ತಮಿಳುನಾಡಿಗೆ ಕಾವೇರಿ ನೀರು; ಬೆಂಗಳೂರಿನಲ್ಲಿರುವ ತಮಿಳರ ವಾಪಸ್ ಕರೆಸಿಕೊಳ್ಳಿ, ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಆಗ್ರಹ

Vatal Nagaraj on Cauvery water release to Tamil Nadu; ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ, ಎಲ್ಲರೂ ಇಳಿದು ಕೆಳಗೆ ಬರಲಿ ಎಂದು ವಾಟಾಳ್ ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು; ಬೆಂಗಳೂರಿನಲ್ಲಿರುವ ತಮಿಳರ ವಾಪಸ್ ಕರೆಸಿಕೊಳ್ಳಿ, ಸ್ಟಾಲಿನ್​ಗೆ ವಾಟಾಳ್ ನಾಗರಾಜ್ ಆಗ್ರಹ
ವಾಟಾಳ್ ನಾಗರಾಜ್
Follow us
| Updated By: ಗಣಪತಿ ಶರ್ಮ

Updated on: Sep 21, 2023 | 6:19 PM

ಬೆಂಗಳೂರು, ಸೆಪ್ಟೆಂಬರ್ 21: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj), ಬೆಂಗಳೂರಿನಲ್ಲಿ ತಮಿಳರು ಇದ್ದಾರೆ. ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೊಸೂರು ಮೂಲಕ ಕರೆಸಿಕೊಳ್ಳಲಿ ಎಂದು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮಿಳು ಚಿತ್ರ ಬಂದ್ ಮಾಡುತ್ತೇವೆ. ರಜನಿಕಾಂತ್ ಬೆಂಗಳೂರಿಗೆ ಬರಬಾರದು. ಕಾವೇರಿ ವಿಚಾರದಲ್ಲಿ ರಜನಿಕಾಂತ್‌ ಏನು ನಿರ್ಧಾರ ಮಾಡ್ತಾರೋ ಮಾಡಲಿ. ಕರ್ನಾಟಕದ ಪರ ನಿಲ್ತಾರಾ, ಅಲ್ಲ ತಮಿಳುನಾಡು ಪರ ನಿಲ್ತಾರಾ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ದಿಕ್ಕಿಲ್ಲದಂತೆ ಆಗಿದೆ. ಮುಖ್ಯಮಂತ್ರಿ ಏನು ನಿರ್ಧಾರ ಮಾಡ್ತಾರೆ ನೋಡೋಣ. ರಾಜ್ಯದ ಎಲ್ಲಾ ಸಂಸದರು ರಾಜೀನಾಮೆ ಕೊಟ್ಟು ನಿಮ್ಮ ಧೈರ್ಯ ತೋರಿಸಿ ಎಂದು ವಾಟಾಳ್ ಆಗ್ರಹಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ. ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ, ಎಲ್ಲರೂ ಇಳಿದು ಕೆಳಗೆ ಬರಲಿ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್‌ವುಡ್‌ ನಟರು ಬರಲಿ. ಬರದಿದ್ದರೆ ಏನು ಮಾಡಬೇಕೋ ಮಾಡೋಣ. ಶಾಸಕರು ಮುದ್ದು ಮುದ್ದಾಗಿ ಮಾತಾಡಲು ವಿಧಾನಸೌಧಕ್ಕೆ ಬರುತ್ತಾರೆ. ಅವರೆಲ್ಲಾ ಯಾವ ತೀರ್ಮಾನ ಕೈಗೊಳ್ಳುತ್ತಾರೆಂದು ನೋಡೋಣ ಎಂದು ನಾಗರಾಜ್ ಹೇಳಿದ್ದಾರೆ.

ಕಾವೇರಿ ಹೋರಾಟ ಅಂದ್ರೆ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆ, ಕನ್ನಡಪರ ಸಂಘಟನೆಗಳು, ರೈತರು ಇಷ್ಟಕ್ಕೇ ಸೀಮಿತ ಆಗಬಾರದು. ಕಾವೇರಿ ಹೋರಾಟ ಅಂದ್ರೆ ರಾಜ್ಯದ ಎಲ್ಲಾ ರೈತರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಂಗಳೂರು ಹಾಗೂ ಬೆಂಗಳೂರಿನ ಪ್ರಶ್ನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: Mandya Bandh; ಕಾವೇರಿ ಹೋರಾಟ ತೀವ್ರ; ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​

ಉತ್ತರ ಕರ್ನಾಟಕದ ಭಾಗದವರು ಕಾವೇರಿ ನದಿ ನಮ್ಮದಲ್ಲ ಅಂತಾರೆ. ಮಂಗಳೂರಿನವರು ಸಮುದ್ರ ಪಕ್ಕದವರು, ನಮಗಲ್ಲ ಅಂತಾರೆ. ಮಂಡ್ಯ, ಚಾಮರಾಜನಗರ, ಕನ್ನಡಪರ ಸಂಘಟನೆಗಳಿಂದ ಮಾತ್ರ ಹೋರಾಟ ನಡೆಯುತ್ತಿದೆ. ಕಾವೇರಿ ಹೋರಾಟದಲ್ಲಿ ಬೆಂಗಳೂರಿನವರು ಬಹಳ ಮಂದಗತಿಯಲ್ಲಿದ್ದಾರೆ‌. ಮೊದಲು ಬೆಂಗಳೂರು ನಗರದಲ್ಲಿ ಶುರುವಾಗಿದ್ದು ತಮಿಳರ ದರ್ಬಾರು. ಬಳಿಕ ಮಾರ್ವಾಡಿ, ಸಿಂಧಿಗಳು, ವಿದೇಶದಿಂದ ಬಂದವರದ್ದು ದರ್ಬಾರು. ಇವರು ಯಾರಿಗೂ ಕನ್ನಡಿಗರ ಪರಿಸ್ಥಿತಿ ಅರ್ಥ ಆಗುತ್ತಿಲ್ಲ. ಬೆಂಗಳೂರಿಗೆ ಬರುವ ನೀರು ಒಂದು ದಿನ ಬರದಿದ್ರೆ ಕಷ್ಟ ಗೊತ್ತಾಗುತ್ತದೆ. ಬೆಂಗಳೂರಿನ ಜನರಿಗೆ ಕಾವೇರಿ ನೀರು ಬೇಕಾ? ಬೇಡವಾ? ಕಾವೇರಿ ನೀರು ಬೇಡ ಅನ್ನುವವರು ಸರ್ಕಾರಕ್ಕೆ ಪ್ರಮಾಣ ಪತ್ರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಸ್ಟಾಲಿನ್‌ಗೆ ಗೆಲುವಾಗಿದೆ. ನಮ್ಮ ವಾದ ಆಲಿಸಬೇಕಿತ್ತು. ಕತ್ತು ಕಡಿದಿದ್ದಾರೆ, ರುಂಡ ಕೆಳಗೆ ಬಿದ್ದಿದ್ದೇ ಸರಿ ಅಂತಾ ಸುಪ್ರೀಂ ಹೇಳಿದೆ ಎಂದು ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ