AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿರುವುದರಿಂದ ಪಶುಸಂಗೋಪನಾ ಇಲಾಖೆ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಚರ್ಮಗಂಟು ರೋಗ ಆತಂಕ: ಕರ್ನಾಟಕದಾದ್ಯಂತ ಜಾನುವಾರು ಸಂತೆ, ಸಾಗಣೆ ನಿಷೇಧ
ಚರ್ಮಗಂಟು ರೋಗ
TV9 Web
| Edited By: |

Updated on:Oct 13, 2022 | 8:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಜಾನುವಾರುಗಳಿಗೆ ಚರ್ಮಗಂಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಂತೆ ಹಾಗೂ ಸಾಗಣೆ ನಿಷೇಧಿಸಲಾಗಿದೆ.

ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ಪಶುಸಂಗೋಪನಾ ಇಲಾಖೆ ಇಂದು(ಅಕ್ಟೋಬರ್ 13) ಮಹತ್ವದ ಸೂಚನೆ ನೀಡಿದೆ. ಜಾನುವಾರುಗಳಲ್ಲಿ ಚರ್ಮಗಂಟು ನಿಯಂತ್ರಣಕ್ಕೆ ಪಶುಸಂಗೋಪನಾ ಇಲಾಖೆ ಈ ಕ್ರಮ ತೆಗೆದುಕೊಂಡಿದೆ.

Lumpy Skin Disease: ಕರ್ನಾಟಕದಲ್ಲಿಯೂ ಚರ್ಮಗಂಟು ರೋಗ ಉಲ್ಬಣ, ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು

ಜಾನುವಾರುಗಳಿಗೆ ಚರ್ಮಗಂಟು ರೋಗ ವಿಪರೀತವಾಗಿ ಹಬ್ಬುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಜಾನುವಾರುಗಳ ಸಂತೆಯನ್ನ ರದ್ದುಪಡಿಸಿದೆ.

ಈ ಚರ್ಮ ಗಂಟು ರೋಗ ಹಸು ಮತ್ತು ಎಮ್ಮೆಗಳಲ್ಲಿ ತೀವ್ರವಾಗಿ ಕಾಣಿಸಿಕೊಂಡಿದ್ದು, ಹೆಚ್ಚು ಹರಡುವ ಸಾಧ್ಯತೆ ಇರುವುದರಿಂದ ಸಾಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೇಗೆ ಹರಡುತ್ತದೆ?

ರೋಗಪೀಡಿತ ಜಾನುವಾರುಗಳ ಬಾಯಿ, ಮೂಗಿನಿಂದ ಸುರಿಯುವ ಲೋಳೆಯಂತಹ ದ್ರವ ಬಿದ್ದ ಕಡೆ ಆರೋಗ್ಯವಂತ ರಾಸುಗಳು ಆಹಾರ ಸೇವಿಸಿದರೆ ರೋಗ ಹರಡುತ್ತದೆ. ಜಾನುವಾರುಗಳು ಕುಡಿಯುವ ನೀರಿನಲ್ಲಿ ರೋಗ ಬಂದ ಹಸುವಿನ ಜೊಲ್ಲು, ಇತರ ದ್ರವ ಸೇರಿದ್ದರೂ ರೋಗ ಹರಡುತ್ತದೆ. ರೋಗಪೀಡಿತ ಆಕಳಿನ ಸಂಪರ್ಕದ ಕೀಟ, ನೋಣ, ಸೊಳ್ಳೆ ಇತರ ಜಾನುವಾರುಗಳಿಗೆ ಕಡಿದಾಗಲೂ ರೋಗ ಹರಡುತ್ತದೆ.

ರೋಗ ಲಕ್ಷಣಗಳು

ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುತ್ತವೆ. ವಾರಗಟ್ಟಲೆ ಜ್ವರ ಇರುವುದರೊಂದಿಗೆ ಹಾಲು ನೀಡುವ ಪ್ರಮಾಣವೂ ಕಡಿಮೆಯಾಗುತ್ತದೆ. ಈ ರೋಗವು ಮನುಷ್ಯರಿಗೆ, ಕುರಿ, ಮೇಕೆಗಳಿಗೆ ಹರಡುವುದಿಲ್ಲ. ಆದರೆ ಹಸು-ದತ್ತುಗಳಿಗೆ ಮಾತ್ರ ಜೀವಕಂಟಕವಾಗಬಲ್ಲದು.

Published On - 8:07 pm, Thu, 13 October 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?