AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​

ಬಿಜೆಪಿ ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆಯ ವೇಳೆ ಬೆಚ್ಚಿಬೀಳಿಸುವ ವಿಷಯ ಬಯಲಾಗಿದೆ ಎಂದು ತಿಳಿದುಬಂದಿದೆ. ಹೌದು, ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವವರ ಹತ್ಯೆಗೇ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಯೋಗೀಶ್ ಗೌಡ ಹತ್ಯೆ ಕೇಸ್: ಪ್ರಮುಖ ಆರೋಪಿ ಕೊಲೆಗೆ ಮಾಜಿ ಸಚಿವರಿಂದ ನಡೆದಿತ್ತಾ ಸ್ಕೆಚ್?​
KUSHAL V
|

Updated on: Dec 13, 2020 | 12:08 PM

Share

ಧಾರವಾಡ: ಬಿಜೆಪಿ ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆಯ ವೇಳೆ ಬೆಚ್ಚಿಬೀಳಿಸುವ ವಿಷಯ ಬಯಲಾಗಿದೆ ಎಂದು ತಿಳಿದುಬಂದಿದೆ. ಹೌದು, ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವವರ ಹತ್ಯೆಗೇ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಈ ಆರೋಪ ಕೇಳಿಬಂದಿದ್ದು ಬೆಂಗಳೂರು ಮೂಲದ ರೌಡಿಗೆ ಸುಪಾರಿ ನೀಡಿರುವ ಮಾಹಿತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರಕರಣವನ್ನು ಸಿಬಿಐಗೆ ವಹಿಸುತ್ತಿದ್ದಂತೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ ಹತ್ಯೆಗೆ ಸಂಚು ಮಾಡಿರುವ ಆರೋಪ ಕೇಳಿಬಂದಿದೆ.

ಸಾಕ್ಷ್ಯ ಮುಚ್ಚಿ ಹಾಕುವುದಕ್ಕೆ ಮುತ್ತಗಿಯ ಕೊಲೆಗೆ ಸ್ಕೆಚ್ ನಡೆಸಲಾಗಿತ್ತು ಎಂಬ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ, ಯೋಗೀಶ್ ಸುಪಾರಿ ಬಗ್ಗೆ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಮುತ್ತಗಿ ಹತ್ಯೆಯಾದ್ರೆ ಕೇಸ್ ಮುಚ್ಚಿಹಾಕಬಹುದೆಂಬ ಪ್ಲ್ಯಾನ್ ನಡೆದಿತ್ತು ಎಂದು ತನಿಖೆ ವೇಳೆ ಮಾಹಿತಿ ಬಯಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ, ಹತ್ಯೆ ಪ್ರಕರಣವನ್ನು ಯೋಗೀಶ್ ಗೌಡ ಸಹೋದರ ಗುರುನಾಥ ಗೌಡರ ತಲೆಗೆ ಕಟ್ಟೋ ಪ್ಲ್ಯಾನ್ ಸಹ ನಡೆದಿತ್ತು ಎಂದು ಹೇಳಲಾಗಿದೆ.

ಬಸವರಾಜ್ ಮುತ್ತಗಿಗೆ‌ ಸಿಬಿಐ ಬುಲಾವ್ ಇತ್ತ, ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿಗೆ‌ ಸಿಬಿಐ ಬುಲಾವ್ ನೀಡಿತ್ತು. ಹಾಗಾಗಿ, ಮುತ್ತಗಿ ಉಪನಗರ ಠಾಣೆಗೆ ಹಾಜರಾದರು. ಇದಲ್ಲದೆ, ಪ್ರಕರಣದಲ್ಲಿ ಬಳಸಲಾಗಿದ್ದ ಕಂಟ್ರಿ ಪಿಸ್ತೂಲ್ ಸಹ ಸೀಜ್ ಆಗಿದೆ. ಚಂದ್ರಶೇಖರ ಇಂಡಿ ಕೊಟ್ಟಿದ್ದ ಕಂಟ್ರಿ ಪಿಸ್ತೂಲ್ ಸೀಜ್ ಆಗಿದೆ. ಧರ್ಮರಾಜ್ ಚಡಚಣನಿಂದ ಕಂಟ್ರಿ ಪಿಸ್ತೂಲನ್ನು ಒಂದೂವರೆ ತಿಂಗಳ ಹಿಂದೆಯೇ ಸಿಬಿಐ ಅಧಿಕಾರಿಗಳು ಸೀಜ್ ಮಾಡಿದ್ದರು. ಧಾರವಾಡ ತಾಲೂಕಿನ ಮನ್ಸೂರು ಗ್ರಾಮದಲ್ಲಿ ಪಿಸ್ತೂಲ್​ ಜಪ್ತಿಯಾಗಿತ್ತು ಎಂದು ತಿಳಿದುಬಂದಿದೆ.

ಕಾನೂನು ಮೀರಿ ಜೈಲ್‌ನಲ್ಲಿ ಕೊಲೆ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ನೀಡ್ತಿದ್ದ ರಾಜಾತಿಥ್ಯಕ್ಕೆ ಬ್ರೇಕ್‌ !

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ