AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ […]

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ
KUSHAL V
|

Updated on: Oct 05, 2020 | 5:57 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ ಮನೆಯ ನಿರ್ಮಾಣ ವೆಚ್ಚವನ್ನು ಸಹ ಮೌಲ್ಯಮಾಪನ ಮಾಡಲಾಗುತ್ತಿದೆಯಂತೆ. ಇದಲ್ಲದೆ, ಡಿ.ಕೆ ಶಿವಕುಮಾರ್‌ಗೆ ಸೇರಿರುವ ಕಾರುಗಳ ಮಾಡೆಲ್‌ ಮತ್ತು ಬೆಲೆಯ ಬಗ್ಗೆ ಸಹ ಅಧಿಕಾರಿಗಳು ಲೆಕ್ಕ ಮಾಡುತ್ತಿದ್ದಾರಂತೆ.

ಇದಲ್ಲದೆ, ಮನೆಯುಲ್ಲಿ ಇರುವ ಇತರೆ ದುಬಾರಿ ವಸ್ತುಗಳ ಮೌಲ್ಯಮಾಪನ ಸಹ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಮನೆಯಲ್ಲಿರುವ ಕಾರ್ಪೆಟ್‌ಯಿಂದ ಹಿಡಿದು ಕಡಿಮೆ ಹಾಗೂ ದುಬಾರಿ ವೆಚ್ಚದ ವಸ್ತುಗಳ ಬೆಲೆ ಮತ್ತು ಖರೀದಿಯ ಬಿಲ್​ಗಳನ್ನು ಅಧಿಕಾರಿಗಳು ಕೇಳುತ್ತಿದ್ದಾರಂತೆ. ಜೊತೆಗೆ, ಇವೆಲ್ಲಾ ವಸ್ತುಗಳ ಖರೀದಿಗೆ ಹಣದ ಮೂಲದ ಬಗ್ಗೆ ಸಹ ಪ್ರಶ್ನಿಸಿದ್ದಾರಂತೆ. ಜೊತೆಗೆ, ತಮ್ಮ ಮಗಳು ಐಶ್ವರ್ಯಾರ ನಿಶ್ಚಿತಾರ್ಥಕ್ಕೆ ತಂದಿದ್ದ ಒಡವೆಗಳ ಪರಿಶೀಲನೆ ಸಹ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಡಿ.ಕೆ ಶಿವಿಕುಮಾರ್ ಪುತ್ರಿಯ ನಿಶ್ಚಿತಾರ್ಥಕ್ಕೆ ಖರೀದಿ ಮಾಡಿದ್ದ ವಜ್ರ ಮತ್ತು ಚಿನ್ನಾಭರಣಗಳ ಪರಿಶೀಲನೆ ಮಾಡಲಾಯಿತು. ಡಿಕೆಶಿ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಡೈಮಂಡ್ ಹಾಗೂ ಚಿನ್ನಾಭರಣಗಳ ಖರೀದಿಯ ರಸೀದಿ ಬಗ್ಗೆ ಸಹ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರಂತೆ. ಜೊತೆಗೆ, ಬೀರು, ಕಪಾಟಿನಲ್ಲಿರುವ ವಸ್ತ್ರಗಳ ಪರಿಶೀಲನೆ ಸಹ ನಡೆದಿದೆ ಎಂದು ತಿಳಿದುಬಂದಿದೆ.

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ