AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಆರತಿ ಒಮ್ಮೆ ಪ್ರಾರಂಭಿಸಿದ ಮೇಲೆ ಯಾವುದೇ ಕಾರಣಕ್ಕೂ ನಿಲ್ಲಬಾರದು: ರಾಜ್ಯ ಸಚಿವರಿಗೆ ಗಂಗಾರತಿ ಸಭಾ ಸಲಹೆ

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಗಂಗಾ ಆರತಿ ಬಗ್ಗೆ ತಿಳಿಯಲು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮಿತಿ ಅಧ್ಯಕ್ಷ ಎನ್​. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿ, ಗಂಗಾರತಿ ಸಭಾದೊಂದಿಗೆ ಸಭೆ ನಡೆಸಿದೆ.

Malatesh Jaggin
| Edited By: |

Updated on:Sep 21, 2024 | 8:21 AM

Share

ಬೆಂಗಳೂರು, ಸೆಪ್ಟೆಂಬರ್​ 21: ಗಂಗಾ ಆರತಿ (Ganga Aarti) ಮಾದರಿಯಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮಿತಿ ಅಧ್ಯಕ್ಷ ಎನ್​. ಚಲುವರಾಯಸ್ವಾಮಿ (N Chaluvarayaswamy) ನೇತೃತ್ವದ ನಿಯೋಗ ಉತ್ತರಾಖಂಡ್​ನ ಹರಿದ್ವಾರಕ್ಕೆ ಈಗಾಗಲೆ ತೆರಳಿದೆ. ಶುಕ್ರವಾರ ಸಂಜೆ ನಿಯೋಗ ಗಂಗಾ ಆರತಿ ವೀಕ್ಷಿಸಿತು. ಬಳಿಕ, ಗಂಗಾ ಆರತಿ ನಡೆಸುವ ಗಂಗಾರತಿ ಸಭಾದೊಂದಿಗೆ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಸಭೆ ನಡೆಸಿತು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ.

ಸಭೆಯಲ್ಲಿ ಗಂಗಾರತಿ ಸಭಾದ ಮುಖ್ಯ ಕಾರ್ಯದರ್ಶಿ ತನ್ಮಯ ವಸಿಷ್ಠ, ಅಧ್ಯಕ್ಷ ನಿತಿನ್ ಗೌತಮ್, ಸಭಾಪತಿ ಕೃಷ್ಣಕುಮಾರ್ ಶರ್ಮಾ ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ನಿಯೋಗ ಸಲಹೆ ಪಡೆದುಕೊಂಡಿದೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಗಂಗಾಸಭಾ ನೀಡಿದ ಸಲಹೆಗಳೇನು?

ಉತ್ತರಾಖಂಡ್​ನ ಹರಿದ್ವಾರದ ಗಂಗಾರತಿ ಅತ್ಯಂತ ಪುರಾತನವಾದದ್ದು. ಇಲ್ಲಿ ಅತ್ಯಂತ ಪಾರದರ್ಶಕವಾಗಿ ಎಲ್ಲವನ್ನೂ ನಡೆಸಲಾಗುತ್ತಿದೆ. ಸರ್ಕಾರದಿಂದ ಯಾವುದೇ ಸಹಾಯವನ್ನು ನಾವು ಪಡೆಯುತ್ತಿಲ್ಲ. ಎಲ್ಲವೂ ದಾನಿಗಳಿಂದಲೇ ಗಂಗಾರತಿ ಕಾರ್ಯಕ್ರಮ ನಡೆಯುತ್ತಿದೆ. ಸರ್ಕಾರದಿಂದ ಧನ ಸಹಾಯ ಪಡೆದರೆ 5 ವರ್ಷ ಅಥವಾ 10 ವರ್ಷ ಮಾತ್ರ ನಡೆಯುತ್ತೆ. ಮುಂದೆ ಬರುವ ಸರ್ಕಾರ ಅದನ್ನು ಮುಂದುವರಿಸದೆ ಇರಬಹುದು. ಗಂಗಾ ನದಿ ಧಾರ್ಮಿಕ ಹಿನ್ನೆಲೆಯುಳ್ಳ ನದಿ, ಈ ಸ್ಥಳಕ್ಕೆ ಐತಿಹ್ಯ ಇದೆ. ಇದೇ ರೀತಿ ಕಾವೇರಿ ನದಿ ಇತಿಹಾಸ, ಧಾರ್ಮಿಕತೆ ಹಿನ್ನೆಲೆ ಇರಿಸಿಕೊಂಡು, ಕಾವೇರಿ ಆರತಿ ಮಾಡಿದರೆ ಸೂಕ್ತ ಎಂದು ಗಂಗಾರತಿ ಸಭಾ ಸಲಹೆ ನೀಡಿದೆ.

ಧಾರ್ಮಿಕತೆ ಮತ್ತು ನಂಬಿಕೆಯನ್ನು ಹೊರತಾಗಿಸಿ ಆರತಿ ಬೆಳಗಿದರೆ ವ್ಯರ್ಥ. ಹರಿದ್ವಾರದ ಗಂಗಾರತಿ ಸಂಪೂರ್ಣವಾಗಿ ಮಂಡಳಿ ನೋಡಿಕೊಳ್ಳುತ್ತೆ. ಮಂಡಳಿ ಸದಸ್ಯರು ಸೇರಿ ಪದಾಧಿಕಾರಿಗಳು ಚುನಾವಣೆ ಮೂಲಕ ಆಯ್ಕೆ ಆಗುತ್ತಾರೆ. ಒಟ್ಟು 750 ಜನ ಸದಸ್ಯರು ಇದ್ದಾರೆ, ಮೂವರನ್ನು ಅಧ್ಯಕ್ಷರನ್ನಾಗಿ ಮಾಡುತ್ತೇವೆ. ಸಭಾಪತಿ, ಮುಖ್ಯ ಕಾರ್ಯದರ್ಶಿ ಅವರನ್ನು ಸಹ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿತು.

ಟ್ವಿಟರ್ ಪೋಸ್ಟ್​

11 ಜನರಂತೆ ಪೂಜಾರಿಗಳ ತಂಡ ಇದೆ, ಎಲ್ಲರಿಗೂ ತರಬೇತಿ ಕೊಡುತ್ತೇವೆ. ಪೂಜಾರಿಗಳಿಗೆ ಸಂಬಳ ಕೊಡಲ್ಲ, ಗೌರವಧನ ಅಂತ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಒಮ್ಮೆ ಪ್ರಾರಂಭಿಸಿದ ಮೇಲೆ ನಿಲ್ಲಬಾರದು. ಹರಿದ್ವಾರದಲ್ಲಿ ಕೊರೊನಾ ಸಂದರ್ಭದಲ್ಲೂ ಗಂಗಾರತಿ ಪೂಜೆ ನಿಂತಿಲ್ಲ ಎಂದು ಗಂಗಾರತಿ ಸಭಾ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Sat, 21 September 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?