AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute: ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

Cauvery Water Dispute: ಕಾವೇರಿ ನದಿ ನೀರು ವಿವಾದ ಸಂಬಂಧ ಇಂದು (ಅಕ್ಟೋಬರ್ 30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಮಳೆ ಇಲ್ಲದೇ ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ಇದೆ. ಇದರ ನಡುವೆ ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎನ್ನುವ ಆತಂಕ ಎದುರಾಗಿದೆ.

Cauvery Water Dispute: ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ
ಕಾವೇರಿ ನೀರು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 30, 2023 | 8:36 AM

ನವದೆಹಲಿ, (ಅಕ್ಟೋಬರ್ 30): ಕಾವೇರಿ ನದಿ ನೀರು ವಿವಾದ (Cauvery Water Dispute) ಸಂಬಂಧ ಇಂದು (ಅಕ್ಟೋಬರ್ 30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ ಅಂತ್ಯದ ವರಗೆ 3 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಮಾಡಿದ್ದ ಆದೇಶ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ.

ಕೆಲ ದಿನಗಳ ಹಿಂದಷ್ಟೇ ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಸಂಪುಟ ಸಮಿತಿಗೆ ಸೂಚನೆ ನೀಡಿತ್ತು. ಇದರ ನಡುವೆ ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಈ ವರ್ಷ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಮಳೆ ಇಲ್ಲದೇ ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ಕೆಲವೆಡೆ ಇದೆ. ಡ್ಯಾಂಗಳು ಬತ್ತಿ ಹೋಗಿವೆ. ಇದರ ಮಧ್ಯೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ನೀಡುತ್ತಾ ಬಂದಿವೆ. ಆದೇಶದಂತೆ ಪ್ರಸ್ತುತ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುತ್ತಿದೆ. ಇದೀಗ ಇದರ ಕಾಲಾವಧಿ ಅಂತ್ಯವಾಗಲಿದೆ. ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದಾದ್ಯಂತ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ. ಸದ್ಯ ಈಗ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎಂಬ ಆತಂಕ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:29 am, Mon, 30 October 23

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ