ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರದಿದ್ದರೆ ಎಚ್ಚರ! ನಿಮ್ಮೇಲಿದೆ ಸಿಸಿಬಿ ಕಣ್ಣು

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್​ಗಳ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್​ ಪೇಜ್​ ತೆರದು, ಅವರ ಪರವಾಗಿ ಪೋಸ್ಟ್​ ಹಾಕುವುದು ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಅಪರಾಧ ವಿಭಾಗ ಮಹತ್ವದ ಹೆಜ್ಜೆ ಇರಿಸಿದೆ.

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರದಿದ್ದರೆ ಎಚ್ಚರ! ನಿಮ್ಮೇಲಿದೆ ಸಿಸಿಬಿ ಕಣ್ಣು
ಸಿಸಿಬಿ
Follow us
| Updated By: ವಿವೇಕ ಬಿರಾದಾರ

Updated on: Jul 05, 2024 | 1:56 PM

ಬೆಂಗಳೂರು, ಜುಲೈ 05: ರೌಡಿಶೀಟರ್​​ಗಳ (Rowdy Sheeter) ಪರವಾಗಿ ಸಮಾಜಿಕ ಜಾಲತಾಣದಲ್ಲಿ (Social Media) ತೆರಯಲಾಗಿರುವ ಫ್ಯಾನ್​ ಪೇಜ್​ಗಳ (Fan Page) ಮೇಲೆ ಸಿಸಿಬಿ (CCB) ಹದ್ದಿನ ಕಣ್ಣಿರಿಸಿದೆ. ರೌಡಿಶೀಟರ್​ಗಳ ಹೆಸರು ಬಳಸಿ ಸಾಲು ಸಾಲು ಫ್ಯಾನ್ ಪೇಜ್​ಗಳು ತೆಗೆಯುವ ಸಹಚರರು ಅವರಿಗೆ ಬಿಲ್ಡಪ್ ಕೊಟ್ಟು ಪೋಸ್ಟ್ ಹಾಕುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಲು ಸಿಸಿಬಿ ರೌಡಿ ವಿಂಗ್ ಮುಂದಾಗಿದೆ.

ಇತ್ತೀಚೆಗೆ ಇನ್ಸ್​​ಟಾಗ್ರಾಂನಲ್ಲಿ ರೌಡಿಶೀಟರ್​ಗಳ ಫ್ಯಾನ್​ ಪೇಜ್​ಗಳು ಹೆಚ್ಚಾಗಿವೆ. ರೌಡಿಗಳಿಗೆ N BOSS, S BOSS ,C BOSS ಅಂತ ಪೇಜ್ ತೆರಯಲಾಗಿದೆ. ಕುಖ್ಯಾತ ರೌಡಿಶೀಟರ್​ಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನಿಲ, ಸೈಕಲ್ ರವಿ, ಕಾಡುಬೀಸನಹಳ್ಳಿ ರೋಹಿತ, ಸೇರಿದಂತೆ ಹಲವರ ಹೆಸರಲ್ಲಿರುವ ಫ್ಯಾನ್ ಪೇಜ್​ಗಳಿವೆ. ಇಂತಹ ಪೇಜ್​ ಅನ್ನು ಸಾವಿರಾರು ಯುವಕರು ಫಾಲೋ ಮಾಡುತ್ತಿದ್ದಾರೆ.

ಬೆಂಗಳೂರು ಡಾನ್, ಅಂಡರ್ ವಲ್ಡ್ ಡಾನ್, ಅಂತ ಬಿಲ್ಡಪ್ ಕೊಟ್ಟು ಪೇಜ್​ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಬೆಂಕಿ, ಲಾಂಗು ಮಚ್ಚು ಎಫೆಕ್ಟ್​ಗಳನ್ನ ಹಾಕಿ ಸಿನಿಮಾ ಸ್ಟೈಲ್​ನಲ್ಲಿ ರೌಡಿಗಳಿಗೆ ಬಿಲ್ಡಪ್ ಕೊಡುತ್ತಾರೆ. ಇದು ಅಡ್ಡದಾರಿ ಹಿಡಿಯುತ್ತಿರುವ ಯುವಕರಿಗೆ ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಇಂತಹ ಪೇಜ್​ಗಳಿಂದಾಗಿ ಯುವಜನತೆ ರೌಡಿಸಂ ನತ್ತ ಆಕರ್ಷಿತರಾಗುತ್ತಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ಇಂತಹ ರೌಡಿಶೀಟರ್ ಫ್ಯಾನ್ ಪೇಜ್​ಗಳಿಗೆ ಹಲವು ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಸಿಸಿಬಿ ಡಿಸಿಪಿ ಶ್ರೀನಿವಾಸ್​​ ಗೌಡ ಅವರಿಗೆ ಹಲವರು ದೂರು ನೀಡಿದ್ದಾರೆ. ಇಂತಹ ಫ್ಯಾನ್ ಪೇಜ್​ಗೆ ಕಡಿವಾಣ ಹಾಕುವಂತೆ ಮನವಿ ಮನವಿ ಮಾಡಿದ್ದಾರೆ.

ಹೀಗಾಗಿ ಇದಕ್ಕೆಲ್ಲ ಕಡಿವಾಣ ಹಾಕಲು ಸಿಸಿಬಿ ಮುಂದಾಗಿದೆ. ಸಿಸಿಬಿ ರೌಡಿ ವಿಂಗ್ ಈಗಾಗಲೆ ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಹಲವು ಪೇಜ್​ಗಳನ್ನ ಕ್ಲೋಸ್ ಮಾಡಿಸಿದೆ. ಅಲ್ಲದೆ, ಈ ರೀತಿ ಫ್ಯಾನ್​ ಪೇಜ್​ ತೆರೆಯುವವರ ವಿರುದ್ಧ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ