AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿರುವುದರಿಂದ ಪಶುಸಂಗೋಪನಾ ಇಲಾಖೆ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ
ಚರ್ಮಗಂಟು ರೋಗ
TV9 Web
| Edited By: |

Updated on:Oct 13, 2022 | 8:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಜಾನುವಾರುಗಳಿಗೆ ಚರ್ಮಗಂಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಂತೆ ಹಾಗೂ ಸಾಗಣೆ ನಿಷೇಧಿಸಲಾಗಿದೆ.

ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ಪಶುಸಂಗೋಪನಾ ಇಲಾಖೆ ಇಂದು(ಅಕ್ಟೋಬರ್ 13) ಮಹತ್ವದ ಸೂಚನೆ ನೀಡಿದೆ. ಜಾನುವಾರುಗಳಲ್ಲಿ ಚರ್ಮಗಂಟು ನಿಯಂತ್ರಣಕ್ಕೆ ಪಶುಸಂಗೋಪನಾ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.

Lumpy Skin Disease: ಕರ್ನಾಟಕದಲ್ಲಿಯೂ ಚರ್ಮಗಂಟು ರೋಗ ಉಲ್ಬಣ, ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಜಾನುವಾರುಗಳ ಸಂತೆಯನ್ನ ರದ್ದುಪಡಿಸಿದೆ.

ಈ ಚರ್ಮ ಗಂಟು ರೋಗ ಹಸು ಮತ್ತು ಎಮ್ಮೆಗಳಲ್ಲಿ ತೀವ್ರವಾಗಿ ಕಾಣಿಸಿಕೊಂಡಿದ್ದು, ಹೆಚ್ಚು ಹರಡುವ ಸಾಧ್ಯತೆ ಇರುವುದರಿಂದ ಸಾಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೇಗೆ ಹರಡುತ್ತದೆ?

ರೋಗಪೀಡಿತ ಜಾನುವಾರುಗಳ ಬಾಯಿ, ಮೂಗಿನಿಂದ ಸುರಿಯುವ ಲೋಳೆಯಂತಹ ದ್ರವ ಬಿದ್ದ ಕಡೆ ಆರೋಗ್ಯವಂತ ರಾಸುಗಳು ಆಹಾರ ಸೇವಿಸಿದರೆ ರೋಗ ಹರಡುತ್ತದೆ. ಜಾನುವಾರುಗಳು ಕುಡಿಯುವ ನೀರಿನಲ್ಲಿ ರೋಗ ಬಂದ ಹಸುವಿನ ಜೊಲ್ಲು, ಇತರ ದ್ರವ ಸೇರಿದ್ದರೂ ರೋಗ ಹರಡುತ್ತದೆ. ರೋಗಪೀಡಿತ ಆಕಳಿನ ಸಂಪರ್ಕದ ಕೀಟ, ನೋಣ, ಸೊಳ್ಳೆ ಇತರ ಜಾನುವಾರುಗಳಿಗೆ ಕಡಿದಾಗಲೂ ರೋಗ ಹರಡುತ್ತದೆ.

ರೋಗ ಲಕ್ಷಣಗಳು

ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ. ವಾರಗಟ್ಟಲೆ ಜ್ವರ ಇರುವುದರೊಂದಿಗೆ ಹಾಲು ನೀಡುವ ಪ್ರಮಾಣವೂ ಕಡಿಮೆಯಾಗುತ್ತದೆ. ಈ ರೋಗವು ಮನುಷ್ಯರಿಗೆ, ಕುರಿ, ಮೇಕೆಗಳಿಗೆ ಹರಡುವುದಿಲ್ಲ. ಆದರೆ ಹಸು-ದತ್ತುಗಳಿಗೆ ಮಾತ್ರ ಜೀವಕಂಟಕವಾಗಬಲ್ಲದು.

Published On - 8:07 pm, Thu, 13 October 22

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ