ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!

Karnataka Caste Census Report: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂತರಾಜ್​ ಅವರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಒಟ್ಟು 200 ಪುಟ ಹಾಗೂ 48 ಸಂಪುಟಗಳ ವರದಿಯನ್ನು ಹಸ್ತಾಂತರ ಮಾಡಿದ್ದು, ಯಾವ ಸಮುದಾಯದಲ್ಲಿ ಎಷ್ಟು ಜನಸಂಖ್ಯೆ ಇದೆ? ಯಾವ ಸಮುದಾಯ ಅತಿ ಹಿಂದೂಳಿದಿದೆ? ಎನ್ನುವ ವರದಿಯ ಅಂಶ ಇಲ್ಲಿದೆ.

ಜಾತಿಗಣತಿ ವರದಿಯಲ್ಲಿ ಜನಸಂಖ್ಯೆ ಬಹಿರಂಗ: ಎಸ್ಸಿ ಫಸ್ಟ್‌, ಕುರುಬ ಜನಾಂಗವೇ ಅತಿ ಹಿಂದುಳಿದ ವರ್ಗ!
ಜಾತಿಗಣತಿ ವರದಿ ಸಲ್ಲಿಕೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Feb 29, 2024 | 6:40 PM

ಬೆಂಗಳೂರು, (ಫೆಬ್ರವರಿ 29): ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ಜಾತಿ ಗಣತಿ ವರದಿಯನ್ನು (Caste Census report) ರಾಜ್ಯ ಸರ್ಕಾರ ಅಧಿಕೃತವಾಗಿ ಸ್ವೀಕಾರ ಮಾಡಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಿಎಂ ಸಿದ್ದರಾಮಯ್ಯನವರಿಗೆ ವರದಿ ಹಸ್ತಾಂತರಿಸಿದ್ದು, ಇದೀಗ ವರದಿಯ ಕೆಲವು ಅಂಶಗಳು ಸೋರಿಕೆಯಾಗಿವೆ. ಇದರ ಅನ್ವಯ ಒಟ್ಟು 6 ಕೋಟಿ ಕನ್ನಡಿಗರಲ್ಲಿ ಯಾವ ಜಾತಿ ಹಾಗೂ ಧರ್ಮದವರು ಎಷ್ಟು ಮಂದಿ ಇದ್ದಾರೆ ಎಂಬ ಅಂಕಿ-ಸಂಖ್ಯೆಯೂ ಬಹಿರಂಗವಾಗಿದೆ. ಪ್ರಬಲ ಸಮುದಾಯಗಳಿಗಿಂತ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ (ಅಹಿಂದ ವರ್ಗ) ಜನಸಂಖ್ಯೆಯೇ ಅಧಿಕವಾಗಿದ್ದಾರೆ ಎಂದು ವರದಿ ತಿಳಿಸಿದೆ.

ಯಾವ ಸಮುದಾಯ ಎಷ್ಟನೇ ಸ್ಥಾನ?

ವರದಿಯ ಅನ್ವಯ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ ) ಸಮುದಾಯ ಅತಿ ಹೆಚ್ಚು ಜನಸಂಖ್ಯೆ (1.08 ಕೋಟಿ) ಹೊಂದಿದೆ. ಇದರೊಂದಿಗೆ ರಾಜ್ಯದ ದೊಡ್ಡ ಸಮುದಾಯಗಳಲ್ಲಿ ಪರಿಶಿಷ್ಟ ಜಾತಿ ಪ್ರಥಮ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ (Muslim Community) ಇದೆ. ಇನ್ನು ಲಿಂಗಾಯತ (Lingayat) ಮತ್ತು ಒಕ್ಕಲಿಗ ಸಮುದಾಯ (Okkaliga Community) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ.

ಇದನ್ನೂ ಓದಿ: Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ, ವರದಿಯಲ್ಲಿ ಏನೇನಿದೆ?

ಅತಿ ಹಿಂದುಳಿದ ಸಮುದಾಯ ಯಾವುದು?

ಒಟ್ಟು 5.98 ಕೋಟಿ ಜನ ಸಮೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 32 ಲಕ್ಷ ಜನ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ. ಮೂಲಗಳ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯದ ಒಟ್ಟಾರೆ ಜನಸಂಖ್ಯೆ 5.98 ಕೋಟಿ. ಈ ಪೈಕಿ ಅಹಿಂದ ವರ್ಗದವರು 3.96 ಕೋಟಿಯಷ್ಟಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣ ಹಾಗೂ ಇತರರ ಸಂಖ್ಯೆ 1.87 ಕೋಟಿಯಷ್ಟಿದೆ.

ಒಟ್ಟು 816 ಇತರ ಹಿಂದುಳಿದ ಜಾತಿಗಳೆಂದು ಗುರುತಿಸಲಾಗಿದೆ. ಒಟ್ಟು 1,351 ಜಾತಿಗಳನ್ನು ಸಮೀಕ್ಷೆಯಡಿ ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ಹೊಸದಾಗಿ 192 ಜಾತಿಗಳನ್ನು ದಾಖಲಿಸಲಾಗಿದೆ. 10ಕ್ಕಿಂತ ಕಡಿಮೆ ಜನಸಂಖ್ಯೆ ಇರುವ 80 ಜಾತಿಗಳ ಹೆಸರನ್ನು ವರದಿಯಲ್ಲಿ ದಾಖಲಿಸಲಾಗಿದೆ. ಸುಮಾರು 30 ಜಾತಿಗಳು ಅತ್ಯಂತ ಹಿಂದುಳಿದ ಜಾತಿ ವರ್ಗದಡಿ ಸೇರಲಿವೆ.

ಜಾತಿವಾರು ಜನಸಂಖ್ಯೆಯ ವಿವರ

  • ಪರಿಶಿಷ್ಟ ಜಾತಿ(ಎಸ್’ಸಿ)- 1.08 ಕೋಟಿ ಜನಸಂಖ್ಯೆ ಹೊಂದಿದೆ.
  • ಮುಸ್ಲಿಂ- 70 ಲಕ್ಷ ಜನಸಂಖ್ಯೆ
  • ಲಿಂಗಾಯತ- 65 ಲಕ್ಷ ಜನಸಂಖ್ಯೆ
  • ಒಕ್ಕಲಿಗ- 60 ಲಕ್ಷ ಜನಸಂಖ್ಯೆ
  • ಕುರುಬರು- 45 ಲಕ್ಷ ಜನಸಂಖ್ಯೆ
  • ಈಡಿಗ- 15 ಲಕ್ಷ ಜನಸಂಖ್ಯೆ
  • ಪರಿಶಿಷ್ಟ ಪಂಗಡ (ಎಸ್‌ಟಿ)- 40.45 ಲಕ್ಷ ಜನಸಂಖ್ಯೆ
  • ವಿಶ್ವಕರ್ಮ- 15
  • ಬೆಸ್ತ- 15 ಲಕ್ಷ
  • ಬ್ರಾಹ್ಮಣ- 14 ಲಕ್ಷ
  • ಗೊಲ್ಲ (ಯಾದವ) – 10 ಲಕ್ಷ
  • ಮಡಿವಾಳ ಸಮಾಜ – 6
  • ಅರೆ ಅಲೆಮಾರಿ – 6 ಲಕ್ಷ
  • ಕುಂಬಾರ – 5 ಲಕ್ಷ
  • ಸವಿತಾ ಸಮಾಜ – 5 ಲಕ್ಷ

ವರದಿಯ ಹೈಲೈಟ್ಸ್

  • ಒಟ್ಟು 5.98 ಕೋಟಿ ಮಂದಿಯ ಸಮೀಕ್ಷೆ
  • ಸಮೀಕ್ಷೆಯಿಂದ ಹೊರಗುಳಿದವರ ಪ್ರಮಾಣ 32 ಲಕ್ಷ
  • ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ
  • ಕರ್ನಾಟಕದಲ್ಲಿ ದಲಿತರ ಪ್ರಮಾಣವೇ ಹೆಚ್ಚು
  • ಕುರುಬರೇ ಅತ್ಯಂತ ಹಿಂದುಳಿದ ವರ್ಗ
  • ಸಮೀಕ್ಷೆಗೊಳಪಟ್ಟ ಜಾತಿಗಳ ಸಂಖ್ಯೆ 1,351
  • ಹೊಸದಾಗಿ ದಾಖಲಾದ ಜಾತಿಗಳ ಸಂಖ್ಯೆ 192
  • ಸರ್ಕಾರ ಗುರುತಿಸಿರುವ ಇತರೆ ಹಿಂದುಳಿದ ಜಾತಿಗಳು‌ (ಒಬಿಸಿ) 816.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:21 pm, Thu, 29 February 24

ತಾಜಾ ಸುದ್ದಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್