AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ […]

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ
KUSHAL V
|

Updated on: Oct 05, 2020 | 5:57 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ ಮನೆಯ ನಿರ್ಮಾಣ ವೆಚ್ಚವನ್ನು ಸಹ ಮೌಲ್ಯಮಾಪನ ಮಾಡಲಾಗುತ್ತಿದೆಯಂತೆ. ಇದಲ್ಲದೆ, ಡಿ.ಕೆ ಶಿವಕುಮಾರ್‌ಗೆ ಸೇರಿರುವ ಕಾರುಗಳ ಮಾಡೆಲ್‌ ಮತ್ತು ಬೆಲೆಯ ಬಗ್ಗೆ ಸಹ ಅಧಿಕಾರಿಗಳು ಲೆಕ್ಕ ಮಾಡುತ್ತಿದ್ದಾರಂತೆ.

ಇದಲ್ಲದೆ, ಮನೆಯುಲ್ಲಿ ಇರುವ ಇತರೆ ದುಬಾರಿ ವಸ್ತುಗಳ ಮೌಲ್ಯಮಾಪನ ಸಹ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಮನೆಯಲ್ಲಿರುವ ಕಾರ್ಪೆಟ್‌ಯಿಂದ ಹಿಡಿದು ಕಡಿಮೆ ಹಾಗೂ ದುಬಾರಿ ವೆಚ್ಚದ ವಸ್ತುಗಳ ಬೆಲೆ ಮತ್ತು ಖರೀದಿಯ ಬಿಲ್​ಗಳನ್ನು ಅಧಿಕಾರಿಗಳು ಕೇಳುತ್ತಿದ್ದಾರಂತೆ. ಜೊತೆಗೆ, ಇವೆಲ್ಲಾ ವಸ್ತುಗಳ ಖರೀದಿಗೆ ಹಣದ ಮೂಲದ ಬಗ್ಗೆ ಸಹ ಪ್ರಶ್ನಿಸಿದ್ದಾರಂತೆ. ಜೊತೆಗೆ, ತಮ್ಮ ಮಗಳು ಐಶ್ವರ್ಯಾರ ನಿಶ್ಚಿತಾರ್ಥಕ್ಕೆ ತಂದಿದ್ದ ಒಡವೆಗಳ ಪರಿಶೀಲನೆ ಸಹ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಡಿ.ಕೆ ಶಿವಿಕುಮಾರ್ ಪುತ್ರಿಯ ನಿಶ್ಚಿತಾರ್ಥಕ್ಕೆ ಖರೀದಿ ಮಾಡಿದ್ದ ವಜ್ರ ಮತ್ತು ಚಿನ್ನಾಭರಣಗಳ ಪರಿಶೀಲನೆ ಮಾಡಲಾಯಿತು. ಡಿಕೆಶಿ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಡೈಮಂಡ್ ಹಾಗೂ ಚಿನ್ನಾಭರಣಗಳ ಖರೀದಿಯ ರಸೀದಿ ಬಗ್ಗೆ ಸಹ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರಂತೆ. ಜೊತೆಗೆ, ಬೀರು, ಕಪಾಟಿನಲ್ಲಿರುವ ವಸ್ತ್ರಗಳ ಪರಿಶೀಲನೆ ಸಹ ನಡೆದಿದೆ ಎಂದು ತಿಳಿದುಬಂದಿದೆ.

ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ