AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ

Cauvery River Water Dispute: ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್​​ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ ನೀಡಿದೆ.

ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ
ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ
ಗಣಪತಿ ಶರ್ಮಾ
|

Updated on: Jan 19, 2024 | 9:52 AM

Share

ನವದೆಹಲಿ, ಜನವರಿ 19: ಕಾವೇರಿ ನೀರು ವ್ಯಾಜ್ಯ ನ್ಯಾಯಾಧಿಕರಣದ (CWDT) ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಗುರುವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.

ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್​​ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ ನೀಡಿದೆ.

19 ಟಿಎಂಸಿಎಫ್​ಟಿ ಹಾಗೂ ಜನವರಿ 19ರ ವರೆಗೆ ಬಾಕಿ ಇರಿಸಿಕೊಂಡಿರುವ 7.61 ಟಿಎಂಸಿಎಫ್​ಟಿ ನೀರನ್ನು ಮೇ ತಿಂಗಳ ಒಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಸಭೆಯಲ್ಲಿ ತಮಿಳುನಾಡು ಸರ್ಕಾರ ಮನವಿ ಮಾಡಿದೆ.

ತಮಿಳುನಾಡಿನ ಬೇಡಿಕೆಯನ್ನು ಒಪ್ಪಲಾಗದು ಎಂದು ವಾದ ಮಂಡಿಸಿದ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು.

ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಕುಡಿಯುವ ನೀರು ಮತ್ತು ನೀರಾವರಿಯ ಬೇಡಿಕೆಯನ್ನು ಪೂರೈಸಲು ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಲಭ್ಯವಿರುವ ನೀರು ಅತೀ ಅಗತ್ಯ ಎಂದು ಕರ್ನಾಟಕ ವಾದಿಸಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ: ರಾಮಲಲ್ಲಾ ಮೂರ್ತಿ ಮೈಸೂರಿನದ್ದು, ಆಹ್ವಾನ ಪತ್ರಿಕೆ ಮೇಲಿನ ಲೋಗೋ ಕಲಬುರಗಿಯದ್ದು!

ಈ ಹಿಂದಿನ ಹಲವು ಸಭೆಗಳಲ್ಲಿ ಕೂಡ ತಮಿಳುನಾಡಿಗೆ ನೀರು ಬಿಡುವಂತೆ ಸಿಡಬ್ಲ್ಯುಆರ್​ಸಿ ಸೂಚಿಸುತ್ತಲೇ ಬಂದಿದೆ. ಆದರೆ, ಮಳೆ ಕೊರತೆ, ನೀರಿನ ಕೊರತೆಯ ಕಾರಣ ಕರ್ನಾಟಕ ಸಂಕಷ್ಟ ಅನುಭವಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!