AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಒತ್ತಡಕ್ಕೆ ಮಣಿದು ನೀರು ಬಿಡುತ್ತಿದ್ದೀರಿ: ಸಿದ್ದರಾಮಯ್ಯ ಟ್ವೀಟ್​ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

ಕಾವೇರಿ ವಿವಾದದ ಬಗ್ಗೆ 32 ಬಿಜೆಪಿ ಸಂಸದರು ಪ್ರಧಾನಿಯೊಂದಿಗೆ ಮೌನ ವಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಜೆಪಿ ನಡ್ಡಾ ಅವರ ವಿಡಿಯೋ ಹಂಚಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಇದು ನಿಮ್ಮ ಅನುಮಾನಾಸ್ಪದ ರಾಜಕೀಯವನ್ನು ಬಹಿರಂಗಪಡಿಸುತ್ತದೆ ಎಂದಿದ್ದಾರೆ.

ಡಿಎಂಕೆ ಒತ್ತಡಕ್ಕೆ ಮಣಿದು ನೀರು ಬಿಡುತ್ತಿದ್ದೀರಿ: ಸಿದ್ದರಾಮಯ್ಯ ಟ್ವೀಟ್​ಗೆ ರಾಜೀವ್ ಚಂದ್ರಶೇಖರ್ ತಿರುಗೇಟು
ರಾಜೀವ್ ಚಂದ್ರಶೇಖರ್ ಮತ್ತು ಸಿದ್ದರಾಮಯ್ಯ
Rakesh Nayak Manchi
|

Updated on: Sep 29, 2023 | 11:19 PM

Share

ನವದೆಹಲಿ, ಸೆ.29: ಕಾವೇರಿ ವಿವಾದದ (Cauvery Dispute) ಬಗ್ಗೆ 32 ಬಿಜೆಪಿ ಸಂಸದರು ಪ್ರಧಾನಿಯೊಂದಿಗೆ ಮೌನ ವಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿ ಜೆಪಿ ನಡ್ಡಾ ಅವರ ವಿಡಿಯೋ ಹಂಚಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ, ವಿದ್ಯುನ್ಮಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar), ಇದು ನಿಮ್ಮ ಅನುಮಾನಾಸ್ಪದ ರಾಜಕೀಯವನ್ನು ಬಹಿರಂಗಪಡಿಸುತ್ತದೆ ಎಂದಿದ್ದಾರೆ.

ನಿಮ್ಮ ಸರ್ಕಾರದ ಜವಾಬ್ದಾರಿಯನ್ನು ಸಂಸದರು ಮತ್ತು ಭಾರತ ಸರ್ಕಾರದ ಮೇಲೆ ಹಾಕುವ ಸ್ಮಾರ್ಟ್ ತಂತ್ರ ಎಂದು ನೀವು ಭಾವಿಸಬಹುದು, ಆದರೆ ಇದು ನಿಮ್ಮ ಅನುಮಾನಾಸ್ಪದ ರಾಜಕೀಯವನ್ನು ಬಹಿರಂಗಪಡಿಸುತ್ತದೆ ಎಂದು ರಾಜೀವ್ ಟ್ವೀಟ್ ಮಾಡಿದ್ದಾರೆ.

ವಿವಾದ ಸಂಬಂಧ ನೀವು ಯಾರೊಂದಿಗೂ ಸಮಾಲೋಚಿಸಿಲ್ಲ. ನಿಮ್ಮ ಯುಪಿಎ/ಇಂಡಿಯಾ ಮೈತ್ರಿ ಕೂಟದ ಡಿಎಂಕೆ ಮತ್ತು ನಿಮ್ಮ ರಾಜಕೀಯದ ಒತ್ತಡಕ್ಕೆ ಮಣಿದು ನಮ್ಮ ರೈತ ಸಹೋದರರಿಗೆ ಮೀಸಲಾದ ಅಮೂಲ್ಯವಾದ ನೀರನ್ನು ಬಿಡುಗಡೆ ಮಾಡಿದ್ದೀರಿ ಎಂದು ಟೀಕಿಸಿದರು.

ಇದನ್ನೂ ಓದಿ: ತಮಿಳುನಾಡುಗೆ ನೀರು ಬಿಡುವಂತೆ ಸಿಡಬ್ಲ್ಯೂಎಂಎ ಆದೇಶ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಅದೇ ರಾಗ ಅದೇ ತಾಳ!

ಗ್ಯಾರಂಟಿಗಳಿಗಾಗಿ ಜನರು ನಿಮಗೆ ಮತ ಚಲಾಯಿಸಿದ್ದಾರೆ. ಇತರರನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ರೈತರು, ನಮ್ಮ ಕೃಷಿ ಆರ್ಥಿಕತೆ ಮತ್ತು ಕರ್ನಾಟಕ ಮತ್ತು ಬೆಂಗಳೂರಿನ ಜನರ ಜೀವನ ಮತ್ತು ಜೀವನೋಪಾಯವನ್ನು ಖಾತರಿಪಡಿಸಲು ಕಾರ್ಯನಿರ್ವಹಿಸಿ ಎಂದರು.

ಭ್ರಷ್ಟ ಮತ್ತು ಅವಕಾಶವಾದಿ ಕಾಂಗ್ರೆಸ್ ರಾಜಕಾರಣದ ಬಲಿಪೀಠದಲ್ಲಿ ಕರ್ನಾಟಕದ ಜನರಿಗೆ ದ್ರೋಹ ಮಾಡಬೇಡಿ. ಇದಕ್ಕೆ ನಾವು ನಿಮಗೆ ಅವಕಾಶ ನೀಡುವುದಿಲ್ಲ. ಸುಳ್ಳು ಹೇಳುವುದನ್ನು ನಿಲ್ಲಿಸಿ, ವಿಚಲಿತರಾಗುವುದನ್ನು ನಿಲ್ಲಿಸಿ ಮತ್ತು ನಮ್ಮ ರೈತರ ಜೀವನವನ್ನು ಖಾತರಿಪಡಿಸಲು ಕಾರ್ಯನಿರ್ವಹಿಸಿ ಎಂದರು.

ಸಿದ್ದರಾಮಯ್ಯ ಟ್ವೀಟ್​ನಲ್ಲಿ ಹೇಳಿದ್ದೇನು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಭಾಷಣದ ವಿಡಿಯೋವನ್ನು ಹಂಚಿಕೊಂಡ ಸಿದ್ದರಾಮಯ್ಯ ಅವರು, “ನ್ಯಾಯಕ್ಕಾಗಿ ಕರ್ನಾಟಕದ ಕರೆ ಜೋರಾಗಿದೆ ಮತ್ತು ಸ್ಪಷ್ಟವಾಗಿದೆ. ಕಾವೇರಿ ವಿವಾದದ ಬಗ್ಗೆ 32 ಬಿಜೆಪಿ ಸಂಸದರು ಪ್ರಧಾನಿಯೊಂದಿಗೆ ಮೌನ ವಹಿಸಿದ್ದಾರೆ. ನ್ಯಾಯಕ್ಕಾಗಿ ನಮ್ಮ ರಾಜ್ಯದ ಅನ್ವೇಷಣೆ ಮುಂದುವರೆದಿದೆ. ನಮ್ಮ ಚುನಾಯಿತ ಪ್ರತಿನಿಧಿಗಳು ಕೇವಲ ಪ್ರಧಾನಿಯನ್ನು ಸಮರ್ಥಿಸಿಕೊಳ್ಳಲು ಸೀಮಿತವಾಗಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು