AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾರೋಷವಾಗಿ ಎಂಟ್ರಿಕೊಟ್ಟ ಖದೀಮನನ್ನು ಬೆನ್ನಟ್ಟಿ ಹಿಡಿದ ಮಹಿಳೆ

ಬೆಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನನ್ನ ಮಹಿಳೆಯೊಬ್ಬರು ಬೆನ್ನಟ್ಟಿ ಹಿಡಿದ ಘಟನೆ ವೈಟ್ ಫೀಲ್ಡ್​ನಲ್ಲಿ ನಡೆದಿದೆ. ಕಳೆದ ಡಿಸೆಂಬರ್ 5 ರಂದು ಬಾಲಾಜಿ ಸರೋವರ ಅಪಾರ್ಟ್ ಮೆಂಟ್​ಗೆ ವೆಂಕಟಸ್ವಾಮಿ ಎಂಬ ಖದೀಮ ನುಗ್ಗಿದ್ದಾನೆ. ಮಹಿಳೆ ಡೋರ್ ಲಾಕ್‌ ಮಾಡದೇ ಇರೋದನ್ನ ಗಮನಿಸಿ ಒಳನುಗ್ಗಿದ್ದ ಕಳ್ಳ, ಯಾರು ಇಲ್ಲ ಅಂತ ರೂಂ ಒಳಗೇ ಎಂಟ್ರಿ ಕೊಟ್ಟಿದ್ದಾನೆ. ಆದರೆ ಮನೆಯ ಕಿಚನ್ ನಲ್ಲಿ ಮಹಿಳೆ ಅಡುಗೆ ಮಾಡುತ್ತಿದ್ದಳು, ಮತ್ತೊಂದು ರೂಂನಲ್ಲಿ ಮಹಿಳೆಯ ಮಗ ಮಲಗಿದ್ದ. ಇದನ್ನು ತಿಳಿಯದ ಕಳ್ಳ ಒಳಗೆ ಬಂದು […]

ರಾಜಾರೋಷವಾಗಿ ಎಂಟ್ರಿಕೊಟ್ಟ ಖದೀಮನನ್ನು ಬೆನ್ನಟ್ಟಿ ಹಿಡಿದ ಮಹಿಳೆ
ಸಾಧು ಶ್ರೀನಾಥ್​
|

Updated on: Dec 13, 2019 | 3:14 PM

Share

ಬೆಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನನ್ನ ಮಹಿಳೆಯೊಬ್ಬರು ಬೆನ್ನಟ್ಟಿ ಹಿಡಿದ ಘಟನೆ ವೈಟ್ ಫೀಲ್ಡ್​ನಲ್ಲಿ ನಡೆದಿದೆ. ಕಳೆದ ಡಿಸೆಂಬರ್ 5 ರಂದು ಬಾಲಾಜಿ ಸರೋವರ ಅಪಾರ್ಟ್ ಮೆಂಟ್​ಗೆ ವೆಂಕಟಸ್ವಾಮಿ ಎಂಬ ಖದೀಮ ನುಗ್ಗಿದ್ದಾನೆ. ಮಹಿಳೆ ಡೋರ್ ಲಾಕ್‌ ಮಾಡದೇ ಇರೋದನ್ನ ಗಮನಿಸಿ ಒಳನುಗ್ಗಿದ್ದ ಕಳ್ಳ, ಯಾರು ಇಲ್ಲ ಅಂತ ರೂಂ ಒಳಗೇ ಎಂಟ್ರಿ ಕೊಟ್ಟಿದ್ದಾನೆ.

ಆದರೆ ಮನೆಯ ಕಿಚನ್ ನಲ್ಲಿ ಮಹಿಳೆ ಅಡುಗೆ ಮಾಡುತ್ತಿದ್ದಳು, ಮತ್ತೊಂದು ರೂಂನಲ್ಲಿ ಮಹಿಳೆಯ ಮಗ ಮಲಗಿದ್ದ. ಇದನ್ನು ತಿಳಿಯದ ಕಳ್ಳ ಒಳಗೆ ಬಂದು ಮನೆಯ ಕಬೋರ್ಡ್ ನಲ್ಲಿ ಕೈ ಚಳಕ ತೋರಲು ಮುಂದಾಗಿದ್ದಾನೆ. ಈ ವೇಳೆ ಶಬ್ದ ಕೇಳಿ ರೂಂ‌ ಬಳಿ ಮಹಿಳೆ ಬಂದಿದ್ದಾಳೆ. ಆಕೆಯನ್ನು ಕಂಡ ಕಳ್ಳ ಮನೆಯಿಂದ ಪರಾರಿಯಾಗಿದ್ದಾನೆ.

ತಕ್ಷಣವೇ ಮಹಿಳೆ ಕಳ್ಳನನ್ನು ಬೆನ್ನಟ್ಟಿದ್ದಾಳೆ. ಕಳ್ಳ ಅಪಾರ್ಟ್ ಮೆಂಟ್ ಫಸ್ಟ್ ಪ್ಲೋರ್​ನ ಚಪ್ಪಲಿ ಸ್ಟಾಂಡ್ ಹಿಂದೆ ಅವಿತಿದ್ದ. ಆತನನ್ನು ಹಿಡಿಯುವಾಗ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಈ ವೇಳೆ ಅಪಾರ್ಟ್ ಮೆಂಟ್​ನಲ್ಲಿದ್ದ ಕೆಲವರು ಬಂದಿದ್ದಾರೆ. ಓಡುತ್ತಿದ್ದ ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆ ಕಳ್ಳನನ್ನ ಬೆನ್ನತ್ತಿ ಹಿಡಿದಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​