ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್​​​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್ ಮುಂದೆ ನಮ್ಮ ಕಷ್ಟ ಹೇಳಿಕೊಳ್ಳಲು ಶನಿವಾರವೇ ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ
ಕಾನೂನು ತಜ್ಞರ ಜತೆ ಸಿದ್ದರಾಮಯ್ಯ ಸಭೆ
Edited By:

Updated on: Sep 29, 2023 | 8:18 PM

ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಅಕ್ಟೋಬರ್​​ 15ರ ವರೆಗೆ ದಿನ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಾನೂನು ತಜ್ಞರ ಜತೆ ಸಭೆ ನಡೆಸಿದರು. ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ನೀರಾವರಿ ವಿವಾದಗಳಿಗೆ ಸಂಬಂಧ ಸಲಹಾ ಸಮಿತಿ ರಚನೆಗೆ ಸಲಹೆ ತಜ್ಞರು ಸಲಹೆ ನೀಡಿದ್ದಾರೆ. ಮಹದಾಯಿ, ಕಾವೇರಿ, ಕೃಷ್ಣಾ ಜಲ ವಿವಾದದಲ್ಲಿ ಸಲಹೆ ನೀಡಲು ಸಮಿತಿ ರಚಿಸುವಂತೆ ಸೂಚಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಲಹಾ ಸಮಿತಿಯು ಪ್ರತಿದಿನ ಡೇಟಾ ಸಂಗ್ರಹಿಸಿ ರಾಜ್ಯದ ಕಾನೂನು ತಂಡಕ್ಕೆ ಸಲಹೆ ನೀಡಬೇಕು. ಕಾವೇರಿ ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ವಾಸ್ತವಾಂಶಗಳನ್ನು ವಿವರಿಸಲಾಗಿದೆ. ಇಷ್ಟೆಲ್ಲ ಮಾಹಿತಿ ನೀಡಿದರೂ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವಂತೆ ಸಭೆಯಲ್ಲಿ ತಜ್ಞರು ಸಲಹೆ ನೀಡಿದ್ದಾರೆ. ಸುಪ್ರೀಂಕೋರ್ಟ್​ ಜೊತೆ ಮಾತನಾಡಿ ಮನವೊಲಿಸುವಂತೆ ಸಲಹೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಸಮಸ್ಯೆಯಾಗಲ್ಲ. ತಮಿಳುನಾಡಿಗೆ ಮನವರಿಕೆ ಮಾಡಿ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕು. ಮೇಕೆದಾಟು ಯೋಜನೆ ಜಾರಿಯಾದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ತಮಿಳುನಾಡುಗೆ ಅಗತ್ಯವಿದ್ದಾಗ ನೀರು ಹರಿಸಲು ಸಹಕಾರಿಯಾಗಲಿದೆ. ಜಲವಿದ್ಯುತ್ ಉತ್ಪಾದನೆಗೆ ಬಳಸಿದ ನೀರು ತಮಿಳುನಾಡಿಗೆ ಹರಿದುಹೋಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡದಿದ್ದರೆ ಏನಾಗಬಹುದು? ಸಾಧ್ಯತೆಗಳ ಬಗ್ಗೆ ಕಾನೂನು ತಜ್ಞರ ಜತೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

ಅಲ್ಲದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್​​​ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್ ಮುಂದೆ ನಮ್ಮ ಕಷ್ಟ ಹೇಳಿಕೊಳ್ಳಲು ಶನಿವಾರವೇ ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Web contact

TV9 Kannada

Read More
Follow Us