AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಅಖಂಡ ಕರ್ನಾಟಕ ಬಂದ್ ಭವಿಷ್ಯ ಇಂದು ನಿರ್ಧಾರ

Karnataka Bandh: ತಮಿಳುನಾಡಿಗೆ ಕಾವೇರಿ ನೀರು ಬಿಡೋದನ್ನ ವಿರೋಧಿಸಿ ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲು ಮುಂದಾಗಿದ್ದಾರೆ. ಹೀಗಾಗಿ ನಾಳೆ ಬೆಂಗಳೂರು ಬಂದ್ ಆಗುವುದು ಪಕ್ಕಾ ಆಗಿದೆ. ಇನ್ನು ಶುಕ್ರವಾರದ ಕರ್ನಾಟಕ ಬಂದ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

Karnataka Bandh: ಅಖಂಡ ಕರ್ನಾಟಕ ಬಂದ್ ಭವಿಷ್ಯ ಇಂದು ನಿರ್ಧಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 25, 2023 | 7:21 AM

Share

ಬೆಂಗಳೂರು, (ಸೆಪ್ಟೆಂಬರ್ 25): ತಮಿಳುನಾಡಿಗೆ (Tamil Nadu) ಕಾವೇರಿ ನೀರು(Cauvery water) ಬಿಡುವುದನ್ನು ವಿರೋಧಿಸಿ ಕರುನಾಡಿನಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದೆ. ಈಗಾಗಲೇ ಮಂಡ್ಯ ಮದ್ದೂರು ಬಂದ್ ಸಕ್ಸಸ್ ಆಗಿದ್ದು, ನಾಳೆ(ಸೆಪ್ಟೆಂಬರ್ 26) ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್ (Karnataka Bandh)​ ಮಾಡಲು ತೀರ್ಮಾನಿಸಲಾಗಿದೆ.ವೀ ಬಗ್ಗೆ ಇಂದು ಅಂತಿಮ ಸಭೆ ನಡೆಯಲಿದ್ದು, ಬಳಿಕ ಕರ್ನಾಟಕ ಬಂದ್ ಭವಿಷ್ಯ ನಿರ್ಧಾರವಾಗಲಿದೆ.

ನಿನ್ನೆ(ಸೆ.24) ವಾಟಾಳ್ ನಾಗರಾಜ್ ಹಾಗೂ ಕರವೇ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕರಾಳ ದಿನ ಅಂತಾ ಆಕ್ರೋಶ ಹೊರಹಾಕಲಾಯ್ತು. ಇದೇ ಪ್ರತಿಭಟನೆ ವೇಳೆಯೇ ವಾಟಾಳ್ ನಾಗರಾಜ್, ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸೆ.26ರಂದು ಬೆಂಗಳೂರು ಬಂದ್ ಫಿಕ್ಸ್, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

ಅಖಂಡ ಕರ್ನಾಟಕ ಬಂದ್ ಭವಿಷ್ಯ ಇಂದು ನಿರ್ಧಾರ

ಸೆಪ್ಟೆಂಬರ್ 29ಕ್ಕೆ ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ ಸಂಬಂಧ ಇಂದು(ಸೆ.25) ವಾಟಾಳ್ ನಾಗರಾಜ್ ಮತ್ತು ಕನ್ನಡ ಸಂಘಟನೆಗಳು ಮತ್ತೊಂದು ಸುತ್ತಿನ ಸಭೆ ನಡೆಸಲಿವೆ. ಈ ಸಭೆಯಲ್ಲಿ ಹೋರಾಟದ ರೂಪುರೇಷೆ ನಿರ್ಧಾರವಾಗಲಿದೆ. ಇನ್ನು ನಾಳೆ ನಡೆಯೋ ಬೆಂಗಳೂರು ಬಂದ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವಾಟಾಳ್ ನಾಗಾರಾಜ್, ಅವರಿಗೆ ಬಂದ್ ಮಾಡಿ ಅಂತಾನೂ ಹೇಳಲ್ಲ, ಬಿಡಿ ಅಂತಾನೂ ಹೇಳಲ್ಲ ಎಂದಿದ್ದಾರೆ.

ಒಟ್ಟಿನಲ್ಲಿ ನಾಳೆ ಬೆಂಗಳೂರು ಬಂದ್ ಆಗುವುದು ಪಕ್ಕಾ ಆಗಿದೆ. ಶುಕ್ರವಾರದ ಕರ್ನಾಟಕ ಬಂದ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ