Karnataka Caste Census Resurvey: ಸೆ.22ರಿಂದ ಮರು ಜಾತಿಗಣತಿಗೆ ನಿರ್ಧರಿಸಿದ ರಾಜ್ಯ ಸರ್ಕಾರ: ಸಿಎಂ ಸಭೆಯ ಮುಖ್ಯಾಂಶಗಳು ಇಲ್ಲಿದೆ

Karnataka caste census resurvey: ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ ವರದಿ ಕರ್ನಾಟಕದಲ್ಲಿ ಕಿಚ್ಚುಹೊತ್ತಿಸಿದೆ. ಈ ಸಂಬಂಧ ಹೈಕಮಾಂಡ್​ ಸಲಹೆ ಮೇರೆಗೆ ಸಿದ್ದರಾಮಯ್ಯ ಸರ್ಕಾರ ಇದೀಗ ಮರು ಜಾತಿಗಣತಿ ನಡೆಸಲು ತೀರ್ಮಾಣಿಸಿದೆ. ಈ ಸಂಬಂಧ ಇಂದು (ಜುಲೈ 23) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಭೆ ಅಂತ್ಯವಾಗಿದ್ದು, ವೈಜ್ಞಾನಿಕವಾಗಿ ಜಾತಿಗಣತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ವಿವರ ಈ ಕೆಳಗಿನಂತಿದೆ.

Karnataka Caste Census Resurvey:  ಸೆ.22ರಿಂದ ಮರು ಜಾತಿಗಣತಿಗೆ ನಿರ್ಧರಿಸಿದ ರಾಜ್ಯ ಸರ್ಕಾರ: ಸಿಎಂ ಸಭೆಯ ಮುಖ್ಯಾಂಶಗಳು ಇಲ್ಲಿದೆ
Caste Census Resurvey Meeting
Edited By:

Updated on: Jul 23, 2025 | 3:39 PM

ಬೆಂಗಳೂರು, (ಜುಲೈ23): ಭಾರೀ ವಿವಾದಕ್ಕೆ ಗುರಿಯಾಗಿರುವ ಕಾಂತರಾಜು ಆಯೋಗ ಜಾತಿಗಣತಿ ವರದಿಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ್ದು,  ಬದಲಿಗೆ ಮರು ಜಾತಿಗಣತಿ (caste census resurvey) ಮಾಡುವಂತೆ ಸೂಚಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸಹ ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ಇಂದು (ಜುಲೈ 23) ಸಂಬಂಧ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ಮಾಡಿದ್ದು, ಜಾತಿ ಜನಗಣತಿ ಮರು ಸಮೀಕ್ಷೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧರಿಸಲಾಗಿದ್ದು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

ನಾಳೆ ಅಧೀಕೃತ ಅಧಿಸೂಚನೆ

ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಾಳೆ (ಜುಲೈ 24) ಅಧಿಸೂಚನೆ ಹೊರಡಿಸಲಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಹೊಸ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆ ಮಾದರಿ, ರೂಪರೇಷೆ, ಕಾಲಾವಧಿ ಬಗ್ಗೆ ನಾಳೆ ಪ್ರಕಟವಾಗಿದೆ.

ಇದನ್ನೂ ಓದಿ: ಜಾತಿ ಜನಗಣತಿ ಮರು ಸರ್ವೇಗೆ ಕಾರಣಗಳೇನು? ಅಚ್ಚರಿ ಮೂಡಿಸಿದ ಕೈ ಹೈಕಮಾಂಡ್ ನಿರ್ಧಾರ..!

ವೈಜ್ಞಾನಿಕವಾಗಿ ಜಾತಿಗಣತಿಗೆ ಸಿಎಂ ಖಡಕ್ ಸೂಚನೆ

ಇದನ್ನೂ ಓದಿ
ಜಾತಿ ಗಣತಿ: ಕಾಂಗ್ರೆಸ್ ಹೈಕಮಾಂಡ್ ನಡೆ ಸ್ವಾಗತಿಸಿದ ಕರ್ನಾಟಕ ವೀರಶೈವ ಮಹಾಸಭ
ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ:ಸಿದ್ದರಾಮಯ್ಯ ಮಹತ್ವದ ಘೋಷಣೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ಜಾರಿ ಮಾಡಿದ್ರೆ ಸರ್ಕಾರ ಬೀಳಿಸುತ್ತೇವೆ: ಒಕ್ಕಲಿಗರಿಂದ ಎಚ್ಚರಿಕೆ

ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮದುಸೂದನ್ ನಾಯಕ್ ಅವರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಮರು ಜಾತಿಗಣತಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಪಕ್ಷಗಳ ಟೀಕೆ ಬೆನ್ನಲ್ಲೇ ಸಿದ್ದರಾಮಯ್ಯ, ವೈಜ್ಞಾನಿಕವಾಗಿ ಜಾತಿಗಣತಿ ಮಾಡಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಮಠಾಧೀಶರು, ಪ್ರಬಲ ಸಮುದಾಯಗಳ ವಿರೋಧ ಬೆನ್ನಲ್ಲೇ ಕಾಂಗ್ರೆಸ್​ ಹೈಕಮಾಂಡ್ ಮರು ಜಾತಿ ಗಣತಿ ವರದಿ ಮಅಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಈಗ ಸಿದ್ದರಾಮಯ್ಯ ಮರು ಜಾತಿ ಗಣತಿಗೆ ಚಾಲನೆ ಕೊಟ್ಟಿದ್ದು, ವೈಜ್ಞಾನಿಕವಾಗಿ ಜಾತಿಗಣತಿ ಮಾಡುವಂತೆ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಮಾನವ ಸಂಪನ್ಮೂಲ ಜೊತೆಗೆ ಆಧುನಿಕ ತಂತ್ರಜ್ಞಾನ ಬಳಕೆ ಸೂಚನೆ ನೀಡಿರುವ ಸಿಎಂ, ಲೋಪದೋಷ ಆಗದಂತೆ ಈ ಬಗ್ಗೆ ಕ್ರಮ ವಹಿಸಲು ತಿಳಿಸಿದ್ದಾರೆ.

ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿಯಾಗಬೇಕು

ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆಗಳನ್ನ ನೀಡಿದ್ದಾರೆ.

ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಬಜೆಟ್ ಸಿದ್ಧಪಡಿಸುವ ವೇಳೆ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ಹೇಳಿದರು.

ಪುರ್ವಭಾವಿ ಸಭೆಯ ಮುಖ್ಯಾಂಶಗಳು

  • ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು.
  • ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ.
  • ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು.
  • ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದ್ದು, ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು.
  • ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ಮಾಡಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
  • ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ.
  • ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ.
  • ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು.
  • ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.
  • ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆ ಇದ್ದು, ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು.
  • ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು .
  • ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು.

Published On - 3:17 pm, Wed, 23 July 25