AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ.

ಅಕ್ರಮ ರೆಮ್‌ಡಿಸಿವಿರ್ ಔಷಧ ಸಂಗ್ರಹ ಮತ್ತು ಮಾರಾಟ.. ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ
ರಾಜೇಶ್, ಶಕೀಬ್, ಸೊಹೈಲ್
Follow us
ಆಯೇಷಾ ಬಾನು
|

Updated on: Apr 18, 2021 | 1:31 PM

ಬೆಂಗಳೂರು: ಕೊವಿಡ್ ಚಿಕಿತ್ಸೆಗೆ ಅಗತ್ಯ ಲಸಿಕೆ ಅಕ್ರಮವಾಗಿ ಸಂಗ್ರಹ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜೇಶ್, ಶಕೀಬ್, ಸೊಹೈಲ್ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ರೆಮ್‌ಡಿಸಿವಿರ್ ಔಷಧವನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಪ್ರತಿ ಇಂಜೆಕ್ಷನ್ 10,500 ರೂ.ಗೆ ಮಾರುತ್ತಿದ್ರು. ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ರೆಮ್‌ಡಿಸಿವಿರ್ ಲಸಿಕೆಯ 11 ಬಾಟಲ್ ವಶಕ್ಕೆ ಪಡೆದಿದ್ದಾರೆ.

ಮಹಾಮಾರಿ ಕೊರೊನಾದಿಂದ ಜನ ನರಳುತ್ತಿದ್ದಾರೆ. ಲಸಿಕೆ ಸಿಗದೆ ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಅಕ್ರಮವಾಗಿ ಕೊವಿಡ್​ ಚಿಕಿತ್ಸೆಗೆ ಬೇಕಿರುವ ರೆಮ್‌ಡಿಸಿವಿರ್ ಔಷಧವನ್ನು ಸಂಗ್ರಹಿಸಿಟ್ಟಿದ್ದಾರೆ. ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದಾರೆ. ಸದ್ಯ ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಇವರೆಗೆ ಇಂಜೆಕ್ಷನ್ ಸಿಗುತಿದ್ದ ಮೂಲ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸಿಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಬಂಧಿತ ರಾಜೇಶ್ ಗುರುಶ್ರೀ ಮೆಡಿಕಲ್ ನಡೆಸುತಿದ್ದ ಎಂಬ ಮಾಹಿತಿ ಸಿಕ್ಕಿದೆ. ಘಟನೆ ಸಂಬಂಧ ಸದಗುಂಟೆ ಪಾಳ್ಯ ಹಾಗೂ ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ದೆಹಲಿಯಲ್ಲಿ ಆಕ್ಸಿಜನ್​, ರೆಮ್​ಡಿಸಿವಿರ್ ಔಷಧ​​ಗಳ ತೀವ್ರ ಕೊರತೆ: ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?