AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhan Reddy: ಜನಾರ್ದನ ರೆಡ್ಡಿ ದಂಪತಿಗೆ ಸಂಕಷ್ಟ: ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್​ ಆದೇಶ

ಶಾಸಕ ಜನಾರ್ದನರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

Janardhan Reddy: ಜನಾರ್ದನ ರೆಡ್ಡಿ ದಂಪತಿಗೆ ಸಂಕಷ್ಟ: ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್​ ಆದೇಶ
ಜನಾರ್ದನ ರೆಡ್ಡಿ, ಲಕ್ಷ್ಮಿ ಅರುಣಾ ರೆಡ್ಡಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 13, 2023 | 9:06 AM

Share

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ (Janardhan Reddy) ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ (Lakshmi Aruna Reddy) ಅವರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ (CBI) ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77  ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅಸ್ತು

ಈ ಹಿಂದೆ ಕೂಡ 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್​​ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ  ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

ಕಳೆ‌ದ ವರ್ಷ ಆಗಸ್ಟ್ ತಿಂಗಳಲ್ಲಿ ಸಿಬಿಐ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ಕೇಳಿತ್ತು. ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ: ಜನಾರ್ದನ ರೆಡ್ಡಿ ರಣಹೇಡಿ, ನಮ್ಮನ್ನ ಬಳಸಿಕೊಂಡು ಅಕ್ರಮವಾಗಿ ಹಣ ಗಳಿಸಿದ, ತನ್ನ ಬೇಳೆ ಬೇಯಿಸಿಕೊಂಡ – ತಮ್ಮನ ವಿರುದ್ಧ ಅಣ್ಣ ಸೋಮಶೇಖರ ರೆಡ್ಡಿ ಫುಲ್ ಬ್ಲಾಸ್ಟ್​​

ಈ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ 5 ತಿಂಗಳಾದರೂ ಸರ್ಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮವಿರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿತ್ತು. ಸರ್ಕಾರದ ಪ್ರತಿಕ್ರಿಯೆ ತಿಳಿಸಲು ಖಡಕ್ ಸೂಚನೆ ಕೊಟ್ಟಿತ್ತು. ಇದರ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆ ಜನಾರ್ದನ್​ ರೆಡ್ಡಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು.

ಆಸ್ತಿ ಜಪ್ತಿ ಮಾಡುತ್ತೇವೆ ಎನ್ನುವವರಿಗೆ ಹೆದರಲ್ಲ ಎಂದಿದ್ದ ರೆಡ್ಡಿ

ಜನವರಿ 11 ರಂದು ಅಷ್ಟೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ರೆಡ್ಡಿ, ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುತ್ತಾರೆ ಅಂತಾರೆ, ಅದಕ್ಕೆಲ್ಲ ನಾನು ಹೆದರಲ್ಲ. ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು ನಾನು. ಯಾವೂದಕ್ಕೆ ಹೆದರುವುದಿಲ್ಲ. ನನ್ನ ಬಂಧನದ ಸಮಯದಲ್ಲಿ 1,200 ಕೋಟಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್​​ನಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ 4,000 ಕೋಟಿಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ನನ್ನ ಕಣ್ಣೀರು 12 ವರ್ಷದ ಹಿಂದೆಯೇ ಮುಗಿದಿದೆ ಎಂದು ಹೇಳಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 am, Tue, 13 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ