
ನವದೆಹಲಿ, (ಆಗಸ್ಟ್ 11): ತಮಿಳುನಾಡಿಗೆ 12 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ (Karnataka) ಕಾವೇರಿ ನಿರ್ವಹಣಾ ಪ್ರಾಧಿಕಾರ (CWMA) ಸಹ ನಿರ್ದೇಶನ ನೀಡಿದೆ. 15 ದಿನಗಳ ಕಾಲ ನಿತ್ಯ 3500 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸೂಚಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ)ಯ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮೇಲ್ಮನವಿ ಸಲ್ಲಿಸಿತ್ತು. ಆದ್ರೆ, ಸಿಡಬ್ಲ್ಯುಆರ್ಸಿ ಆದೇಶವನ್ನು ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕೂಡ ಎತ್ತಿ ಹಿಡಿದಿದೆ. ಆ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಕರ್ನಾಟಕಕ್ಕೆ ಮತ್ತೆ ಗಾಯದ ಮೇಲೆ ಬರೆ ಎಳೆದಿದೆ.
ತಮಿಳುನಾಡಿಗೆ ನಿತ್ಯ 3500 ಕ್ಯುಸೆಕ್ ನೀರು ಬಿಡಬೇಕೆಂಬ ಸಿಡಬ್ಲ್ಯುಆರ್ಸಿ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದ್ದರಿಂದ ಕರ್ನಾಟಕ ಸರ್ಕಾರ ಸಮಾಧಾನಗೊಂಡಿದ್ದು, CWMA ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದೆ. ವಾಡಿಕೆಗಿಂತ ಕಡಿಮೆ ಮಳೆ, ಹಾಗೂ ಕರ್ನಾಟಕದ ರೈತರು ಬೆಳೆದ ಬೆಳೆಗೂ ನೀರಿಲ್ಲ ಎನ್ನುವ ಅಂಶಗಳನ್ನಿಟ್ಟುಕೊಂಡು ಸುಪ್ರೀಂಕೋರ್ಟ್ನಲ್ಲಿ ಪ್ರಬಲ ವಾದ ಮಂಡಿಸಲು ಡಿಕೆ ಶಿವಕುಮಾರ್ ಸರ್ಕಾರ ಮುಂದಾಗಿದ್ದು, ಈ ಸಂಬಂಧ ನಾಳೆ (ಆಗಸ್ಟ 12) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಟೆಕ್ನಿಕಲ್ ಅಡ್ವೈಸರ್ , ಹಿರಿಯ ವಕೀಲರು , ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇನ್ನು ಸಭೆಯಲ್ಲಿ ಕರ್ನಾಟಕದ ಪರವಾಗಿ ಭಾಗಿಯಾಗಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದು, CWMA ಸಭೆ ಮಗಿದಿದ್ದು, CWRC ಸಭೆ ಶಿಫಾರಸ್ಸುನ್ನು ಆದೇಶವಾಗಿ ಮಾರ್ಪಾಡು ಮಾಡಿದೆ. ಪ್ರತಿ ದಿನ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಬೇಕು ಅಂತಾ ಹೇಳಿದೆ. ಈ ಬಗ್ಗೆ ಸರ್ಕಾರ ಮುಂದೆ ಕಾನೂನು ಹೋರಾಟ ನಡೆಸಲಿದೆ. ತಮಿಳುನಾಡು 40 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿದೆ. ನಾವು ಅಷ್ಟು ಪ್ರಮಾಣದ ನೀರು ನಾವು ಬಿಡಲು ಸಾಧ್ಯವಿಲ್ಲ ಅಂತಾ ವಾದ ಮಂಡಿಸಿದ್ದೇವೆ ಎಂದು ಹೇಳಿದರು.

ಸಿಡಬ್ಲ್ಯುಆರ್ಸಿ ಶಿಫಾರಸು ಪ್ರಶ್ನಿಸಿ ಸಿಡಬ್ಲ್ಯುಎಂಎಗೆ ಹೋಗಿದ್ದೆವು. ಆದ್ರೆ, ಸಿಡಬ್ಲ್ಯುಆರ್ಸಿ ಶಿಫಾರಸು ಪಾಲಿಸುವಂತೆ CWMA ಆದೇಶಿಸಿದೆ. 15 ದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
CWMA ಆದೇಶದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. CWMA ಮುಂದೆ ಸಮರ್ಥವಾಗಿ ವಾದ ಮಂಡನೆ ಮಾಡಿದ್ದೆವು. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಮಳೆ ಪ್ರಮಾಣ ಕಡಿಮೆ ಇರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ . ಸಿಡಬ್ಲ್ಯುಎಂಎ ಆದೇಶದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ರಾಜ್ಯದ ಕಾನೂನು ತಂಡದ ಜೊತೆ ಚರ್ಚೆ ನಡೆಸುತ್ತೇವೆ ಎಂದು ವಿವರಿಸಿದರು.
Published On - 5:27 pm, Tue, 11 August 26