AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಲಾಟರಿ: ಚಾರ್ಜ್‌ಶೀಟ್ ಸಲ್ಲಿಸಿದ CBI

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ. ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ […]

ಒಂದಂಕಿ ಲಾಟರಿ:  ಚಾರ್ಜ್‌ಶೀಟ್ ಸಲ್ಲಿಸಿದ CBI
ಸಾಧು ಶ್ರೀನಾಥ್​
|

Updated on:Feb 06, 2020 | 4:10 PM

Share

ಬೆಂಗಳೂರು: ಒಂದಂಕಿ ಲಾಟರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ. ADGP ಅಲೋಕ್ ಕುಮಾರ್, ಧರಣೇಂದ್ರ ಹಾಗೂ ಪ್ರಕರಣದ ಪ್ರಮುಖ ಆರೋಪಿ ಪಾರಿರಾಜನ್​ಗೂ ಕೂಡ ಕ್ಲೀನ್‌ಚಿಟ್ ನೀಡಲಾಗಿದೆ.

ನಿವೃತ್ತ ಐಜಿ ಸೇರಿ 10 ಜನರ ವಿರುದ್ಧ ಸಿಬಿಐ ಅಧಿಕಾರಿಗಳಿಂದ ಬೆಂಗಳೂರಿನ ಸಿಬಿಐ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ನಿವೃತ್ತ ಐಜಿ ಪದ್ಮನಯನ ಮೊದಲನೇ ಆರೋಪಿ. ಇನ್ಸ್‌ಪೆಕ್ಟರ್ ಕನಕಲಕ್ಷ್ಮೀ ಎರಡನೇ ಆರೋಪಿ. ಜಿ.ಟಿ.ರಾಮಸ್ವಾಮಿ, ಸಿ.ಆರ್.ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ ಮತ್ತು ರವಿಕುಮಾರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸುಳ್ಳು ಕೇಸ್ ದಾಖಲು ಮಾಡಿದ ಆರೋಪದಲ್ಲಿ 10 ಮಂದಿ ಪೊಲೀಸರ ವಿರುದ್ದ ಜಾರ್ಜ್ ಶೀಟ್ ಸಲ್ಲಿಸಲಾಗಿದೆ.

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೆಸರನ್ನ ಉದ್ದೇಶಪೂರ್ವಕವಾಗಿ ತಳಕು ಹಾಕಲಾಗಿತ್ತು. ಪಾರಿರಾಜನ್ ಫೋನ್ ಮಾಡಿದ್ದ ಸುಳಿವನ್ನ ಬಂಡವಾಳವಾಗಿಟ್ಟುಕೊಂಡು ನನ್ನ ಹೆಸರನ್ನ ಸೇರಿಸಿದ್ರು. ನಾನು ದೊಡ್ಡ ಹಗರಣವನ್ನ ಮಾಡಿದ ರೀತಿ ಬಿಂಬಿಸಲಾಗಿತ್ತು. ಚಾರ್ಜ್​ಶೀಟ್‌ನಲ್ಲಿ ಎಲ್ಲೂ ನನ್ನ ಹೆಸರು ಉಲ್ಲೇಖವಾಗಿಲ್ಲ ಎಂದು ಟಿವಿ9ಗೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇದೇ ಪ್ರಕರಣದಿಂದ 24 ಗಂಟೆಗಳಲ್ಲಿ ನಾನು ಅಮಾನತಾಗಿದ್ದೆ. ಸಾರ್ವಜನಿಕರಲ್ಲಿ ನನ್ನ ಬಗ್ಗೆ ತಪ್ಪಿತಸ್ಥನಂತೆ ಬಿಂಬಿಸಲಾಗಿತ್ತು. ಒಂದಂಕಿ ಲಾಟರಿ ಪ್ರಕರಣದಿಂದ ನನಗೆ ವೇತನವೂ ಆಗಿಲ್ಲ. ದೇವರು ನನ್ನನ್ನು ಕಾಪಾಡಿದ್ದಾನೆ ನನಗೆ ನ್ಯಾಯ ಸಿಕ್ಕಿದೆ ಎಂದು ಅಲೋಕ್ ಕುಮಾರ್ ಪ್ರಕರಣದಿಂದಾದ ನೋವನ್ನು ಮತ್ತು ತಮಗೆ ಸಿಕ್ಕಜಯಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

Published On - 3:50 pm, Thu, 6 February 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ