AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ

ಕರ್ನಾಟಕದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಇಂದು ಮುಕ್ತಾಯಗೊಂಡಿದೆ. ಈವರೆಗೆ ಶೇ.97.51ರಷ್ಟು (ಜಿಬಿಎ ಹೊರತುಪಡಿಸಿ) ಕಾರ್ಯ ಪೂರ್ಣಗೊಂಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ 59 ಲಕ್ಷ ಜನರ ಸಮೀಕ್ಷೆ ಆಗಿರುವ ಸಾಧ್ಯತೆ ಇದೆ. ನವೆಂಬರ್ 10ರವರೆಗೆ ಆನ್‌ಲೈನ್ ಮೂಲಕ ಗಣತಿಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ಮಾಹಿತಿ ನೀಡಿದೆ.

ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ
ಜಾತಿ ಗಣತಿ
ಪ್ರಸನ್ನ ಹೆಗಡೆ
|

Updated on:Oct 31, 2025 | 7:53 PM

Share

ಬೆಂಗಳೂರು, ಅಕ್ಟೋಬರ್​ 31: ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ (Caste Census) ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ ಶೇ.97.51 (ಜಿಬಿಎ ಹೊರತುಪಡಿಸಿ)ರಷ್ಟು ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.

ರಾಜ್ಯಾದ್ಯಂತ 6.13 ಕೋಟಿ ಜನರ ಸಮೀಕ್ಷೆ

ಜಿಬಿಎ ಹೊರತುಪಡಿಸಿ 1.48 ಕೋಟಿ ಕುಟುಂಬಗಳ ಪೈಕಿ 1.46 ಕೋಟಿ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆದಿದೆ. 5.68 ಕೋಟಿ ಜನಸಂಖ್ಯೆ ಪೈಕಿ 5.54 ಕೋಟಿ ಜನರ ಗಣತಿ ಪೂರ್ಣಗೊಂಡಿದೆ. ಜಿಬಿಎ ವ್ಯಾಪ್ತಿಯಲ್ಲಿ 59 ಲಕ್ಷ ಜನರ ಸಮೀಕ್ಷೆ ಆಗಿರುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ 6.13 ಕೋಟಿ ಜನರ ಸರ್ವೇ ಆಗಿರಬಹುದೆಂದು ತಿಳಿಸಲಾಗಿದೆ. 1.22 ಲಕ್ಷ ಸಿಬ್ಬಂದಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯ ನಡೆದಿದೆ. ಸಮೀಕ್ಷೆಯಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಲು ಇನ್ನೂ ಅವಕಾಶವಿದ್ದು, ವದಂತಿಗಳಿಗೆ ಕಿವಿಗೊಡದೆ ಗಣತಿಯಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಸುಧಾ ಮೂರ್ತಿ ದಂಪತಿ ಖಾಸಗಿ ಮಾಹಿತಿ ಬಹಿರಂಗ; ಶಾಸಕ ಸುರೇಶ್​ ಕುಮಾರ್​ ಕಿಡಿ

ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್​ 18ರ ವರೆಗೆ ವಿಸ್ತರಿಸಲಾಗಿತ್ತು. ಆದರೆ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಕುಂಟುತ್ತಾ ಸಾಗುತ್ತಿದ್ದ ಹಿನ್ನಲೆ ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪತ್ರ ಕೂಡ ಬರೆದಿದ್ದರು. ನಿಗದಿತ ಗುರಿ 16 ಮನೆಗಳ ಬದಲು ಸರಾಸರಿ 7-8 ಮನೆಗಳ ಸಮೀಕ್ಷೆ ಆಗುತ್ತಿರುವ ಬಗ್ಗೆ ಗಮನ ಸೆಳೆದಿದ್ದರು. ಅದಾಗಿಯೂ ಬಹುತೇಕ ಮನೆಗಳ ಸರ್ವೇ ಬಾಕಿ ಉಳಿದ ಹಿನ್ನಲೆ ಅವಧಿಯನ್ನ ಮತ್ತೆ ಹೆಚ್ಚಿಸಿ ಅಕ್ಟೋಬರ್ 31ಕ್ಕೆ ಡೆಡ್​ಲೈನ್​ ನೀಡಲಾಗಿತ್ತು. ಇಂದಿಗೆ ಆ ಅವಧಿ ಮುಗಿದ ಹಿನ್ನಲೆ, ಮನೆ ಮನೆಗೆ ತೆರಳಿ ಗಣತಿ ಮಾಡುವ ಕಾರ್ಯವನ್ನ ಅಂತ್ಯಗೊಳಿಸಲಾಗಿದೆ.

ವರದಿ: ಲಕ್ಷ್ಮೀನರಸಿಂಹ, Tv9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:51 pm, Fri, 31 October 25

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ