AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾವೇರಿ ಕಾಲಿಂಗ್’​ ಯೋಜನೆ: ಇಶಾ ಸಂಸ್ಥೆಯಿಂದ ರೈತರಿಗೆ ವಿತರಿಸಲು ಸಸಿಗಳು ರೆಡಿ

'ಕಾವೇರಿ ಕಾಲಿಂಗ್'​ ಯೋಜನೆಯ ಭಾಗವಾಗಿ ಸಸಿಗಳನ್ನು ತಯಾರಿಸಿ ರೈತರಿಗೆ ವಿತರಿಸುವ ಕಾರ್ಯವನ್ನು ಇಶಾ ಸಂಸ್ಥೆ ನಡೆಸಿಕೊಂಡುಬಂದಿದ್ದು, ಈ ವರ್ಷ ನೀಡಲು ಉದ್ದೇಶಿಸಿರುವ ಸಸಿಗಳು ಸಿದ್ಧವಿರೋದಾಗಿ ತಿಳಿಸಿದೆ. ತಮಿಳುನಾಡಿನ ಕಡಲೂರಿನಲ್ಲಿರುವ ಏಷ್ಯಾದಲ್ಲೇ ಅತಿ ದೊಡ್ಡ ಏಕ ಸ್ಥಳೀಯ ನರ್ಸರಿಯಲ್ಲಿ ಇವು ತಯಾರಾಗಿವೆ. ಸಂಪೂರ್ಣವಾಗಿ ಮಹಿಳೆಯರೇ ಈ ನರ್ಸರಿಯನ್ನು ನಿರ್ವಹಿಸುತ್ತಿರೋದು ವಿಶೇಷ.

'ಕಾವೇರಿ ಕಾಲಿಂಗ್'​ ಯೋಜನೆ: ಇಶಾ ಸಂಸ್ಥೆಯಿಂದ ರೈತರಿಗೆ ವಿತರಿಸಲು ಸಸಿಗಳು ರೆಡಿ
ವಿತರಣೆಗೆ ಸಿದ್ಧವಿರೋ ಸಸಿಗಳು
ಪ್ರಸನ್ನ ಹೆಗಡೆ
|

Updated on: Oct 09, 2025 | 5:36 PM

Share

ಬೆಂಗಳೂರು, ಅಕ್ಟೋಬರ್​ 09: ‘ಕಾವೇರಿ ಕಾಲಿಂಗ್’ (​Cauvery Calling) ಯೋಜನೆಯ ಭಾಗವಾಗಿ ರೈತರಿಗೆ ಸಸಿಗಳನ್ನು ಈ ವಾರ ಕಳುಹಿಸೋದಾಗಿ ಇಶಾ ಸಂಸ್ಥೆ ತಿಳಿಸಿದೆ. ತಮಿಳುನಾಡಿನ ಕಡಲೂರಿನಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ಏಕ ಸ್ಥಳೀಯ ನರ್ಸರಿಯನ್ನು ಸಂಸ್ಥೆ ನಡೆಸುತ್ತಿದ್ದು, ಸಂಪೂರ್ಣವಾಗಿ ಮಹಿಳೆಯರೇ ಈ ನರ್ಸರಿಯನ್ನು ನಿರ್ವಹಿಸುತ್ತಿದ್ದಾರೆ. ‘ಕಾವೇರಿ ಕಾಲಿಂಗ್’​ ಯೋಜನೆಯಡಿ ಕಳೆದ ವರ್ಷ ತಮಿಳುನಾಡಿನಲ್ಲಿ 1.2 ಕೋಟಿ ಸಸಿಗಳನ್ನ ನೆಡಲಾಗಿದೆ. ಈ ನರ್ಸರಿಯಲ್ಲೇ 85 ಲಕ್ಷ ಸಸಿಗಳನ್ನ ಉತ್ಪಾದಿಸಿರೋದು ವಿಶೇಷ.

ಸದ್ಗುರು ಜಗ್ಗಿ ವಾಸುದೇವ್ ಮಾರ್ಗದರ್ಶನದಲ್ಲಿ ನಡೆಯುತ್ತಿರೋ ಕಾವೇರಿ ಕಾಲಿಂಗ್​​ ಅಭಿಯಾನದಡಿ 2024-25ರ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶದ 34,000 ಎಕರೆಗಳಲ್ಲಿ 1.36 ಕೋಟಿ ಸಸಿಗಳನ್ನು ಯಶಸ್ವಿಯಾಗಿ ನೆಡಲಾಗಿದೆ. ಇಲ್ಲಿಯವರೆಗೆ ಒಟ್ಟು 12.2 ಕೋಟಿ ಸಸಿಗಳನ್ನು ನೆಟ್ಟಿದ್ದು, ಇದು 2.38 ಲಕ್ಷ ರೈತರು ಮರ ಆಧಾರಿತ ಕೃಷಿ ಅಳವಡಿಸಿಕೊಳ್ಳಲು ಸಹಾಯ ಮಾಡಿದೆ. ಕಳೆದ ವರ್ಷ, 50,931 ರೈತರು ಮತ್ತು ನಾಗರಿಕರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಕಾವೇರಿ ಕಾಲಿಂಗ್​​ ಅಭಿಯಾನದಡಿ 1 ವರ್ಷದಲ್ಲಿ 1.36 ಕೋಟಿ ಗಿಡಗಳನ್ನು ನೆಡಲಾಗಿದೆ

ಕಾವೇರಿ ಕಾಲಿಂಗ್ ವಿಶ್ವದ ಅತಿದೊಡ್ಡ ರೈತ-ಚಾಲಿತ ಯೋಜನೆಯಾಗಿದ್ದು, ಉಷ್ಣವಲಯದ ಪ್ರದೇಶಗಳನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ . ಟ್ರಿಲಿಯನ್ ಟ್ರೀಸ್ ಇಂಡಿಯಾ ಚಾಲೆಂಜ್‌ನಿಂದ ‘ಟಾಪ್ ಇನ್ನೋವೇಟರ್’ ಎಂದು ಹೆಸರಿಸಲಾದ ಈ ಅಭಿಯಾನವು, ಕಾವೇರಿ ನದಿಯನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿದೆ. ಭೂ ಸವೆತವನ್ನು ತಡೆಯುವ ಜೊತೆಗೆ, ಮಣ್ಣಿನ ಫಲವತ್ತತೆ ಹೆಚ್ಚಿಸಲೂ ನೆರವಾಗಲಿದೆ. ಹಾಗೆಯೇ ನೀರಿನ ಧಾರಣ ಸುಧಾರಣೆಯ ಜೊತೆಗೆ ವರ್ಷವಿಡೀ ನದಿಯ ಹರಿವನ್ನು ಕಾಪಾಡಿಕೊಳ್ಳಲು ಸಹಾಯಕರವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ