ಷವೂ ಗೋಡಂಬಿ ಇಳುವರಿ ಎಕರೆಗೆ ಹತ್ತರಿಂದ ಹನ್ನೆರಡು ಕ್ವಿಂಟಾಲ್ ಇಳುವರಿ ಬರುವ ನಿರೀಕ್ಷೆ ಇದೆ. ಸದ್ಯ ಭರಪೂರ ಲಾಭ ತಂದುಕೊಡುವ ಇಳುವರಿ ಬಂದರೂ ಸೂಕ್ತ ಮಾರುಕಟ್ಟೆ ದೊರೆಯದ ಹಿನ್ನೆಲೆಲೆಯಲ್ಲಿ ಮಾರಾಟ ಮಾಡಲು ದೂರದ ಕಾರವಾರ, ಶಿರಸಿ, ಹಳಿಯಾಳದ ಮಾರುಕಟ್ಟೆಗೆ ತಗೆದುಕೊಂಡು ಹೋಗುವ ಅನಿವಾರ್ಯತೆ ರೈತರಿಗಿದೆ.

Cashew crop

ಗೋಡಂಬಿ ಬೀಜಗಳನ್ನು ರಾಶಿ ಹಾಕಿರುವ ದೃಶ್ಯ

ಸ್ಥಳೀಯ ಮಾರುಕಟ್ಟೆಗಳಲ್ಲಿ ಗೋಡಂಬಿ ಮಾರಾಟ ವ್ಯವಸ್ಥೆ ಇಲ್ಲದೆ ಇರುವುದರಿಂದಾಗಿ ದುಬಾರಿ ಸಾಗಣಿಕೆ ವೆಚ್ಚ ಭರಿಸಬೇಕಾಗಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಗೆ ಹಲವಾರು ಬಾರಿ ತಮ್ಮ ಬೆಳೆಯ ಕುರಿತಾಗಿ ಮಾಹಿತಿಗಾಗಿ ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಪ್ರತಿವರ್ಷ ತೋಟಗಾರಿಕೆ ಬೆಳೆಗಾರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಸ್ವಯಂ ಪ್ರೇರಣೆಯಿಂದ ಬರಡು ನೆಲದಲ್ಲಿಯೂ ಬಂಪರ್ ಬೆಳೆ ಬೆಳೆಯುತ್ತಿರುವ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದು ಈ ಭಾಗದ ರೈತರ ಕೋರಿಕೆಯಾಗಿದೆ.

( ಸುರೇಶ್ ನಾಯಕ್- 9980914145)

ಇದನ್ನೂ ಓದಿ: ಬಿಹಾರ್, ಜಾರ್ಖಂಡ್ ಆರೋಗ್ಯ ಕ್ಷೇತ್ರದ ಸುಧಾರಣೆಗೆ ₹ 1 ಕೋಟಿ ದೇಣಿಗೆ ನೀಡಿದ ಅನಿವಾಸಿ ಭಾರತೀಯರು

(Cashew crop gives good income to farmers in Bidar)

Follow Us
preethi shettigar
preethi shettigar
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ