AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​

Cauvery Water Sharing Dispute; ಕೊನೆಯಲ್ಲಿ ಸೆಪ್ಟೆಂಬರ್ 11ರಂದು ವಿಚಾರಣೆ ನಡೆಸುಂತೆ ಕರ್ನಾಟಕದ ವಕೀಲರು ಒತ್ತಾಯಿಸಿದರು. ಆದರೆ, ಸೋಮವಾರ ವಿಚಾರಣೆ ನಡೆಸುವಂತೆ ತಮಿಳುನಾಡು ವಕೀಲರು ಆಗ್ರಹಿಸಿದರು. ಕೊನೆಯದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ರ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್
ಹರೀಶ್ ಜಿ.ಆರ್​.
| Edited By: |

Updated on: Sep 01, 2023 | 2:39 PM

Share

ನವದೆಹಲಿ, ಸೆಪ್ಟೆಂಬರ್ 1: ಕಾವೇರಿ ನೀರು ಹಂಚಿಕೆ ವಿವಾದಕ್ಕೆ (Cauvery Dispute) ಸಂಬಂಧಿಸಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಪರಿಗಣಿಸಿದ ಸುಪ್ರೀಂ ಕೋರ್ಟ್​​​ (Supreme Court), ವಿಚಾರಣೆಯನ್ನು ಸೆಪ್ಟೆಂಬರ್ 6ರ ಬುಧವಾರಕ್ಕೆ ಮುಂದೂಡಿಕೆ ಮಾಡಿದೆ. ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸಿದ್ದೇವೆ ಎಂದು ಕರ್ನಾಟಕ ಪರ ವಕೀಲ ಶ್ಯಾಮ್ ದಿವಾನ್ ಸುಪ್ರೀಂ ಕೋರ್ಟ್​ಗೆ ತಿಳಿಸಿದರು. ಆದರೆ, 5000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ. ಕರ್ನಾಟಕವು ಹೆಚ್ಚು ನೀರು ಹರಿಸಬೇಕು ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದರು.

ಕೊನೆಯಲ್ಲಿ ಸೆಪ್ಟೆಂಬರ್ 11ರಂದು ವಿಚಾರಣೆ ನಡೆಸುಂತೆ ಕರ್ನಾಟಕದ ವಕೀಲರು ಒತ್ತಾಯಿಸಿದರು. ಆದರೆ, ಸೋಮವಾರ ವಿಚಾರಣೆ ನಡೆಸುವಂತೆ ತಮಿಳುನಾಡು ವಕೀಲರು ಆಗ್ರಹಿಸಿದರು. ಕೊನೆಯದಾಗಿ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 6ರ ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು.

ವಿಚಾರಣೆ ಇಂದು ನಡೆಯುವುದೇ ಅನುಮಾನವಾಗಿತ್ತು. ನ್ಯಾಯಮೂರ್ತಿ ಗವಾಯಿ ನೇತೃತ್ವದ ಪೀಠದ ವಿಚಾರಣಾ ಪಟ್ಟಿಯಲ್ಲಿ ಪ್ರಕರಣದ ಬಗ್ಗೆ ಉಲ್ಲೇಖಿಸದೇ ಇರುವುದರಿಂದ ಇಂದು ವಿಚಾರಣೆ ನಡೆಯುವುದು ಅನುಮಾನ ಎಂದು ವರದಿಯಾಗಿತ್ತು. ಆದರೆ, ಕೊನೆಗೂ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಕೈಗೆತ್ತಿಕೊಂಡಿತು.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ತಮಿಳುನಾಡು ಹೇಳಿದ್ದೇನು?

ಸುಪ್ರೀಂ ಕೋರ್ಟ್​​ಗೆ ಮೊರೆ ಹೋದ ನಂತರ ಕರ್ನಾಟಕ ಹೆಚ್ಚುವರಿ ನೀರು ಹರಿಸಿದೆ. ಕರ್ನಾಟಕದ ಡ್ಯಾಂಗಳಲ್ಲಿ ನೀರಿನ ಲಭ್ಯತೆ ಮಾಹಿತಿ ಆಧಾರದಲ್ಲಿ ನೀರು ಹರಿಸಲಿ ಎಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಗುರುವಾರ ಅಫಿಡವಿಟ್ ಸಲ್ಲಿಸಿತ್ತು. ಜೂನ್, ಜುಲೈ, ಆಗಸ್ಟ್​ ತಿಂಗಳಲ್ಲಿ ಕರ್ನಾಟಕವು 80 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಕೇವಲ 30 ಟಿಎಂಸಿ ನೀರು ಮಾತ್ರ ಹರಿಸಲಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದ್ದರೂ ಮಳೆ ಕೊರತೆ ನೆಪ ಹೇಳಿ ಪೂರ್ಣಪ್ರಮಾಣದ ನೀರು ಬಿಡುಗಡೆ ಮಾಡಿಲ್ಲ ಎಂದು ಅಫಿಡವಿಟ್​​ನಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್​ಗೆ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್