AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ

ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಯಾದ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ
Pramod Shastri G
| Edited By: Rakesh Nayak Manchi|

Updated on: Oct 14, 2023 | 8:50 AM

Share

ಬೆಂಗಳೂರು, ಅ.14: ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ (Caste Census Report) ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಒಂದೆಡೆ, ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ. ಇದು ರಾಜ್ಯ ಸರ್ಕಾರವು ಒತ್ತಡಕ್ಕೆ ಸಿಲುಕಿಸಿದೆ.

ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಂತೆ ಒಕ್ಕಲಿಗ-ಲಿಂಗಾಯಿತ ವಿರೋಧದ ನಡುವೆ ವರದಿ ಬಿಡುಗಡೆಗೆ ಅತಿ ಹಿಂದುಳಿದ ವರ್ಗಗಳ ಸಂಘ ಪಟ್ಟು ಹಿಡಿದಿದೆ. ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಗ್ಡೆ ಅವರನ್ನು ಭೇಟಿಯಾಗಿದ್ದು, 72 ಜಾತಿಗಳನ್ನ ಹಿಂದುಳಿದವರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಹಿರಂಗಕ್ಕೂ ಮುನ್ನ ಸಿಡಿಯುತ್ತಿದೆ ಪರ-ವಿರೋಧದ ಕಿಡಿ!

ಅಲ್ಲದೆ, ಜಾತಿ ಗಣತಿ ವಿರೋಧಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿಂದುಳಿದವರ್ಗ, ವರದಿ ವಿರೋಧಿಸುವುದು ಸಮಂಜಸವಲ್ಲ. ವರದಿ ಅವೈಜ್ಞಾನಿಕ ಎಂಬುದಕ್ಕೆ ಯಾವುದೇ ಆಧಾರವೇ ಇಲ್ಲ. ವರದಿ ಯಾರು ನೋಡದೇ ಸರಿ ಇಲ್ಲ ಅನ್ನೋದು ಹೇಗೇ? ಎಂದು ಪ್ರಶ್ನಿಸಿದೆ.

ಸರ್ಕಾರ ವರದಿ ಬಿಡುಗಡೆ ಮಾಡಿದ ಬಳಿಕ ಚರ್ಚೆಗೆ ಬಿಡಲಿ. ಸಾಧಕ-ಬಾಧಕಗಳ ಚರ್ಚೆಯಾದರೆ ಸಮಾಜಕ್ಕೂ ಸ್ಪಷ್ಟತೆ ಸಿಗಲಿದೆ. ಆಕ್ಷೇಪವಿದ್ದರೆ ಸರ್ಕಾರಕ್ಕೆ ವಿವರವಾಗಿ ಸಲ್ಲಿಸಲಿ. ಜಾತಿ ಗಣತಿ ಬಗ್ಗೆ ಆಕ್ಷೇಪಗಳಿದ್ದರೆ ಬಿಡುಗಡೆ ಬಳಿಕ ನ್ಯಾಯಾಲಯದಲ್ಲೂ ಪ್ರಶ್ನಿಸಲಿ ಎಂದು ವೇದಿಕೆ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಒಂದು ವೇಳೆ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ವೇಣುಗೋಪಾಲ್, ಈಗ ನೀಡಿರುವ ಮೀಸಲಾತಿಯೇ ಸಂಪೂರ್ಣ ಅವೈಜ್ಞಾನಿಕವಾಗಿದೆ. ಸಮಾಜಗಳ ಯಾವ ಅಂಕಿಅಂಶಗಳಿಲ್ಲದೇ ಮನಬಂದಂತೆ ಮೀಸಲಾತಿ ನೀಡಲಾಗಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pramod Shastri G
Pramod Shastri G
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ