AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿವಾದ: ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Cauvery river water Dispute: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮತ್ತೆ ಮುಂದೂಡಿದೆ. ಅಲ್ಲದೇ ಅಂದೆ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ನ್ಯಾ‌ ಬಿ.ಆರ್ ಗವಾಯಿ ಹೇಳಿದ್ದಾರೆ. 

ಕಾವೇರಿ ನದಿ ನೀರು ವಿವಾದ: ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ಹರೀಶ್ ಜಿ.ಆರ್​.
| Edited By: |

Updated on:Sep 06, 2023 | 11:30 AM

Share

ನವದೆಹಲಿ, (ಸೆಪ್ಟೆಂಬರ್ 06): ಕಾವೇರಿ ನದಿ ನೀರು ವಿವಾದಕ್ಕೆ(Cauvery river water Dispute)  ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court)  ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಕರ್ನಾಟಕ ಕಾವೇರಿ‌ ನೀರನ್ನು(Cauvery Water) ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, ಹೆಚ್ಚು ನೀರು ಬಿಡುವುದಕ್ಕೆ ಕರ್ನಾಟಕಕ್ಕೆ ಸೂಚಿಸುವಂತೆ ಅರ್ಜಿ ಸಲ್ಲಿಸಿತ್ತು. ಆ ಇಂದು (ಸೆಪ್ಟೆಂಬರ್ 06) ಕೈಗೆತ್ತಿಕೊಂಡ  ನ್ಯಾಯಮೂರ್ತಿ ಬಿ.ಆರ್.ಗವಾಯಿ, ಒಬ್ಬರು ನ್ಯಾಯಮೂರ್ತಿ ರಜೆಯಲ್ಲಿದ್ದಾರೆ. ನಾನು ಮುಂದಿನ ವಾರ ವಿಚಾರಣೆಗೆ ಲಭ್ಯವಿಲ್ಲ. ಹೀಗಾಗಿ ಸಿಜೆಐ ಪೀಠದ ಮುಂದೆ ಹೋಗಿ ಹೊಸ ಪೀಠಕ್ಕೆ ಮನವಿ ಮಾಡಿ ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿಗೆ ಸೂಚಿಸಿದರು.

ನಿಮ್ಮದೇ ಪೀಠದಲ್ಲಿ ವಿಚಾರಣೆ ಮುಂದುವರಿಸಿ ಎಂದು ಮುಕುಲ್ ರೋಹಟಗಿ ಮನವಿ ಮಾಡಿದರು. ಬಳಿಕ ವಕೀಲರ ಮನವಿಗೆ ಸ್ಪಂದಿಸಿದ ನ್ಯಾ‌.ಬಿ.ಆರ್.ಗವಾಯಿ ಸೆ.21ರಂದು ವಿಚಾರಣೆ ನಡೆಸಲು ಸಮ್ಮತಿಸಿದರು. ಅಲ್ಲದೇ ಅಂದೆ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಕೆಆರ್​ಎಸ್​ ಡ್ಯಾಂನಿಂದ ನೀರು ಬಿಡುಗಡೆ; ಕರ್ನಾಟಕದ ರೈತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕಳೆದ ವಾರ ಕಾವೇರಿ ನೀರು ನಿರ್ವಹಣ ಪ್ರಾಧಿಕಾರವೂ, ಕರ್ನಾಟಕ ಪ್ರತಿದಿನ ಮುಂದಿನ ಹದಿನೈದು ದಿನಗಳಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. CWMA ಆದೇಶಕ್ಕೆ‌ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. 5 ಸಾವಿರ ಕ್ಯೂಸೆಕ್ ನೀರು ಸಾಲುವುದಿಲ್ಲ. 24 ಸಾವಿರ ಕ್ಯೂಸೆಕ್ ನೀರು ಬೇಕು ಎಂದು ಒತ್ತಡ ಹೇರಿದ್ರು‌‌. ಆದ್ರೆ, ಇದಕ್ಕೆ CWMA ಒಪ್ಪಿರಲಿಲ್ಲ. ಇದೀಗ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, ಹೆಚ್ಚು ನೀರು ಬಿಡುವುದಕ್ಕೆ ಸೂಚಿಸುವಂತೆ ಮನವಿ ಮಾಡಿದೆ.

ಕಾವೇರಿ ನೀರಿಗಾಗಿ ಎರಡು ರಾಜ್ಯ ಸರ್ಕಾರಗಳು ಕಾನೂನು ಹೋರಾಟ ನಡೆಸುತ್ತಿರುವ ಮಧ್ಯೆ ಕರ್ನಾಟಕದ ರೈತ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಕಾವೇರಿ ನೀರಿಗಾಗಿ ರೈತ ಸಂಘಟನೆಗಳು ಕೂಡ ಸುಪ್ರೀಂಗೆ ಅರ್ಜಿ ಸಲ್ಲಿಸಿವೆ.‌ ನಾವು ಬೆಳೆಗೆ ನೀರು ಕೇಳುತ್ತಿಲ್ಲ, ಕುಡಿಯಲು ಕೇಳುತ್ತಿದ್ದೇವೆ ಎಂದು ಮನವಿ ಮಾಡಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Wed, 6 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ