AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಕೋರ್ಟ್ ಆದೇಶ: ಹಲವರಿಗೆ ಢವ ಢವ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕರ್ನಾಟಕ ಹೈಕೋರ್ಟ್ ಎಸ್​ಐಟಿಗೆ ಆದೇಶಿಸಿದೆ.ಸದ್ಯ ಪ್ರಕರಣದ ತನಿಖೆಯನ್ನು ಎಸ್​ಐಟಿ ಮತ್ತು ಇಡಿ ನಡೆಸುತ್ತಿತ್ತು. ಇದೀಗ, ಹೈಕೋರ್ಟ್​ ಸೂಚನೆ ಮೇರೆಗೆ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗಲಿದೆ.

ವಾಲ್ಮೀಕಿ ನಿಗಮ ಹಗರಣ ತನಿಖೆ ಸಿಬಿಐಗೆ ನೀಡಿ ಕೋರ್ಟ್ ಆದೇಶ: ಹಲವರಿಗೆ ಢವ ಢವ
ಹೈಕೋರ್ಟ್​, ವಾಲ್ಮೀಕಿ ಅಭಿವೃದ್ಧಿ ನಿಗಮ
Ramesha M
| Edited By: |

Updated on:Jul 01, 2025 | 6:22 PM

Share

ಬೆಂಗಳೂರು, ಜುಲೈ 01: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ (Maharshi Valmiki Scheduled Tribes Development Corporation Limited) ಅಕ್ರಮ ಹಣ ವರ್ಗಾವಣೆ (Illegal Money Transfer) ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್​ ಎಸ್​ಐಟಿಗೆ ಸೂಚನೆ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಇನ್ನು, ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್​ ಯತ್ನಾಳ್​, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್​ ಬಂಗಾರಪ್ಪ ಅವರು ರಿಟ್​ ಅರ್ಜಿ ಸಲ್ಲಿಸಿದ್ದರು.

ಬ್ಯಾಂಕ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದ ಕೋರ್ಟ್​

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್ ಮನವಿ ಮಾಡಿತ್ತು. ಆದರೆ, ಹೈಕೋರ್ಟ್​ ಈ ಮನವಿಯನ್ನು ತಿರಸ್ಕರಿಸಿತ್ತು.

ಎಲ್ಲಿಗೆಲ್ಲ ವರ್ಗಾವಣೆಯಾಗಿತ್ತು ಹಣ?

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಹಿರಂಗವಾಗಿತ್ತು. 187 ಕೋಟಿ ರೂಪಾಯಿಯಲ್ಲಿ 94 ಕೋಟಿ ಹೈದರಾಬಾದ್​ ಬ್ಯಾಂಕ್​ಗೆ ಅಂದರೆ, ಹೈದರಾಬಾದ್​ನ ಫಸ್ಟ್​ ಬ್ಯಾಂಕ್​​ಗೆ ವರ್ಗಾಯಿಸಲಾಗಿತ್ತು. ಫಸ್ಟ್​ ಬ್ಯಾಂಕ್​ನ ಭರ್ತಿ 18 ನಕಲಿ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು. ಇದೆಲ್ಲವೂ ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್​ ಹಾಗೂ ಆಂಧ್ರದ ನಾಗೇಶ್ವರ್ ರಾವ್ ಸೂಚನೆಯಂತೆ ವರ್ಗಾವಣೆಯಾಗಿತ್ತು.

ಇದನ್ನೂ ಓದಿ
Image
ವಾಲ್ಮೀಕಿ ನಿಗಮ ಹಗರಣ: ಕರ್ನಾಟಕದಲ್ಲಿ ಏಕಕಾಲಕ್ಕೆ 8 ಕಡೆ ಇ.ಡಿ ದಾಳಿ
Image
ವಾಲ್ಮೀಕಿ‌‌‌‌ ನಿಗಮ ಹಗರಣ: ನಾಗೇಂದ್ರನೇ ಪ್ರಮುಖ ಆರೋಪಿ
Image
ವಾಲ್ಮೀಕಿ ನಿಗಮ ಹಗರಣ ಶುರುವಾಗಿದ್ದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ
Image
ವಾಲ್ಮೀಕಿ ನಿಗಮದ ಹಣ ಭ್ರಷ್ಟ ಕುಳಗಳ ಹೊಟ್ಟೆ ಸೇರಿದ ವಿವರ ಇಲ್ಲಿದೆ

ಹೀಗೆ ವರ್ಗಾವಣೆ ಆದ ಹಣವನ್ನು ಮಧ್ಯವರ್ತಿ ಸತ್ಯನಾರಾಣ ವರ್ಮಾ ಬಿಡಿಸಿಕೊಂಡಿದ್ದನು. ಈ 18 ನಕಲಿ ಖಾತೆಗಳಿಂದ ಬೇರೆ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿತ್ತು. ನೆಟ್​ ಬ್ಯಾಂಕಿಂಗ್​​, ಆರ್​​ಟಿಜಿಎಸ್, ಫೋನ್​ ಪೇ, ಗೂಗಲ್​ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡಿ, ಆ ಹಣವನ್ನ ಸತ್ಯನಾರಾಯಣ ವರ್ಮಾ ಡ್ರಾ ಮಾಡಿಕೊಂಡು ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಜತೆಗೂಡಿ ಹಣ ಹಂಚಿಕೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣದಲ್ಲಿ ಬೆಂಝ್​ ಕಾರು, ಲೋಕಸಭಾ ಚುನಾವಣೆಗೆ 21 ಕೋಟಿ ರೂ.ಬಳಕೆ: ಇಡಿ ತನಿಖೆಯಲ್ಲಿ ಬಹಿರಂಗ

ಪದ್ಮನಾಭ್​​ಗೆ ಸಿಕ್ಕಿದ್ದು ಭರ್ತಿ ₹5 ಕೋಟಿ ಪಾಲು

ನಿಗಮದ ಎಂಡಿಯಾಗಿದ್ದ ಪದ್ಮನಾಭಗೆ 5 ಕೋಟಿ ರೂಪಾಯಿ ಪಾಲು ಬಂದಿತ್ತು. ಈ ಹಣದಲ್ಲಿ ಅರ್ಧ ಹಣವನ್ನ ಮಗನ ಸ್ನೇಹಿತನ ಮನೆಯಲ್ಲಿ, ಅಂದರೆ ನೆಲಮಂಗಲದ ಗೋವಿನಹಳ್ಳಿಯ ಕೆಂಪೇಗೌಡ ಮನೆಯಲ್ಲಿದ್ದ ಇಟ್ಟಿದ್ದ. ಕೆಂಪೇಗೌಡ ಮನೆಯಲ್ಲಿ ಎಸ್​ಐಟಿ ಅಧಿಕಾರಿಗಳು 3.64 ಕೋಟಿ ರೂಪಾಯಿ ಹಣವನ್ನ ಸೀಜ್​ ಮಾಡಿದ್ದರು. ಅಲ್ಲದೆ, ಪದ್ಮನಾಭ ಸ್ನೇಹಿತರೊಬ್ಬರ ಕಾರಿನಲ್ಲಿ ಬಚ್ಚಿಟ್ಟಿದ್ದ 30 ಲಕ್ಷ ರೂಪಾಯಿ ನಗದು ಕೂಡ ಸೀಜ್ ಆಗಿತ್ತು. ಅಲ್ಲದೆ, ನಾಗೇಂದ್ರ ಆಪ್ತ ಹರೀಶ್​​ಗೆ 25 ಲಕ್ಷ ರೂ., ದದ್ದಲ್​ ಆಪ್ತನಿಗೆ 55 ಲಕ್ಷ ರೂ., ದದ್ದಲ್​ ಆಪ್ತ ಹಂಪಣ್ಣಗೆ 55 ಲಕ್ಷ ರೂ. ನೀಡಿರುವುದು ತನಿಖೆಯಲ್ಲಿ ತಿಳಿದುಬಂದಿತ್ತು. ಹೀಗೆ 94 ಕೋಟಿ ರೂಪಾಯಿ ಹಣವನ್ನ ನೆಕ್ಕಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮಾ ಹಂಚಿಕೆ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Tue, 1 July 25

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ