AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರದಿದ್ದರೆ ಎಚ್ಚರ! ನಿಮ್ಮೇಲಿದೆ ಸಿಸಿಬಿ ಕಣ್ಣು

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್​ಗಳ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್​ ಪೇಜ್​ ತೆರದು, ಅವರ ಪರವಾಗಿ ಪೋಸ್ಟ್​ ಹಾಕುವುದು ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಅಪರಾಧ ವಿಭಾಗ ಮಹತ್ವದ ಹೆಜ್ಜೆ ಇರಿಸಿದೆ.

ರೌಡಿಶೀಟರ್​​ಗಳ ಪರ ಫ್ಯಾನ್​ ಪೇಜ್​ ತೆರದಿದ್ದರೆ ಎಚ್ಚರ! ನಿಮ್ಮೇಲಿದೆ ಸಿಸಿಬಿ ಕಣ್ಣು
ಸಿಸಿಬಿ
Shivaprasad B
| Edited By: ವಿವೇಕ ಬಿರಾದಾರ|

Updated on: Jul 05, 2024 | 1:56 PM

Share

ಬೆಂಗಳೂರು, ಜುಲೈ 05: ರೌಡಿಶೀಟರ್​​ಗಳ (Rowdy Sheeter) ಪರವಾಗಿ ಸಮಾಜಿಕ ಜಾಲತಾಣದಲ್ಲಿ (Social Media) ತೆರಯಲಾಗಿರುವ ಫ್ಯಾನ್​ ಪೇಜ್​ಗಳ (Fan Page) ಮೇಲೆ ಸಿಸಿಬಿ (CCB) ಹದ್ದಿನ ಕಣ್ಣಿರಿಸಿದೆ. ರೌಡಿಶೀಟರ್​ಗಳ ಹೆಸರು ಬಳಸಿ ಸಾಲು ಸಾಲು ಫ್ಯಾನ್ ಪೇಜ್​ಗಳು ತೆಗೆಯುವ ಸಹಚರರು ಅವರಿಗೆ ಬಿಲ್ಡಪ್ ಕೊಟ್ಟು ಪೋಸ್ಟ್ ಹಾಕುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಲು ಸಿಸಿಬಿ ರೌಡಿ ವಿಂಗ್ ಮುಂದಾಗಿದೆ.

ಇತ್ತೀಚೆಗೆ ಇನ್ಸ್​​ಟಾಗ್ರಾಂನಲ್ಲಿ ರೌಡಿಶೀಟರ್​ಗಳ ಫ್ಯಾನ್​ ಪೇಜ್​ಗಳು ಹೆಚ್ಚಾಗಿವೆ. ರೌಡಿಗಳಿಗೆ N BOSS, S BOSS ,C BOSS ಅಂತ ಪೇಜ್ ತೆರಯಲಾಗಿದೆ. ಕುಖ್ಯಾತ ರೌಡಿಶೀಟರ್​ಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನಿಲ, ಸೈಕಲ್ ರವಿ, ಕಾಡುಬೀಸನಹಳ್ಳಿ ರೋಹಿತ, ಸೇರಿದಂತೆ ಹಲವರ ಹೆಸರಲ್ಲಿರುವ ಫ್ಯಾನ್ ಪೇಜ್​ಗಳಿವೆ. ಇಂತಹ ಪೇಜ್​ ಅನ್ನು ಸಾವಿರಾರು ಯುವಕರು ಫಾಲೋ ಮಾಡುತ್ತಿದ್ದಾರೆ.

ಬೆಂಗಳೂರು ಡಾನ್, ಅಂಡರ್ ವಲ್ಡ್ ಡಾನ್, ಅಂತ ಬಿಲ್ಡಪ್ ಕೊಟ್ಟು ಪೇಜ್​ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಬೆಂಕಿ, ಲಾಂಗು ಮಚ್ಚು ಎಫೆಕ್ಟ್​ಗಳನ್ನ ಹಾಕಿ ಸಿನಿಮಾ ಸ್ಟೈಲ್​ನಲ್ಲಿ ರೌಡಿಗಳಿಗೆ ಬಿಲ್ಡಪ್ ಕೊಡುತ್ತಾರೆ. ಇದು ಅಡ್ಡದಾರಿ ಹಿಡಿಯುತ್ತಿರುವ ಯುವಕರಿಗೆ ಇನ್ನಷ್ಟು ಪ್ರೇರಣೆ ನೀಡಿದಂತಾಗುತ್ತದೆ. ಇಂತಹ ಪೇಜ್​ಗಳಿಂದಾಗಿ ಯುವಜನತೆ ರೌಡಿಸಂ ನತ್ತ ಆಕರ್ಷಿತರಾಗುತ್ತಾರೆ.

ಇದನ್ನೂ ಓದಿ: ಹನಿಟ್ರ್ಯಾಪ್​ ಮೂಲಕ ಶಾಸಕ ಹರೀಶ್​ಗೌಡಗೆ ಬ್ಲ್ಯಾಕ್​ ಮೇಲ್​ ಮಾಡಿದ್ದ ಆರೋಪಿಗಳ ಬಂಧನ

ಇಂತಹ ರೌಡಿಶೀಟರ್ ಫ್ಯಾನ್ ಪೇಜ್​ಗಳಿಗೆ ಹಲವು ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಸಿಸಿಬಿ ಡಿಸಿಪಿ ಶ್ರೀನಿವಾಸ್​​ ಗೌಡ ಅವರಿಗೆ ಹಲವರು ದೂರು ನೀಡಿದ್ದಾರೆ. ಇಂತಹ ಫ್ಯಾನ್ ಪೇಜ್​ಗೆ ಕಡಿವಾಣ ಹಾಕುವಂತೆ ಮನವಿ ಮನವಿ ಮಾಡಿದ್ದಾರೆ.

ಹೀಗಾಗಿ ಇದಕ್ಕೆಲ್ಲ ಕಡಿವಾಣ ಹಾಕಲು ಸಿಸಿಬಿ ಮುಂದಾಗಿದೆ. ಸಿಸಿಬಿ ರೌಡಿ ವಿಂಗ್ ಈಗಾಗಲೆ ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಹಲವು ಪೇಜ್​ಗಳನ್ನ ಕ್ಲೋಸ್ ಮಾಡಿಸಿದೆ. ಅಲ್ಲದೆ, ಈ ರೀತಿ ಫ್ಯಾನ್​ ಪೇಜ್​ ತೆರೆಯುವವರ ವಿರುದ್ಧ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ