AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ

ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಈ ನಡುವೆ ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ.

ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದ ಎಚ್ಚರಿಕೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಯಾದ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ
Pramod Shastri G
| Updated By: Rakesh Nayak Manchi|

Updated on: Oct 14, 2023 | 8:50 AM

Share

ಬೆಂಗಳೂರು, ಅ.14: ಕರ್ನಾಟಕ ರಾಜ್ಯದಲ್ಲಿ ಜಾತಿ ಜನಗಣತಿ ವರದಿ (Caste Census Report) ಬಿಡುಗಡೆ ವಿಚಾರವಾಗಿ ಆಡಳಿತ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಒಂದೆಡೆ, ವರದಿ ಬಿಡುಗಡೆಗೆ ಒಕ್ಕಲಿಗ-ಲಿಂಗಾಯಿತ ಸಮುದಾಯದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಒತ್ತಡಕ್ಕೆ ಮಣಿದು ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ. ಇದು ರಾಜ್ಯ ಸರ್ಕಾರವು ಒತ್ತಡಕ್ಕೆ ಸಿಲುಕಿಸಿದೆ.

ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಂತೆ ಒಕ್ಕಲಿಗ-ಲಿಂಗಾಯಿತ ವಿರೋಧದ ನಡುವೆ ವರದಿ ಬಿಡುಗಡೆಗೆ ಅತಿ ಹಿಂದುಳಿದ ವರ್ಗಗಳ ಸಂಘ ಪಟ್ಟು ಹಿಡಿದಿದೆ. ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಗ್ಡೆ ಅವರನ್ನು ಭೇಟಿಯಾಗಿದ್ದು, 72 ಜಾತಿಗಳನ್ನ ಹಿಂದುಳಿದವರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಹಿರಂಗಕ್ಕೂ ಮುನ್ನ ಸಿಡಿಯುತ್ತಿದೆ ಪರ-ವಿರೋಧದ ಕಿಡಿ!

ಅಲ್ಲದೆ, ಜಾತಿ ಗಣತಿ ವಿರೋಧಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿಂದುಳಿದವರ್ಗ, ವರದಿ ವಿರೋಧಿಸುವುದು ಸಮಂಜಸವಲ್ಲ. ವರದಿ ಅವೈಜ್ಞಾನಿಕ ಎಂಬುದಕ್ಕೆ ಯಾವುದೇ ಆಧಾರವೇ ಇಲ್ಲ. ವರದಿ ಯಾರು ನೋಡದೇ ಸರಿ ಇಲ್ಲ ಅನ್ನೋದು ಹೇಗೇ? ಎಂದು ಪ್ರಶ್ನಿಸಿದೆ.

ಸರ್ಕಾರ ವರದಿ ಬಿಡುಗಡೆ ಮಾಡಿದ ಬಳಿಕ ಚರ್ಚೆಗೆ ಬಿಡಲಿ. ಸಾಧಕ-ಬಾಧಕಗಳ ಚರ್ಚೆಯಾದರೆ ಸಮಾಜಕ್ಕೂ ಸ್ಪಷ್ಟತೆ ಸಿಗಲಿದೆ. ಆಕ್ಷೇಪವಿದ್ದರೆ ಸರ್ಕಾರಕ್ಕೆ ವಿವರವಾಗಿ ಸಲ್ಲಿಸಲಿ. ಜಾತಿ ಗಣತಿ ಬಗ್ಗೆ ಆಕ್ಷೇಪಗಳಿದ್ದರೆ ಬಿಡುಗಡೆ ಬಳಿಕ ನ್ಯಾಯಾಲಯದಲ್ಲೂ ಪ್ರಶ್ನಿಸಲಿ ಎಂದು ವೇದಿಕೆ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಒಂದು ವೇಳೆ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಜಾತಿ ಜನಗಣತಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ವೇಣುಗೋಪಾಲ್, ಈಗ ನೀಡಿರುವ ಮೀಸಲಾತಿಯೇ ಸಂಪೂರ್ಣ ಅವೈಜ್ಞಾನಿಕವಾಗಿದೆ. ಸಮಾಜಗಳ ಯಾವ ಅಂಕಿಅಂಶಗಳಿಲ್ಲದೇ ಮನಬಂದಂತೆ ಮೀಸಲಾತಿ ನೀಡಲಾಗಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?