AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿಎಸ್​ಎನ್​ಎಲ್ ಕಚೇರಿ ಮೇಲೆ ದಾಳಿ ನಡೆದಿದೆ. ಫೈಬರ್​ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.

ಫೈಬರ್​ ಕೇಬಲ್ ಅಳವಡಿಕೆಯಲ್ಲಿ ಅಕ್ರಮ ಆರೋಪ: ವಿಜಯಪುರದ BSNL ಕಚೇರಿ ಮೇಲೆ CBI ದಾಳಿ
ವಿಜಯಪುರದ BSNL ಕಚೇರಿ ಮೇಲೆ CBI ದಾಳಿ
KUSHAL V
|

Updated on: Mar 19, 2021 | 9:51 PM

Share

ವಿಜಯಪುರ: ನಗರದ BSNL ಕಚೇರಿ ಮೇಲೆ CBI ದಾಳಿ ನಡೆದಿದೆ. ದೆಹಲಿಯಿಂದ ಆಗಮಿಸಿದ ಸಿಬಿಐ ಟೀಮ್ ದಾಳಿ ಮಾಡಿದೆ. ನಾಲ್ಕರಿಂದ ಐವರು ಸಿಬಿಐ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿಎಸ್​ಎನ್​ಎಲ್ ಕಚೇರಿ ಮೇಲೆ ದಾಳಿ ನಡೆದಿದೆ. ಫೈಬರ್​ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.

VIJ CBI RAID 1

ವಿಜಯಪುರದ BSNL ಕಚೇರಿ ಮೇಲೆ CBI ದಾಳಿ

ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್​ ಕೇಬಲ್​ಗಳ ಅಳವಡಿಕೆ ಮಾಡಲಾಗಿತ್ತು. ಗ್ರಾ.ಪಂ.ಗೆ ಫೈಬರ್​ ಕೇಬಲ್ ಸಂಪರ್ಕ ನೀಡಬೇಕಿದ್ದ BSNL ಅಧಿಕಾರಿಗಳು ಕೆಲವು ಗ್ರಾಮ ಪಂಚಾಯಿತಿಗಳಿಗೆ ಮಾತ್ರ ಸಂಪರ್ಕ ಕಲ್ಪಿಸಿ ಬಹುತೇಕ ಗ್ರಾ.ಪಂ.ಗೆ ಸಂಪರ್ಕ ಕಲ್ಪಿಸದಿದ್ರೂ ಬಿಲ್​ ಪಾವತಿಸಿದ್ದರು ಎಂದು ತಿಳಿದುಬಂದಿದೆ. ಗುತ್ತಿಗೆದಾರರಿಂದ ಹಣ ಪಡೆದು ಅಕ್ರಮವೆಸಗಿರುವ ಆರೋಪ ಸಹ ಕೇಳಿಬಂದಿತ್ತು.

VIJ CBI RAID 2

ದೆಹಲಿಯಿಂದ ಆಗಮಿಸಿದ ತಂಡ

ಈ ಹಿನ್ನೆಲೆಯಲ್ಲಿ, BSNL​ ಕೇಂದ್ರ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದೆ. ಕಚೇರಿಯ 2ನೇ ಮಹಡಿಯಲ್ಲಿ BSNL ಅಧಿಕಾರಿಗಳ ವಿಚಾರಣೆ ಸಹ ನಡೆಸಲಾಯಿತು. ಮತ್ತೊಂದು ತಂಡ ಕಚೇರಿಯ ದಾಖಲೆಗಳನ್ನು ಪರಿಶೀಲಿಸಿದರು. ಮಾಹಿತಿ ಕಲೆಹಾಕಿ, ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ತಂಡವು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ವಾಪಸ್ ಆದರು. ಮಹಿಳಾ ಅಧಿಕಾರಿ ಸೇರಿ ಐದು ಜನ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

VIJ CBI RAID 3

ಕಚೇರಿ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು

ಇದನ್ನೂ  ಓದಿ: ಅಪಘಾತದಲ್ಲಿ ಅಗಲಿದ ಕಟ್ಟಾ ಅಭಿಮಾನಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಹೊನ್ನಾಳಿ ಶಾಸಕ ರೇಣುಕಾಚಾರ್ಯ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ