AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಹೊಡೆತದ ಮೇಲೆ ಹೊಡೆತ: ಮತ್ತೆ ತಮಿಳುನಾಡಿಗೆ ಕಾವೇರಿ ನಿರು ಹರಿಸಲು ಸೂಚನೆ

cauvery water Dispute: ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ಸೂಚಿಸಿದೆ.

ಕರ್ನಾಟಕಕ್ಕೆ  ಹೊಡೆತದ ಮೇಲೆ ಹೊಡೆತ: ಮತ್ತೆ ತಮಿಳುನಾಡಿಗೆ ಕಾವೇರಿ ನಿರು ಹರಿಸಲು ಸೂಚನೆ
ಕಾವೇರಿ ನೀರುImage Credit source: FILE PHOTO
TV9 Web
| Edited By: |

Updated on:Nov 23, 2023 | 1:53 PM

Share

ನವದೆಹಲಿ, (ನವೆಂಬರ್ 23): ಕಾವೇರಿ ನದಿ ನೀರಿನ(cauvery water )ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಲೇ ಇವೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(cauvery water management authority ) ಕರ್ನಾಟಕಕ್ಕೆ ಸೂಚಿಸಿದೆ. ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.

ಕರ್ನಾಟಕ-ತಮಿಳುನಾಡು ವಾದ

ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿದೆ. ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.

ತಮಿಳುನಾಡಿನ ಈ ವಾದಕ್ಕೆ ಕರ್ನಾಟಕ ಕೌಂಟರ್ ಕೊಟ್ಟಿದ್ದು, ಕರ್ನಾಟಕದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದಾರೆ.

ಇನ್ನು ನವೆಂಬರ್ 3ರ ಸಭೆಯಲ್ಲಿ ತಮಿಳುನಅಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ನೀರು ಹರಿಸುವಂತೆ ಹೇಳಿದೆ. ಇದರಿಂದ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಲೇ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Thu, 23 November 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?