AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ […]

ಕಾರ್ಪೆಟ್​ನಿಂದ ಹಿಡಿದು ಡೈಮಂಡ್‌ವರೆಗೆ: CBI ತಂಡದಿಂದ ಪ್ರತಿಯೊಂದರ ಲೆಕ್ಕಾಚಾರ
KUSHAL V
|

Updated on: Oct 05, 2020 | 5:57 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿ ಸತತ 11 ಗಂಟೆಗಳಿಂದ ಶೋಧ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸಿಬಿಐ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಶಿವಕುಮಾರ್​ ನಿವಾಸದ ಪ್ರತಿಯೊಂದು ವಸ್ತುಗಳ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್‌ಗೆ ಈವರೆಗೆ ಇರುವ ಆದಾಯ ಎಷ್ಟು? ಡಿ.ಕೆ.ಶಿವಕುಮಾರ್‌ ಮನೆಯಲ್ಲಿರುವ ಸ್ಥಿರಾಸ್ತಿ, ಚರಾಸ್ತಿ ಎಷ್ಟು? ಎಂದು ಅಧಿಕಾರಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

ನಿವಾಸದಲ್ಲಿರುವ ಟಿವಿ, ಫ್ರಿಡ್ಜ್‌, ಎಸಿ ಸೇರಿದಂತೆ ಮನೆಯ ನಿರ್ಮಾಣ ವೆಚ್ಚವನ್ನು ಸಹ ಮೌಲ್ಯಮಾಪನ ಮಾಡಲಾಗುತ್ತಿದೆಯಂತೆ. ಇದಲ್ಲದೆ, ಡಿ.ಕೆ ಶಿವಕುಮಾರ್‌ಗೆ ಸೇರಿರುವ ಕಾರುಗಳ ಮಾಡೆಲ್‌ ಮತ್ತು ಬೆಲೆಯ ಬಗ್ಗೆ ಸಹ ಅಧಿಕಾರಿಗಳು ಲೆಕ್ಕ ಮಾಡುತ್ತಿದ್ದಾರಂತೆ.

ಇದಲ್ಲದೆ, ಮನೆಯುಲ್ಲಿ ಇರುವ ಇತರೆ ದುಬಾರಿ ವಸ್ತುಗಳ ಮೌಲ್ಯಮಾಪನ ಸಹ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಮನೆಯಲ್ಲಿರುವ ಕಾರ್ಪೆಟ್‌ಯಿಂದ ಹಿಡಿದು ಕಡಿಮೆ ಹಾಗೂ ದುಬಾರಿ ವೆಚ್ಚದ ವಸ್ತುಗಳ ಬೆಲೆ ಮತ್ತು ಖರೀದಿಯ ಬಿಲ್​ಗಳನ್ನು ಅಧಿಕಾರಿಗಳು ಕೇಳುತ್ತಿದ್ದಾರಂತೆ. ಜೊತೆಗೆ, ಇವೆಲ್ಲಾ ವಸ್ತುಗಳ ಖರೀದಿಗೆ ಹಣದ ಮೂಲದ ಬಗ್ಗೆ ಸಹ ಪ್ರಶ್ನಿಸಿದ್ದಾರಂತೆ. ಜೊತೆಗೆ, ತಮ್ಮ ಮಗಳು ಐಶ್ವರ್ಯಾರ ನಿಶ್ಚಿತಾರ್ಥಕ್ಕೆ ತಂದಿದ್ದ ಒಡವೆಗಳ ಪರಿಶೀಲನೆ ಸಹ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಡಿ.ಕೆ ಶಿವಿಕುಮಾರ್ ಪುತ್ರಿಯ ನಿಶ್ಚಿತಾರ್ಥಕ್ಕೆ ಖರೀದಿ ಮಾಡಿದ್ದ ವಜ್ರ ಮತ್ತು ಚಿನ್ನಾಭರಣಗಳ ಪರಿಶೀಲನೆ ಮಾಡಲಾಯಿತು. ಡಿಕೆಶಿ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಡೈಮಂಡ್ ಹಾಗೂ ಚಿನ್ನಾಭರಣಗಳ ಖರೀದಿಯ ರಸೀದಿ ಬಗ್ಗೆ ಸಹ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರಂತೆ. ಜೊತೆಗೆ, ಬೀರು, ಕಪಾಟಿನಲ್ಲಿರುವ ವಸ್ತ್ರಗಳ ಪರಿಶೀಲನೆ ಸಹ ನಡೆದಿದೆ ಎಂದು ತಿಳಿದುಬಂದಿದೆ.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು