AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿಎಸ್​ಎನ್​ಎಲ್ ಕಚೇರಿ ಮೇಲೆ ದಾಳಿ ನಡೆದಿದೆ. ಫೈಬರ್​ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.

ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ
ವಿಜಯಪುರದ BSNL ಕಚೇರಿ ಮೇಲೆ CBI ದಾಳಿ
KUSHAL V
|

Updated on: Mar 19, 2021 | 9:51 PM

Share

ವಿಜಯಪುರ: ನಗರದ BSNL ಕಚೇರಿ ಮೇಲೆ CBI ದಾಳಿ ನಡೆದಿದೆ. ದೆಹಲಿಯಿಂದ ಆಗಮಿಸಿದ ಸಿಬಿಐ ಟೀಮ್ ದಾಳಿ ಮಾಡಿದೆ. ನಾಲ್ಕರಿಂದ ಐವರು ಸಿಬಿಐ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿಎಸ್​ಎನ್​ಎಲ್ ಕಚೇರಿ ಮೇಲೆ ದಾಳಿ ನಡೆದಿದೆ. ಫೈಬರ್​ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.

VIJ CBI RAID 1

ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್​ ಕೇಬಲ್​ಗಳ ಅಳವಡಿಕೆ ಮಾಡಲಾಗಿತ್ತು. ಗ್ರಾ.ಪಂ.ಗೆ ಫೈಬರ್​ ಕೇಬಲ್ ಸಂಪರ್ಕ ನೀಡಬೇಕಿದ್ದ BSNL ಅಧಿಕಾರಿಗಳು ಕೆಲವು ಗ್ರಾಮ ಪಂಚಾಯಿತಿಗಳಿಗೆ ಮಾತ್ರ ಸಂಪರ್ಕ ಕಲ್ಪಿಸಿ ಬಹುತೇಕ ಗ್ರಾ.ಪಂ.ಗೆ ಸಂಪರ್ಕ ಕಲ್ಪಿಸದಿದ್ರೂ ಬಿಲ್​ ಪಾವತಿಸಿದ್ದರು ಎಂದು ತಿಳಿದುಬಂದಿದೆ. ಗುತ್ತಿಗೆದಾರರಿಂದ ಹಣ ಪಡೆದು ಅಕ್ರಮವೆಸಗಿರುವ ಆರೋಪ ಸಹ ಕೇಳಿಬಂದಿತ್ತು.

VIJ CBI RAID 2

ದೆಹಲಿಯಿಂದ ಆಗಮಿಸಿದ ತಂಡ

ಈ ಹಿನ್ನೆಲೆಯಲ್ಲಿ, BSNL​ ಕೇಂದ್ರ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದೆ. ಕಚೇರಿಯ 2ನೇ ಮಹಡಿಯಲ್ಲಿ BSNL ಅಧಿಕಾರಿಗಳ ವಿಚಾರಣೆ ಸಹ ನಡೆಸಲಾಯಿತು. ಮತ್ತೊಂದು ತಂಡ ಕಚೇರಿಯ ದಾಖಲೆಗಳನ್ನು ಪರಿಶೀಲಿಸಿದರು. ಮಾಹಿತಿ ಕಲೆಹಾಕಿ, ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ತಂಡವು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ವಾಪಸ್ ಆದರು. ಮಹಿಳಾ ಅಧಿಕಾರಿ ಸೇರಿ ಐದು ಜನ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

VIJ CBI RAID 3

ಕಚೇರಿ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು

ಇದನ್ನೂ  ಓದಿ: ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​