ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಜಾತಿ ಸಮೀಕ್ಷೆ: ಕರ್ನಾಟಕದಲ್ಲಿ ಶೇ 63ರಷ್ಟು ಪೂರ್ಣ

ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೊನೆಯ ಹಂತಕ್ಕೆ ತಲುಪಿದಂತಿದೆ. ಇದುವರೆಗೆ ರಾಜ್ಯದಲ್ಲಿ 90.61 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಒಟ್ಟಾರೆ ಶೇ.63ರಷ್ಟು ಸಮೀಕ್ಷೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದೂಳಿದ ವರ್ಗಗಳ ಆಯೋಗ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಜಾತಿ ಸಮೀಕ್ಷೆ: ಕರ್ನಾಟಕದಲ್ಲಿ ಶೇ 63ರಷ್ಟು ಪೂರ್ಣ
ಪ್ರಾತಿನಿಧಿಕ ಚಿತ್ರ

Updated on: Oct 03, 2025 | 9:37 PM

ಬೆಂಗಳೂರು, ಅಕ್ಟೋಬರ್​ 03: ಕರ್ನಾಟಕ ರಾಜ್ಯ ಹಿಂದೂಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರುಫ್​ ಜಾತಿ ಗಣತಿ (Caste Survey) ರಾಜ್ಯದಲ್ಲಿ (Karnataka) ಈವರೆಗೆ ಶೇ.63ರಷ್ಟು ಸಮೀಕ್ಷೆ ಆಗಿದೆ. ಒಟ್ಟು 90 ಲಕ್ಷದ 61 ಸಾವಿರದ 880 ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 7ಕ್ಕೆ ಸಮೀಕ್ಷೆ ಅಂತ್ಯ

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭಿಸಲಾಗಿತ್ತು. ಆರಂಭದಲ್ಲಿ ಗೊಂದಲದ ಬೆಟ್ಟವಾಗಿದ್ದ ಸಮೀಕ್ಷೆ ಕಾರ್ಯ ಬಳಿಕ ಸಮಸ್ಯೆಗಳನ್ನ ಸರಿಪಡಿಸಿಕೊಂಡು ಸಾಗಿತ್ತು. ಸದ್ಯ ಈವರೆಗೆ ರಾಜ್ಯದಲ್ಲಿ 90 ಲಕ್ಷ ಮನೆಗಳು ಸರ್ವೆ ಮುಕ್ತಾಯವಾಗಿದೆ. ಅಕ್ಟೋಬರ್ 7ಕ್ಕೆ ಸಮೀಕ್ಷೆ ಮುಗಿಯಲಿದೆ. ಆ ಮೂಲಕ ಜಾತಿಗಣತಿ ಸರ್ವೆ ಕಾರ್ಯ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ.

ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದ ಸಿಎಂ ಸಿದ್ದರಾಮಯ್ಯ 

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ
Caste census: 5 ದಿನಗಳಲ್ಲಿ ಜಾತಿ ಗಣತಿ ಮುಗಿಸಿದ ಶಿಕ್ಷಕಿ!
ಜಾತಿಗಣತಿ ವೇಳೆ ಮಾಹಿತಿ ನೀಡೋದು ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ
ಜಾತಿ ಗಣತಿ: ಸಿಎಂಗೆ ಸಿ.ಟಿ. ರವಿ ಬರೆದ ಬಹಿರಂಗ ಪತ್ರದಲ್ಲೇನಿದೆ?
ಜಾತಿ ಗಣತಿ: ಒಬಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುತ್ತೇವೆಂದ ಡಿಕೆಶಿ

ಬೆಂಗಳೂರಲ್ಲಿ ಶನಿವಾರದಿಂದ ಜಾತಿಗಣತಿ ಆರಂಭ

ಇನ್ನು ಶನಿವಾರದಿಂದ ಬೆಂಗಳೂರಲ್ಲಿ ಸರ್ವೆ ಕಾರ್ಯ ಶುರುವಾಗಲಿದೆ. ಟೌನ್ ಹಾಲ್​ನಲ್ಲಿ ಇಂದು ಗಣತಿದಾರರಿಗೆ ಅಂತಿಮ ಹಂತದ ತರಬೇತಿ ನೀಡಲಾಗಿದೆ. ವೆಬ್ ಸೈಟ್​ನಲ್ಲಿ ಹೇಗೆ ಮಾಹಿತಿ ಅಪ್ ಲೋಡ್ ಮಾಡಬೇಕು, ಹೇಗೆ ಸಮೀಕ್ಷೆ ಮಾಡಬೇಕು ಅಂತಾ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜಾತಿಗಣತಿಯಲ್ಲಿ ಭಾಗವಹಿಸದಿರುವುದು ಉತ್ತಮ: ಹಿರಿಯ ನ್ಯಾಯವಾದಿ ಬಿವಿ ಆಚಾರ್ಯ ಹೀಗೆ ಹೇಳಿದ್ದೇಕೆ?

ವಿವಿಧ ಇಲಾಖೆಯ ಸುಮಾರು 17 ಸಾವಿರ ಸಿಬ್ಬಂದಿ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಪ್ರತಿ ವಾರ್ಡ್​ಗೆ ತಲಾ 70 ರಿಂದ 80 ಸಮೀಕ್ಷಕರ ನೇಮಕಕ್ಕೆ ಪ್ಯ್ಲಾನ್​ ಮಾಡಲಾಗಿದೆ. ಬೆಸ್ಕಾಂ ಸಿಬ್ಬಂದಿ ಮಾಡಿರುವ ಜಿಯೋಟ್ಯಾಗ್ ಆಧರಿಸಿ ಸಮೀಕ್ಷೆ ಮಾಡಲಾಗುತ್ತದೆ. ಆರೋಗ್ಯ ಸಮಸ್ಯೆ ಇರುವವರು, ವಿಶೇಷಚೇತನರಿಗೆ ಸಮೀಕ್ಷೆಯಿಂದ ವಿನಾಯತಿ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:23 pm, Fri, 3 October 25