AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬಿಡುಗಡೆಯಾಗಲಿದೆ CBSE 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ..

CBSE Classes 10 Exam 2021 Time Table ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021ನೇ ಸಾಲಿನ 10 ಮತ್ತು 12 ತರಗತಿಗಳ ಪರೀಕ್ಷೆಯ ವೇಳಾಪಟ್ಟಿ ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ.

ಇಂದು ಬಿಡುಗಡೆಯಾಗಲಿದೆ CBSE 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ..
ಪರೀಕ್ಷೆ (ಸಾಂಕೇತಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: Feb 02, 2021 | 7:39 AM

Share

ದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ನಡೆಸುವ 2021ನೇ ಸಾಲಿನ 10 ಮತ್ತು 12 ತರಗತಿಗಳ ಪರೀಕ್ಷೆಯ ವೇಳಾಪಟ್ಟಿ ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ. ಪರೀಕ್ಷೆಯು ಮೇ 4 ರಿಂದ ಜೂನ್ 10 ರವರೆಗೆ ಆಫ್‌ಲೈನ್ ಮೂಲಕ ನಡೆಯಲಿದೆ. ಒಮ್ಮೆ ಬಿಡುಗಡೆಯಾದ ಬಳಿಕ ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಡೇಟ್‌ಶೀಟ್ ಪರಿಶೀಲಿಸಬಹುದು. -cbse.nic.in

ಪ್ರವೇಶ ಪತ್ರವನ್ನು ಏಪ್ರಿಲ್‌ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ವರ್ಷ, ಪಠ್ಯಕ್ರಮವನ್ನು ಶೇಕಡಾ 30 ಕ್ಕೆ ಇಳಿಸಲಾಗಿದೆ, ಮತ್ತು ಪ್ರಶ್ನೆ ಪತ್ರಿಕೆಯಲ್ಲಿ ಶೇಕಡಾ 33 ರಷ್ಟು ಆಂತರಿಕ ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ.

CBSE 10 ನೇ ಮತ್ತು 12 ನೇ ತರಗತಿ ಪರೀಕ್ಷೆ 2021: ವೇಳಾಪಟ್ಟಿಯನ್ನು ಹೇಗೆ ಪರಿಶೀಲಿಸುವುದು

ಹಂತ 1: ಅಧಿಕೃತ ವೆಬ್‌ಸೈಟ್- cbse.nic.in ಗೆ ಭೇಟಿ ನೀಡಿ

ಹಂತ 2: ‘ತರಗತಿಗಳು 10, 12 ಡೇಟ್‌ಶೀಟ್‌ಗಳ’ ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: 10/12 ನೇ ತರಗತಿಯ ಪರೀಕ್ಷೆಯ ವೇಳಾಪಟ್ಟಿ ಸ್ಕ್ರೀನ್ ಮೇಲೆ ಕಾಣಿಸುತ್ತದೆ

ಹಂತ 4: ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಕೊರೊನಾ ಸಾಂಕ್ರಾಮಿಕ ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳು ನಡೆಯಲಿದ್ದು, ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗುವುದು ಅತ್ಯಗತ್ಯ. ಮಾರ್ಚ್ 1 ರಿಂದ ಶಾಲೆಗಳು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಿವೆ. ಫಲಿತಾಂಶವನ್ನು ಜುಲೈ 15 ರೊಳಗೆ ಪ್ರಕಟಿಸಲಾಗುವುದು.

ಕಳೆದ ವರ್ಷ ಜುಲೈನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಒಟ್ಟು 88.78 ರಷ್ಟು ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. 91.46 ರಷ್ಟು ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದರು.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ