AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​

ಬಿಜೆಪಿ ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆಯ ವೇಳೆ ಬೆಚ್ಚಿಬೀಳಿಸುವ ವಿಷಯ ಬಯಲಾಗಿದೆ ಎಂದು ತಿಳಿದುಬಂದಿದೆ. ಹೌದು, ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವವರ ಹತ್ಯೆಗೇ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​
KUSHAL V
|

Updated on: Dec 13, 2020 | 12:08 PM

Share

ಧಾರವಾಡ: ಬಿಜೆಪಿ ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆಯ ವೇಳೆ ಬೆಚ್ಚಿಬೀಳಿಸುವ ವಿಷಯ ಬಯಲಾಗಿದೆ ಎಂದು ತಿಳಿದುಬಂದಿದೆ. ಹೌದು, ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವವರ ಹತ್ಯೆಗೇ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಈ ಆರೋಪ ಕೇಳಿಬಂದಿದ್ದು ಬೆಂಗಳೂರು ಮೂಲದ ರೌಡಿಗೆ ಸುಪಾರಿ ನೀಡಿರುವ ಮಾಹಿತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಸಿಬಿಐಗೆ ವಹಿಸುತ್ತಿದ್ದಂತೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ ಹತ್ಯೆಗೆ ಸಂಚು ಮಾಡಿರುವ ಆರೋಪ ಕೇಳಿಬಂದಿದೆ.

ಸಾಕ್ಷ್ಯ ಮುಚ್ಚಿ ಹಾಕುವುದಕ್ಕೆ ಮುತ್ತಗಿಯ ಕೊಲೆಗೆ ಸ್ಕೆಚ್ ನಡೆಸಲಾಗಿತ್ತು ಎಂಬ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ, ಯೋಗೀಶ್ ಸುಪಾರಿ ಬಗ್ಗೆ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಮುತ್ತಗಿ ಹತ್ಯೆಯಾದ್ರೆ ಕೇಸ್ ಮುಚ್ಚಿಹಾಕಬಹುದೆಂಬ ಪ್ಲ್ಯಾನ್ ನಡೆದಿತ್ತು ಎಂದು ತನಿಖೆ ವೇಳೆ ಮಾಹಿತಿ ಬಯಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ, ಹತ್ಯೆ ಪ್ರಕರಣವನ್ನು ಯೋಗೀಶ್ ಗೌಡ ಸಹೋದರ ಗುರುನಾಥ ಗೌಡರ ತಲೆಗೆ ಕಟ್ಟೋ ಪ್ಲ್ಯಾನ್ ಸಹ ನಡೆದಿತ್ತು ಎಂದು ಹೇಳಲಾಗಿದೆ.

ಬಸವರಾಜ್ ಮುತ್ತಗಿಗೆ‌ ಸಿಬಿಐ ಬುಲಾವ್ ಇತ್ತ, ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿಗೆ‌ ಸಿಬಿಐ ಬುಲಾವ್ ನೀಡಿತ್ತು. ಹಾಗಾಗಿ, ಮುತ್ತಗಿ ಉಪನಗರ ಠಾಣೆಗೆ ಹಾಜರಾದರು. ಇದಲ್ಲದೆ, ಪ್ರಕರಣದಲ್ಲಿ ಬಳಸಲಾಗಿದ್ದ ಕಂಟ್ರಿ ಪಿಸ್ತೂಲ್ ಸಹ ಸೀಜ್ ಆಗಿದೆ. ಚಂದ್ರಶೇಖರ ಇಂಡಿ ಕೊಟ್ಟಿದ್ದ ಕಂಟ್ರಿ ಪಿಸ್ತೂಲ್ ಸೀಜ್ ಆಗಿದೆ. ಧರ್ಮರಾಜ್ ಚಡಚಣನಿಂದ ಕಂಟ್ರಿ ಪಿಸ್ತೂಲನ್ನು ಒಂದೂವರೆ ತಿಂಗಳ ಹಿಂದೆಯೇ ಸಿಬಿಐ ಅಧಿಕಾರಿಗಳು ಸೀಜ್ ಮಾಡಿದ್ದರು. ಧಾರವಾಡ ತಾಲೂಕಿನ ಮನ್ಸೂರು ಗ್ರಾಮದಲ್ಲಿ ಪಿಸ್ತೂಲ್​ ಜಪ್ತಿಯಾಗಿತ್ತು ಎಂದು ತಿಳಿದುಬಂದಿದೆ.

ಕಾನೂನು ಮೀರಿ ಜೈಲ್‌ನಲ್ಲಿ ಕೊಲೆ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನೀಡ್ತಿದ್ದ ರಾಜಾತಿಥ್ಯಕ್ಕೆ ಬ್ರೇಕ್‌ !

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ