AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​

Cauvery Water Sharing Dispute; ಕೊನೆಯಲ್ಲಿ ಸೆಪ್ಟೆಂಬರ್ 11ರಂದು ವಿಚಾರಣೆ ನಡೆಸುಂತೆ ಕರ್ನಾಟಕದ ವಕೀಲರು ಒತ್ತಾಯಿಸಿದರು. ಆದರೆ, ಸೋಮವಾರ ವಿಚಾರಣೆ ನಡೆಸುವಂತೆ ತಮಿಳುನಾಡು ವಕೀಲರು ಆಗ್ರಹಿಸಿದರು. ಕೊನೆಯದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ರ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್
ಹರೀಶ್ ಜಿ.ಆರ್​.
| Updated By: Ganapathi Sharma|

Updated on: Sep 01, 2023 | 2:39 PM

Share

ನವದೆಹಲಿ, ಸೆಪ್ಟೆಂಬರ್ 1: ಕಾವೇರಿ ನೀರು ಹಂಚಿಕೆ ವಿವಾದಕ್ಕೆ (Cauvery Dispute) ಸಂಬಂಧಿಸಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಪರಿಗಣಿಸಿದ ಸುಪ್ರೀಂ ಕೋರ್ಟ್​​​ (Supreme Court), ವಿಚಾರಣೆಯನ್ನು ಸೆಪ್ಟೆಂಬರ್ 6ರ ಬುಧವಾರಕ್ಕೆ ಮುಂದೂಡಿಕೆ ಮಾಡಿದೆ. ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸಿದ್ದೇವೆ ಎಂದು ಕರ್ನಾಟಕ ಪರ ವಕೀಲ ಶ್ಯಾಮ್ ದಿವಾನ್ ಸುಪ್ರೀಂ ಕೋರ್ಟ್​ಗೆ ತಿಳಿಸಿದರು. ಆದರೆ, 5000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ. ಕರ್ನಾಟಕವು ಹೆಚ್ಚು ನೀರು ಹರಿಸಬೇಕು ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದರು.

ಕೊನೆಯಲ್ಲಿ ಸೆಪ್ಟೆಂಬರ್ 11ರಂದು ವಿಚಾರಣೆ ನಡೆಸುಂತೆ ಕರ್ನಾಟಕದ ವಕೀಲರು ಒತ್ತಾಯಿಸಿದರು. ಆದರೆ, ಸೋಮವಾರ ವಿಚಾರಣೆ ನಡೆಸುವಂತೆ ತಮಿಳುನಾಡು ವಕೀಲರು ಆಗ್ರಹಿಸಿದರು. ಕೊನೆಯದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ರ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

ವಿಚಾರಣೆ ಇಂದು ನಡೆಯುವುದೇ ಅನುಮಾನವಾಗಿತ್ತು. ನ್ಯಾಯಮೂರ್ತಿ ಗವಾಯಿ ನೇತೃತ್ವದ ಪೀಠದ ವಿಚಾರಣಾ ಪಟ್ಟಿಯಲ್ಲಿ ಪ್ರಕರಣದ ಬಗ್ಗೆ ಉಲ್ಲೇಖಿಸದೇ ಇರುವುದರಿಂದ ಇಂದು ವಿಚಾರಣೆ ನಡೆಯುವುದು ಅನುಮಾನ ಎಂದು ವರದಿಯಾಗಿತ್ತು. ಆದರೆ, ಕೊನೆಗೂ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಕೈಗೆತ್ತಿಕೊಂಡಿತು.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ತಮಿಳುನಾಡು ಹೇಳಿದ್ದೇನು?

ಸುಪ್ರೀಂ ಕೋರ್ಟ್​​ಗೆ ಮೊರೆ ಹೋದ ನಂತರ ಕರ್ನಾಟಕ ಹೆಚ್ಚುವರಿ ನೀರು ಹರಿಸಿದೆ. ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ಲಭ್ಯತೆ ಮಾಹಿತಿ ಆಧಾರದಲ್ಲಿ ನೀರು ಹರಿಸಲಿ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಗುರುವಾರ ಅಫಿಡವಿಟ್ ಸಲ್ಲಿಸಿತ್ತು. ಜೂನ್, ಜುಲೈ, ಆಗಸ್ಟ್​ ತಿಂಗಳಲ್ಲಿ ಕರ್ನಾಟಕವು 80 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಕೇವಲ 30 ಟಿಎಂಸಿ ನೀರು ಮಾತ್ರ ಹರಿಸಲಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದ್ದರೂ ಮಳೆ ಕೊರತೆ ನೆಪ ಹೇಳಿ ಪೂರ್ಣಪ್ರಮಾಣದ ನೀರು ಬಿಡುಗಡೆ ಮಾಡಿಲ್ಲ ಎಂದು ಅಫಿಡವಿಟ್​​ನಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್​ಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ