AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Caste census Row: ಜಾತಿಗಣತಿ ತಡೆಗೆ ನಕಾರ, ಕೆಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಆದೇಶ

ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆದಿ ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲ ಷರತ್ತುಗಳನ್ನು ವಿಧಿಸಿದೆ. ಇದರೊಂದಿಗೆ ಕಾನೂನು ಹೋರಾಟದಕ್ಕೆ ರಾಜ್ಯ ಸರ್ಕಾರ ಮೇಲುಗೈ ಸಾಧಿಸಿದಂತಾಗಿದೆ.

Caste census Row: ಜಾತಿಗಣತಿ ತಡೆಗೆ ನಕಾರ, ಕೆಲವು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಆದೇಶ
Karnataka High Court
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 25, 2025 | 5:25 PM

Share

ಬೆಂಗಳೂರು, (ಸೆಪ್ಟೆಂಬರ್ 25): ಹಲವು ಗೊಂದಲಗಳಿಗೆ ಕಾರಣವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ (Caste Census survey) ತಡೆ ನೀಡಲು ಕರ್ನಾಟಕ ಹೈಕೋರ್ಟ್ (Karnataka High Court) ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು (ಸೆಪ್ಟೆಂಬರ್ 25) ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದ್ರೆ,  ಜನರ ದತ್ತಾಂಶದ ಗೌಪ್ಯತೆ ಬಗ್ಗೆ ಸರ್ಕಾರಕ್ಕೆ ಹಾಗೂ ಹಿಂದೂಳಿದ ವರ್ಗಾಗಳ ಆಯೋಗಕ್ಕೆ ಕೆಲವು ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಕೋರ್ಟ್ ವಿಧಿಸಿದ ಷರತ್ತುಗಳೇನು?

ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು. ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಅಲ್ಲದೇ ದತ್ತಾಂಶದ ಗೌಪ್ಯತೆ ಸಂಬಂಧ ಪ್ರಮಾಣಪತ್ರ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಿ ತೆಗೆಯದಂತೆ ಸೂಚಿಸಲು ನಿಮಗಿರುವ ಅಧಿಕಾರವೇನು? ಜಾತಿ ಗಣತಿ ಬಗ್ಗೆ ಕೋರ್ಟ್ ಪ್ರಶ್ನೆ

ನೀವು ಸಂಗ್ರಹಿಸಿರುವ ದತ್ತಾಂಶ ಹೇಗೆ ರಕ್ಷಿಸುತ್ತೀರಿ ಎಂದು ಹೈಕೋರ್ಟ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಇ ಆಡಳಿತ ವಿಭಾಗವೇ ದತ್ತಾಂಶವನ್ನು ರಕ್ಷಿಸುತ್ತದೆ. ಸರ್ಕಾರದ ಅಧಿಕಾರಿಗಳಷ್ಟೇ ನಿಯಂತ್ರಣ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಗೆ ತಡೆ ಕೋರಿ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ರಾಜ್ಯ ಒಕ್ಕಲಿಗರ ಸಂಘ ಮತ್ತು ಇತರರು ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್​​ ಗಳನ್ನು ವಿಚಾರಣೆ ನಡೆಸುದ ಮುಖ್ಯ ನ್ಯಾ.ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠ ಎರಡು ದಿನಗಳ ಕಾಲ ವಾದ ಪ್ರತಿವಾದ ಆಲಿಸಿತ್ತು. ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರು ಹಾಗೂ ಕೇಂದ್ರ ಸರ್ಕಾರ ಪರ ವಕೀಲರು ಸಮೀಕ್ಷೆ ತಡೆ ನೀಡುವಂತೆ ತಮ್ಮದೇ ರೀತಿಯಲ್ಲಿ ಪೀಥದ ಮುಂದೆ ಪ್ರಬಲ ವಾದ ಮಂಡಿಸಿದ್ದರು. ಇನ್ನು ಇದಕ್ಕೆ ರಾಜ್ಯ ಸರ್ಕಾರ ಹಾಗೂ ಹಿಂದೂಳಿದ ವರ್ಗಗಳ ಆಯೋಗದ ಪರ ವಕೀಲರು ಸಹ ಪ್ರಬಲವಾಗಿ ವಾದ ಮಂಡಿಸಿದರು. ಹೀಗೆ ಎರಡು ದಿನಗಳ ಕಾಲ ವಾದ ಪ್ರತಿವಾದ ಆಲಿಸಿದ ಹೈಕೋರ್​ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿದ್ದು, ಜನರು ಗೌಪ್ಯತೆ ಕಾಪಾಡುವಂತೆ ಕೆಲ ಸೂಚನೆಗಳನ್ನು ನೀಡಿ ಮಧ್ಯಂತೆ ಆದೇಶಿಸಿದೆ.

Published On - 4:59 pm, Thu, 25 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್