AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute: ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

Cauvery Water Dispute: ಕಾವೇರಿ ನದಿ ನೀರು ವಿವಾದ ಸಂಬಂಧ ಇಂದು (ಅಕ್ಟೋಬರ್ 30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಮಳೆ ಇಲ್ಲದೇ ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ಇದೆ. ಇದರ ನಡುವೆ ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎನ್ನುವ ಆತಂಕ ಎದುರಾಗಿದೆ.

Cauvery Water Dispute: ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ
ಕಾವೇರಿ ನೀರು
TV9 Web
| Edited By: |

Updated on:Oct 30, 2023 | 8:36 AM

Share

ನವದೆಹಲಿ, (ಅಕ್ಟೋಬರ್ 30): ಕಾವೇರಿ ನದಿ ನೀರು ವಿವಾದ (Cauvery Water Dispute) ಸಂಬಂಧ ಇಂದು (ಅಕ್ಟೋಬರ್ 30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ ಅಂತ್ಯದ ವರಗೆ 3 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಮಾಡಿದ್ದ ಆದೇಶ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ.

ಕೆಲ ದಿನಗಳ ಹಿಂದಷ್ಟೇ ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕ ಸಂಪುಟ ಸಮಿತಿಗೆ ಸೂಚನೆ ನೀಡಿತ್ತು. ಇದರ ನಡುವೆ ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದ ರಾಜ್ಯ ಸಂಪುಟ ಸಮಿತಿ ಕೇಂದ್ರ ಕೃಷಿ, ಗೃಹ ಕಾರ್ಯದರ್ಶಿ ಭೇಟಿಯಾಗಿ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ: ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಲು ರಾಜ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ

ಈ ವರ್ಷ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಮಳೆ ಇಲ್ಲದೇ ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ಕೆಲವೆಡೆ ಇದೆ. ಡ್ಯಾಂಗಳು ಬತ್ತಿ ಹೋಗಿವೆ. ಇದರ ಮಧ್ಯೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ನೀಡುತ್ತಾ ಬಂದಿವೆ. ಆದೇಶದಂತೆ ಪ್ರಸ್ತುತ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುತ್ತಿದೆ. ಇದೀಗ ಇದರ ಕಾಲಾವಧಿ ಅಂತ್ಯವಾಗಲಿದೆ. ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದಾದ್ಯಂತ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿವೆ. ಸದ್ಯ ಈಗ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎಂಬ ಆತಂಕ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:29 am, Mon, 30 October 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ