AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?

ಖತರ್ನಾಕ್ ಸೇಲ್ಸ್ ಮನ್ ತೌಸಿಕ್ ಪಾಷಾ ಬೆಂಕಿ ಇಟ್ಟು ಕ್ಯಾಶ್ ಕೌಂಟರ್ ನಲ್ಲಿಟ್ಟಿದ್ದ ಹಣವನ್ನ ದೋಚಿದ್ದ! ಬಂಧಿತನಿಂದ 3.56 ಲಕ್ಷ ರೂ ನಗದು ಸೇರಿದಂತೆ ಬೆಂಕಿ ಇಡಲು ಬಳಸಿದ್ದ ವಸ್ತುಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?
ಎಲೆಕ್ಟ್ರಾನಿಲ್ ಅಂಗಡಿಗೆ ಬೆಂಕಿ: 24 ಗಂಟೆಗಳಲ್ಲಿ ಕ್ಯಾಷಿಯರ್ ಅರೆಸ್ಟ್​, ಉದ್ದೇಶ ಏನು ಗೊತ್ತಾ!?
TV9 Web
| Edited By: |

Updated on: Oct 18, 2021 | 10:14 AM

Share

ಕೋಲಾರ: ನಗರದಲ್ಲಿ ಎಲೆಕ್ಟ್ರಾನಿಕ್ಸ್​​ ಅಂಗಡಿಯಲ್ಲಿ ನಡೆದಿದ್ದ ಬೆಂಕಿ ಅವಘಡ ಪ್ರಕರಣದಲ್ಲಿ 24 ಗಂಟೆಗಳಲ್ಲಿ ಬೆಂಕಿ ಇಟ್ಟ ಆರೋಪಿಯನ್ನ ಪೋಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ರೆಡ್ಡಿ ಎಲೆಕ್ಟ್ರಾನಿಕ್ಸ್ ಮತ್ತು ಹೋಂ ಅಪ್ಲೈಯನ್ಸಸ್ ನಲ್ಲಿ ಘಟನೆ ನಡೆದಿತ್ತು. ಅಂಗಡಿಯಲ್ಲಿ ಕೆಲಸ ಮಾಡುವ ಸೇಲ್ಸ್ ಮನ್ ತೌಸಿಕ್ ಪಾಷಾ ಬಂಧನಕ್ಕೀಡಾದ ಆರೋಪಿ. ಖತರ್ನಾಕ್ ಸೇಲ್ಸ್ ಮನ್ ತೌಸಿಕ್ ಪಾಷಾ ಬೆಂಕಿ ಇಟ್ಟು ಕ್ಯಾಶ್ ಕೌಂಟರ್ ನಲ್ಲಿಟ್ಟಿದ್ದ ಹಣವನ್ನ ದೋಚಿದ್ದ! ಬಂಧಿತನಿಂದ 3.56 ಲಕ್ಷ ರೂ ನಗದು ಸೇರಿದಂತೆ ಬೆಂಕಿ ಇಡಲು ಬಳಸಿದ್ದ ವಸ್ತುಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಹಾಸನ: ಕುಡಿದ ಅಮಲಿನಲ್ಲಿ ಬಾರ್ ಮುಂದೆ ನಿಂತಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಹತ್ಯೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಓರ್ವನ ಹತ್ಯೆಗೆ ಕಾರಣವಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ಶಿವರ ಗ್ರಾಮದಲ್ಲಿ ಘಟನೆ ನಡೆದಿದೆ. ಎಂ. ಶಿವರ ಗ್ರಾಮದ ಬಾರ್ ಮುಂದೆ ನಿಂತಿದ್ದಾಗ ಹೊಂಗೇಹಳ್ಳಿಯ ನವೀನ್ ಎಂಬಾತನಿಂದ ಈ ಕುಕೃತ್ಯ ನಡೆದಿದೆ. ಬಾರ್ ಮುಂದೆ ನಿಂತಿದ್ದ ನಂದೀಶ್​, ಗಿರೀಶ್ ಮತ್ತಿರರ ಮೇಲೆ ಕಾರು ಚಲಾಯಿರುವ ಆರೋಪಿ ಹಂತಕನಾಗಿದ್ದಾನೆ. ಘಟನೆಯಲ್ಲಿ ನಂದೀಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುಡಿದ ಅಮಲಿನಲ್ಲಿ ಸಿಕ್ಕ ಸಿಕ್ಕವರಿಗೆ ನವೀವ್ ಬೈಯ್ತಿದ್ದ. ಈ ವೇಳೆ ಸುಮ್ಮನೆ ಊರಿಗೆ ಹೋಗು ಎಂದು ನಂದೀಶ್ ಮತ್ತು ಗೆಳೆಯರು ಬುದ್ಧಿ ಹೇಳಿದ್ದರು. ಈ ವೇಳೆ ಕಾರ್ ಏರಿ ವಾಪಾಸ್ ಹೋಗಿ, ಮತ್ತೆ ತಿರುಗಿ ಬಂದು ಪ್ರತೀಕಾರವಾಗಿ ಕಾರ್ ಹತ್ತಿಸಿ, ಒಬ್ಬರ ಸಾವಿಗೆ ಕಾರಣವಾಗಿದ್ದಾನೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹಂತಕ ನವೀನನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

drunk-driver-drives-car-over-people-standing-near-bar-one-died-in-m-shivara-village-hassan

ಕುಡಿದ ಅಮಲಿನಲ್ಲಿ ಬಾರ್ ಮುಂದೆ ನಿಂತಿದ್ದ ವ್ಯಕ್ತಿಯ ಮೇಲೆ ಕಾರು ಹತ್ತಿಸಿ ಹತ್ಯೆ, ಒಳ ಚಿತ್ರದಲ್ಲಿ ಆರೋಪಿ ನವೀನ್

(Cashier in kolar sets in electronics shop on fire reason to steal cash)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?