AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಪ್​ಲೈನ್​ನಲ್ಲಿ ಸೋರಿಕೆ: ಶುಕ್ರವಾರ ಬೆಂಗಳೂರಿನ ಈ ಏರಿಯಾಗಳಿಗೆ ಬರಲ್ಲ ಕಾವೇರಿ ನೀರು

ತುರ್ತು ಕಾರ್ಯಾಚರಣೆ ಇರುವ ಕಾರಣ ಬೆಂಗಳೂರಿನ ಹಲವು ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆ ಏರಿಯಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪೈಪ್​ಲೈನ್​ನಲ್ಲಿ ಸೋರಿಕೆ: ಶುಕ್ರವಾರ ಬೆಂಗಳೂರಿನ ಈ ಏರಿಯಾಗಳಿಗೆ ಬರಲ್ಲ ಕಾವೇರಿ ನೀರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 10:01 PM

Share

ಬೆಂಗಳೂರು: ತೊರೆಕಾಡನಹಳ್ಳಿಯಲ್ಲಿನ ಪೈಪ್​ಲೈನ್​ನಲ್ಲಿ ನೀರು ಸೋರಿಕೆ ಆದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 4ನೇ ಹಂತದ 2ನೇ ಘಟ್ಟದ 2500 ಮಿ ಮೀ ವ್ಯಾಸದ ಬಿಎಸ್ ವಾಲ್ವ್ ಸಂಖ್ಯೆ 1ರ 250ಮಿ.ಮೀ ವ್ಯಾಸದ ಮಾರ್ಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತುರ್ತು ಕಾಮಗಾರಿ ನಡೆಯಲಿದೆ.

ತುರ್ತು ಕಾರ್ಯಾಚರಣೆ ಇರುವ ಕಾರಣ ಬೆಂಗಳೂರಿನ ಹಲವು ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆ ಏರಿಯಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಂದಿನಿ ಲೇಔಟ್, ಆರ್.ಆರ್ ನಗರ, ರಾಜಾಜಿನಗರ, ನಾಗರಬಾವಿ, ಯಲಹಂಕ, ಬ್ಯಾಟರಾಯನಪುರ, ಹೆಚ್ಆರ್​ಸಿಆರ್, ದಾಸರಹಳ್ಳಿ, ಚಂದ್ರ ಲೇಔಟ್, ಕೆಂಗೇರಿ, ಬಾಣಸವಾಡಿ ಮತ್ತು ಉತ್ತರ ವಿಭಾಗದ ಬಹುತೇಕ ಭಾಗಗಳಲ್ಲಿ ನೀರು ಪೂರೈಕೆ ಇರುವುದಿಲ್ಲ.

ಉಳಿದಂತೆ ಅಂಜನಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಂಬೂಸವಾರಿ ದಿಣ್ಣೆ, ಕೊತ್ತನೂರು ದಿಣ್ಣೆ, ಕೋಡಿ ಚಿಕ್ಕನ ಹಳ್ಳಿ, ಬೊಮ್ಮನಹಳ್ಳಿ, ಕೂಡ್ಲು, ಹೊಂಗಸಂದ್ರ, ಮಂಗಮ್ಮನಪಾಳ್ಯ, ಮಾರತ್ ಹಳ್ಳಿ, ಹೂಡಿ, ಎ.ನಾರಾಯಣಪುರ, ಕೆ.ಆರ್ ಪುರಂ, ರಾಮಮೂರ್ತಿ ನಗರ, ವೈಟ್ ಫೀಲ್ಡ್, ಸಿ.ವಿ.ರಾಮನ್ ನಗರ, ಹಳೆ ಏರ್​ಪೋರ್ಟ್ ರಸ್ತೆ, ಹೆಚ್​ಆರ್​ಬಿಆರ್ ಲೇಔಟ್, ಒಎಂಬಿಆರ್ ಲೇಔಟ್, ರಾಮಯ್ಯ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ಬೆಂಗಳೂರು-ಮೈಸೂರು ನಡುವೆ ಶೀಘ್ರ 10 ಪಥದ ಎಕ್ಸ್​ಪ್ರೆಸ್ ವೇ: ಗೋವಿಂದ ಕಾರಜೋಳ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ