AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute: ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ, ಕರ್ನಾಟಕಕ್ಕೆ ಜಲಾತಂಕ..!

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಅಕ್ಟೋಬರ್ 11) ಮತ್ತೊಂದು ಸಭೆ ಕರೆಯಲಾಗಿದೆ. ಒಂದು ದಿನ ಮುಂಚಿತವಾಗಿಯೇ ಸಭೆ ಕರೆಯಲಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳು ವರ್ಚುಯಲ್‌ ಮೂಲಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿಂದಿನ ಆದೇಶ ಅಕ್ಟೋಬರ್‌ 15ಕ್ಕೆ ಅವಧಿ ಮುಕ್ತಾಯವಾಗುತ್ತಿರುವುದರಿಂದ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

Cauvery Water Dispute: ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ, ಕರ್ನಾಟಕಕ್ಕೆ ಜಲಾತಂಕ..!
ಕೆಆರ್​ಎಸ್​ ಡ್ಯಾಂ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 11, 2023 | 7:19 AM

Share

ನವದೆಹಲಿ (ಅಕ್ಟೋಬರ್ 11): ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) (Cauvery Water Regulation Committee) ಮತ್ತೆ ಇಂದು (ಬುಧವಾರ) ಸಭೆ ಸೇರಲಿದೆ. ನವದೆಹಲಿಯ CWRC ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ(cauvery water) ನಿಗಮದ ಎಂ.ಡಿ. ಮಹೇಶ್ ಭಾಗಿಯಾಗಲಿದ್ದಾರೆ. ಇನ್ನು ತಮಿಳುನಾಡು, ಕೇರಳ, ಪುದುಚೇರಿ ಅಧಿಕಾರಿಗಳು, ವಕೀಲರು ಭಾಗವಹಿಸಲಿದ್ದಾರೆ. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಆದೇಶಿಸಿದ್ದ ಸಮಿತಿ, ಈ ಬಾರಿ ಯಾವ ಆದೇಶ ನೀಡಲಿದೆ ಎನ್ನುವ ಆತಂಕ ಮನೆಮಾಡಿದೆ.

ಕಾವೇರಿ ಜಲಾನಯನ ಪ್ರದೇಶದ ಹಲವು ತಾಲೂಕುಗಳಲ್ಲಿ ಬರ ಘೋಷಣೆಯಾಗಿರುವುದು ಸೇರಿ ರಾಜ್ಯದಲ್ಲಿ ನೀರಿನ ಕೊರತೆ ಕುರಿತು ಅಧಿಕಾರಿಗಳು ಮತ್ತೊಮ್ಮೆ ಸಭೆಯ ಗಮನಕ್ಕೆ ತರಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ.

ಇಂದಿನ ಸಭೆಯಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ? ಒಳಹರಿವು ಎಷ್ಟಿದೆ ಎಂಬುದರ ಮಾಹಿತಿ ಸಂಗ್ರಹಿಸಲಾಗುತ್ತದೆ. ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ಹೊಸ ಆದೇಶ ಬರುವ ಸಾಧ್ಯತೆ ಇದೆ. ತಮಿಳುನಾಡು ಸರ್ಕಾರ ಇಂದಿನ ಸಭೆಯಲ್ಲಿ ದಿನಕ್ಕೆ 13,000 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಲು ಮನವಿ ಮಾಡಲಿದೆ. ಆದ್ರೆ ಕರ್ನಾಟಕ ತನ್ನ ವಾದ ಮಂಡಿಸಲಿದ್ದು, ಕರ್ನಾಟಕದ ವಸ್ತುಸ್ಥಿತಿಯನ್ನ ವಿವರಿಸಲಿದೆ.

ಸೆಪ್ಟೆಂಬರ್‌ 29ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ದಿನಕ್ಕೆ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಅಕ್ಟೋಬರ್‌ 15ಕ್ಕೆ ಅವಧಿ ಮುಕ್ತಾಯವಾಗುತ್ತಿರುವುದರಿಂದ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ