AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಮನೆ ಸಮೀಕ್ಷೆ ವೇಳೆ ಹಲವರಿಂದ ಮಾಹಿತಿ ನಿರಾಕರಣೆ, ಮತ್ತೊಂದು ಹಂತದ ವಿವರ ಸಂಗ್ರಹಕ್ಕೆ ಮುಂದಾದ ಸರ್ಕಾರ!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಎರಡು ದಿನಗಳ ಹಿಂದಷ್ಟೇ ಮುಕ್ತಾಯಗೊಂಡಿದೆ. ಆನ್​ಲೈನ್​​ನಲ್ಲಿ ಮಾಹಿತಿ ನೀಡಲು ನವೆಂಬರ್​​ 10ರವರೆಗೂ ಕಾಲಾವಕಾಶವಿದೆ. ಆದರೆ ಮನೆ ಮನೆ ಸಮೀಕ್ಷೆ ವೇಳೆ ಒಂದಷ್ಟು ಮಂದಿ ಮಾಹಿತಿ ನೀಡಲು ನಿರಾಕರಿಸಿದ್ದರು. ಈ ಹಿನ್ನಡೆಯನ್ನು ಸರಿದೂಗಿಸಲು ಹಿಂದುಳಿದ ವರ್ಗಗಳ ಆಯೋಗ ಮತ್ತೊಂದು ಪ್ಲಾನ್​ ಮಾಡಿಕೊಂಡಿದೆ. ಏನದು? ಇಲ್ಲಿದೆ ವಿವರ.

ಜಾತಿ ಗಣತಿ: ಮನೆ ಸಮೀಕ್ಷೆ ವೇಳೆ ಹಲವರಿಂದ ಮಾಹಿತಿ ನಿರಾಕರಣೆ, ಮತ್ತೊಂದು ಹಂತದ ವಿವರ ಸಂಗ್ರಹಕ್ಕೆ ಮುಂದಾದ ಸರ್ಕಾರ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Nov 04, 2025 | 7:25 AM

Share

ಬೆಂಗಳೂರು, ನವೆಂಬರ್ 4: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Caste Census) ಕೊನೆಗೂ ಮುಕ್ತಾಯಗೊಂಡಿದ್ದು, ನವೆಂಬರ್​​ 10 ರವರೆಗೆ ಆನ್​ಲೈನ್​ನಲ್ಲಿ ಸ್ವಯಂಪ್ರೇರಿತರಾಗಿ ಭಾಗಿ ಆಗಲು ಅವಕಾಶವಿದೆ. ಮನೆ ಮನೆ ಸಮೀಕ್ಷೆ ವೇಳೆ ಸಾಕಷ್ಟು ಮಂದಿ ಗೊಂದಲ, ರಾಜಕೀಯ ಕೆಸರೆರೆಚಾಟದ ಹಿನ್ನೆಲೆ ಮಾಹಿತಿ ನೀಡಲು ನಿರಾಕರಿಸಿದ್ದರು. ಆದಾಗ್ಯೂ 1.46 ಕೋಟಿ ಕುಟುಂಬಗಳ 6 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಸಮೀಕ್ಷೆ ಕವರ್​​ ಮಾಡಿದೆ. ಇನ್ನು ಮನೆ ಮನೆ ಸಮೀಕ್ಷೆಯಿಂದ ಹೊರಗುಳಿದವರ ಮಾಹಿತಿ ಸಂಗ್ರಹಣೆಗೆ ಸರ್ಕಾರ ಮತ್ತೊಂದು ಪ್ಲಾನ್​ ಮಾಡಿಕೊಂಡಿದೆ.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮಾಹಿತಿ ಪ್ರಕಾರ, ವದಂತಿ, ಊಹಾಪೋಹ, ಹಲವರು ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡಿದ್ದರಿಂದ ಮನೆ ಮನೆ ಸಮೀಕ್ಷೆ ವೇಳೆ ಸಾಕಷ್ಟು ಮಂದಿ ಮಾಹಿತಿ ನೀಡಿಲ್ಲ. ಆದರೆ ಇದು ಸಮೀಕ್ಷೆಗೆ ಯಾವುದೇ ಹಿನ್ನಡೆ ಉಂಟುಮಾಡಿಲ್ಲ.

ಆದಾಗ್ಯೂ ನಾವು ಸರ್ಕಾರಿ ಹಾಗೂ ಖಾಸಗಿ ವಲಯದ ಸಂಘ-ಸಂಸ್ಥೆಗಳಿಂದ, ಅಲ್ಲಿ ಕೆಲಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡುತ್ತಿರುವವರ ಅಗತ್ಯ ಮಾಹಿತಿಯನ್ನು ತರಿಸಿಕೊಳ್ಳುತ್ತೇವೆ. ಈ ಮಾಹಿತಿ ಸಂಗ್ರಹದ ಬಳಿಕ ನಾವು ಕ್ರಾಸ್​ ವೆರಿಫೈ ಮಾಡಿಕೊಳ್ಳಲು ಸಾಧ್ಯವಿದೆ ಅಂತಾ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಮಧುಸೂಧನ್ ನಾಯ್ಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ: ಮನೆ ಮನೆ ಸರ್ವೇ ಅಂತ್ಯ, ಒಟ್ಟು 6.13 ಕೋಟಿ ಜನರ ಸಮೀಕ್ಷೆ

ಒಟ್ಟಾರೆ, ಪರ ವಿರೋಧದ ಬಳಿಕವೂ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿರೀಕ್ಷಿತ ಗುರಿಯನ್ನಂತೂ ತಲುಪಿದೆ. ಆದರೆ ನಾನಾ ನೆಪವೊಡ್ಡಿ ಸಮೀಕ್ಷೆಯಿಂದ ತಪ್ಪಿಸಿಕೊಂಡವರ ಮಾಹಿತಿ ಸಂಗ್ರಹಕ್ಕೆ ಹಿಂದುಳಿದ ವರ್ಗಗಳ ಆಯೋಗ ಪ್ಲಾನ್​ ಬಿ ಕೂಡ ಮಾಡಿಕೊಂಡಿದೆ. ಅಂತಿಮವಾಗಿ ಸಮೀಕ್ಷೆಯ ವರದಿ ಡಿಸೆಂಬರ್​ ಹೊತ್ತಿಗೆ ಸರ್ಕಾರದ ಕೈಸೇರುವ ಸಾಧ್ಯತೆ ಇದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Tue, 4 November 25

Follow Us
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್