AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ

ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಹರಿದು ಬಂದ ಭಕ್ತ ಸಾಗರ

Gopal AS
| Updated By: ಪ್ರಸನ್ನ ಹೆಗಡೆ|

Updated on:Oct 17, 2025 | 11:30 AM

Share

ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕಾವೇರಿ ತಾಯಿಯ ದರ್ಶನ ಪಡೆಯಲು ತಲಕಾವೇರಿಯತ್ತ ಭಕ್ತ ಸಾಗರವೇ ಹರಿದು ಬರ್ತಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.

ಮಡಿಕೇರಿ, ಅಕ್ಟೋಬರ್​ 17: ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತ ಪ್ರವಾಹವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್​ ಗಳ ವ್ಯವಸ್ಥೆಯೂ ಇದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 17, 2025 11:29 AM