AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಆರತಿ ಒಮ್ಮೆ ಪ್ರಾರಂಭಿಸಿದ ಮೇಲೆ ಯಾವುದೇ ಕಾರಣಕ್ಕೂ ನಿಲ್ಲಬಾರದು: ರಾಜ್ಯ ಸಚಿವರಿಗೆ ಗಂಗಾರತಿ ಸಭಾ ಸಲಹೆ

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಗಂಗಾ ಆರತಿ ಬಗ್ಗೆ ತಿಳಿಯಲು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮಿತಿ ಅಧ್ಯಕ್ಷ ಎನ್​. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿ, ಗಂಗಾರತಿ ಸಭಾದೊಂದಿಗೆ ಸಭೆ ನಡೆಸಿದೆ.

Malatesh Jaggin
| Updated By: ವಿವೇಕ ಬಿರಾದಾರ|

Updated on:Sep 21, 2024 | 8:21 AM

Share

ಬೆಂಗಳೂರು, ಸೆಪ್ಟೆಂಬರ್​ 21: ಗಂಗಾ ಆರತಿ (Ganga Aarti) ಮಾದರಿಯಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮಿತಿ ಅಧ್ಯಕ್ಷ ಎನ್​. ಚಲುವರಾಯಸ್ವಾಮಿ (N Chaluvarayaswamy) ನೇತೃತ್ವದ ನಿಯೋಗ ಉತ್ತರಾಖಂಡ್​ನ ಹರಿದ್ವಾರಕ್ಕೆ ಈಗಾಗಲೆ ತೆರಳಿದೆ. ಶುಕ್ರವಾರ ಸಂಜೆ ನಿಯೋಗ ಗಂಗಾ ಆರತಿ ವೀಕ್ಷಿಸಿತು. ಬಳಿಕ, ಗಂಗಾ ಆರತಿ ನಡೆಸುವ ಗಂಗಾರತಿ ಸಭಾದೊಂದಿಗೆ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಸಭೆ ನಡೆಸಿತು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ.

ಸಭೆಯಲ್ಲಿ ಗಂಗಾರತಿ ಸಭಾದ ಮುಖ್ಯ ಕಾರ್ಯದರ್ಶಿ ತನ್ಮಯ ವಸಿಷ್ಠ, ಅಧ್ಯಕ್ಷ ನಿತಿನ್ ಗೌತಮ್, ಸಭಾಪತಿ ಕೃಷ್ಣಕುಮಾರ್ ಶರ್ಮಾ ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ನಿಯೋಗ ಸಲಹೆ ಪಡೆದುಕೊಂಡಿದೆ.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಗಂಗಾಸಭಾ ನೀಡಿದ ಸಲಹೆಗಳೇನು?

ಉತ್ತರಾಖಂಡ್​ನ ಹರಿದ್ವಾರದ ಗಂಗಾರತಿ ಅತ್ಯಂತ ಪುರಾತನವಾದದ್ದು. ಇಲ್ಲಿ ಅತ್ಯಂತ ಪಾರದರ್ಶಕವಾಗಿ ಎಲ್ಲವನ್ನೂ ನಡೆಸಲಾಗುತ್ತಿದೆ. ಸರ್ಕಾರದಿಂದ ಯಾವುದೇ ಸಹಾಯವನ್ನು ನಾವು ಪಡೆಯುತ್ತಿಲ್ಲ. ಎಲ್ಲವೂ ದಾನಿಗಳಿಂದಲೇ ಗಂಗಾರತಿ ಕಾರ್ಯಕ್ರಮ ನಡೆಯುತ್ತಿದೆ. ಸರ್ಕಾರದಿಂದ ಧನ ಸಹಾಯ ಪಡೆದರೆ 5 ವರ್ಷ ಅಥವಾ 10 ವರ್ಷ ಮಾತ್ರ ನಡೆಯುತ್ತೆ. ಮುಂದೆ ಬರುವ ಸರ್ಕಾರ ಅದನ್ನು ಮುಂದುವರಿಸದೆ ಇರಬಹುದು. ಗಂಗಾ ನದಿ ಧಾರ್ಮಿಕ ಹಿನ್ನೆಲೆಯುಳ್ಳ ನದಿ, ಈ ಸ್ಥಳಕ್ಕೆ ಐತಿಹ್ಯ ಇದೆ. ಇದೇ ರೀತಿ ಕಾವೇರಿ ನದಿ ಇತಿಹಾಸ, ಧಾರ್ಮಿಕತೆ ಹಿನ್ನೆಲೆ ಇರಿಸಿಕೊಂಡು, ಕಾವೇರಿ ಆರತಿ ಮಾಡಿದರೆ ಸೂಕ್ತ ಎಂದು ಗಂಗಾರತಿ ಸಭಾ ಸಲಹೆ ನೀಡಿದೆ.

ಧಾರ್ಮಿಕತೆ ಮತ್ತು ನಂಬಿಕೆಯನ್ನು ಹೊರತಾಗಿಸಿ ಆರತಿ ಬೆಳಗಿದರೆ ವ್ಯರ್ಥ. ಹರಿದ್ವಾರದ ಗಂಗಾರತಿ ಸಂಪೂರ್ಣವಾಗಿ ಮಂಡಳಿ ನೋಡಿಕೊಳ್ಳುತ್ತೆ. ಮಂಡಳಿ ಸದಸ್ಯರು ಸೇರಿ ಪದಾಧಿಕಾರಿಗಳು ಚುನಾವಣೆ ಮೂಲಕ ಆಯ್ಕೆ ಆಗುತ್ತಾರೆ. ಒಟ್ಟು 750 ಜನ ಸದಸ್ಯರು ಇದ್ದಾರೆ, ಮೂವರನ್ನು ಅಧ್ಯಕ್ಷರನ್ನಾಗಿ ಮಾಡುತ್ತೇವೆ. ಸಭಾಪತಿ, ಮುಖ್ಯ ಕಾರ್ಯದರ್ಶಿ ಅವರನ್ನು ಸಹ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿತು.

ಟ್ವಿಟರ್ ಪೋಸ್ಟ್​

11 ಜನರಂತೆ ಪೂಜಾರಿಗಳ ತಂಡ ಇದೆ, ಎಲ್ಲರಿಗೂ ತರಬೇತಿ ಕೊಡುತ್ತೇವೆ. ಪೂಜಾರಿಗಳಿಗೆ ಸಂಬಳ ಕೊಡಲ್ಲ, ಗೌರವಧನ ಅಂತ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಒಮ್ಮೆ ಪ್ರಾರಂಭಿಸಿದ ಮೇಲೆ ನಿಲ್ಲಬಾರದು. ಹರಿದ್ವಾರದಲ್ಲಿ ಕೊರೊನಾ ಸಂದರ್ಭದಲ್ಲೂ ಗಂಗಾರತಿ ಪೂಜೆ ನಿಂತಿಲ್ಲ ಎಂದು ಗಂಗಾರತಿ ಸಭಾ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Sat, 21 September 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ