AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿ: ಚಾರ್ಜ್‌ಶೀಟ್ ಸಲ್ಲಿಸಿದ CBI

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ. ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ […]

ಒಂದಂಕಿ ಲಾಟರಿ:  ಚಾರ್ಜ್‌ಶೀಟ್ ಸಲ್ಲಿಸಿದ CBI
ಸಾಧು ಶ್ರೀನಾಥ್​
|

Updated on:Feb 06, 2020 | 4:10 PM

Share

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ.

ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸುಳ್ಳು ಕೇಸ್ ದಾಖಲು ಮಾಡಿದ ಆರೋಪದಲ್ಲಿ 10 ಮಂದಿ ಪೊಲೀಸರ ವಿರುದ್ದ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೆಸರನ್ನ ಉದ್ದೇಶಪೂರ್ವಕವಾಗಿ ತಳಕು ಹಾಕಲಾಗಿತ್ತು. ಪಾರಿರಾಜನ್ ಫೋನ್ ಮಾಡಿದ್ದ ಸುಳಿವನ್ನ ಬಂಡವಾಳವಾಗಿಟ್ಟುಕೊಂಡು ನನ್ನ ಹೆಸರನ್ನ ಸೇರಿಸಿದ್ರು. ನಾನು ದೊಡ್ಡ ಹಗರಣವನ್ನ ಮಾಡಿದ ರೀತಿ ಬಿಂಬಿಸಲಾಗಿತ್ತು. ಚಾರ್ಜ್​ಶೀಟ್‌ನಲ್ಲಿ ಎಲ್ಲೂ ನನ್ನ ಹೆಸರು ಉಲ್ಲೇಖವಾಗಿಲ್ಲ ಎಂದು ಟಿವಿ9ಗೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇದೇ ಪ್ರಕರಣದಿಂದ 24 ಗಂಟೆಗಳಲ್ಲಿ ನಾನು ಅಮಾನತಾಗಿದ್ದೆ. ಸಾರ್ವಜನಿಕರಲ್ಲಿ ನನ್ನ ಬಗ್ಗೆ ತಪ್ಪಿತಸ್ಥನಂತೆ ಬಿಂಬಿಸಲಾಗಿತ್ತು. ಒಂದಂಕಿ ಲಾಟರಿ ಪ್ರಕರಣದಿಂದ ನನಗೆ ವೇತನವೂ ಆಗಿಲ್ಲ. ದೇವರು ನನ್ನನ್ನು ಕಾಪಾಡಿದ್ದಾನೆ ನನಗೆ ನ್ಯಾಯ ಸಿಕ್ಕಿದೆ ಎಂದು ಅಲೋಕ್ ಕುಮಾರ್ ಪ್ರಕರಣದಿಂದಾದ ನೋವನ್ನು ಮತ್ತು ತಮಗೆ ಸಿಕ್ಕಜಯಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

Published On - 3:50 pm, Thu, 6 February 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ