AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ವೈ ವಿಜಯೇಂದ್ರಗೆ ಹಣ ತಲುಪಿಸಬೇಕು ಎಂದು ಶ್ರೀರಾಮುಲು ಆಪ್ತ ರಾಜಣ್ಣ ಡೀಲ್; 3 ಸ್ಫೋಟಕ ಆಡಿಯೋ ಆಧರಿಸಿ ತನಿಖೆ

ರಾಮುಲು ಪಿಎ ರಾಜಣ್ಣ3 ಕೋಟಿ ಹಣಕ್ಕೆ ಡೀಲ್​ ಕುದುರಿಸಿದ್ದರು. ಈ ಬಗ್ಗೆ, 3 ಸ್ಫೋಟಕ ಆಡಿಯೋ ಆಧರಿಸಿ ಸಿಸಿಬಿಯಿಂದ ತನಿಖೆ ನಡೆಸಲಾಗುತ್ತಿದೆ. ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿರುವ 3 ಆಡಿಯೋ ಬಿಡುಗಡೆಯಾಗಿದೆ.

ಬಿ ವೈ ವಿಜಯೇಂದ್ರಗೆ ಹಣ ತಲುಪಿಸಬೇಕು ಎಂದು ಶ್ರೀರಾಮುಲು ಆಪ್ತ ರಾಜಣ್ಣ ಡೀಲ್; 3 ಸ್ಫೋಟಕ ಆಡಿಯೋ ಆಧರಿಸಿ ತನಿಖೆ
ವಿಜಯೇಂದ್ರ
TV9 Web
| Edited By: |

Updated on:Jul 02, 2021 | 4:13 PM

Share

ಬೆಂಗಳೂರು: ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಹೊಸದೊಂದು ಮಾಹಿತಿ ಬಹಿರಂಗವಾಗಿದೆ. ಬಿ.ವೈ. ವಿಜಯೇಂದ್ರಗೆ ಹಣ ತಲುಪಿಸಬೇಕೆಂದು ಹೇಳಿ ಡೀಲ್ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಗುತ್ತಿಗೆದಾರನ ಜತೆ ಸಚಿವ ಶ್ರೀರಾಮುಲು ಆಪ್ತ ಕಾರ್ಯದರ್ಶಿ ರಾಜಣ್ಣ ಡೀಲ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ರಾಮುಲು ಪಿಎ ರಾಜಣ್ಣ3 ಕೋಟಿ ಹಣಕ್ಕೆ ಡೀಲ್​ ಕುದುರಿಸಿದ್ದರು. ಈ ಬಗ್ಗೆ, 3 ಸ್ಫೋಟಕ ಆಡಿಯೋ ಆಧರಿಸಿ ಸಿಸಿಬಿಯಿಂದ ತನಿಖೆ ನಡೆಸಲಾಗುತ್ತಿದೆ. ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿರುವ 3 ಆಡಿಯೋ ಬಿಡುಗಡೆಯಾಗಿದೆ.

ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ರಾಜಣ್ಣ ಡೀಲ್ ಮಾಡಿಕೊಂಡಿದ್ದಾರೆ. ಸಚಿವ ಬಿ. ಶ್ರೀರಾಮುಲು ಆಪ್ತ ರಾಜಣ್ಣರಿಂದ ಡೀಲ್ ಮಾಡಲಾಗಿದೆ. ಯೋಜನೆಯೊಂದರ ಗುತ್ತಿಗೆದಾರನ ಜತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ. ಈ ಬಗೆಗಿನ ಮೂರು ಆಡಿಯೋಗಳು ಬಿಡುಗಡೆಯಾಗಿದೆ.

ಮೊದಲನೆಯ ಆಡಿಯೋದಲ್ಲಿ 75 ಲಕ್ಷ ರೂಪಾಯಿಗೆ ಬೇಡಿಕೆ ಇಡಲಾಗಿದೆ. 2ನೇ ಆಡಿಯೋದಲ್ಲಿ 1 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ. 3ನೇ ಆಡಿಯೋದಲ್ಲಿ 3 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಬಗ್ಗೆ ತಿಳಿದುಬಂದಿದೆ. 3 ಆಡಿಯೋಗೆ ಸಂಬಂಧಿಸಿ ರಾಜಣ್ಣ ವಾಯ್ಸ್ ಸ್ಯಾಂಪಲ್ಸ್ ಪರೀಕ್ಷೆ ನಡೆಸಲಾಗುತ್ತಿದೆ. ರಾಜಣ್ಣ ಮೊಬೈಲ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ, ಶ್ರೀರಾಮುಲು ಪ್ರತಿಕ್ರಿಯೆ ಸಚಿವ ಶ್ರೀರಾಮುಲು ಆಪ್ತನ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಶ್ರೀರಾಮುಲು ಆಪ್ತನ ಬಂಧನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿಲ್ಲ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಣೆ ತೋರಿದ್ದಾರೆ. ಸುದ್ದಿಗೋಷ್ಠಿ ಮುಗಿದ ಕೂಡಲೇ ಯಡಿಯೂರಪ್ಪ ತೆರಳಿದ್ದಾರೆ. ಸಚಿವ ಶ್ರೀರಾಮುಲುರನ್ನು ಸನ್ನೆ ಮಾಡಿ ಕರೆದೊಯ್ದಿದ್ದಾರೆ.

ನಾನು ಈ ಬಗ್ಗೆ ಸಿಎಂ ಜತೆ ಮಾತನಾಡಿ, ವಿವರಣೆ ನೀಡಿದ್ದೇನೆ ಎಂದು ವಿಧಾನಸೌಧದಲ್ಲಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಸಚಿವರ ಬಳಿ ಹಲವಾರು ಜನ ಬರುತ್ತಿರುತ್ತಾರೆ, ಹೋಗುತ್ತಾರೆ. ಯಾರದ್ದೋ‌ ಹೆಸರು ಹೇಳಿದರೆ ಯಾರಿಗೂ ಗೊತ್ತಾಗುವುದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಹೀಗಾಗಿ ಮಾತನಾಡಲ್ಲ ಎಂದು ತಿಳಿಸಿದ್ದಾರೆ. ರಾಜಣ್ಣ ನನ್ನ ಪಿಎ ಅಲ್ಲ, ನನಗೆ ಗೊತ್ತಿರುವ ವ್ಯಕ್ತಿ ಮಾತ್ರ ಎಂದು ವಿಧಾನಸೌಧದಲ್ಲಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಸಭೆ; ವಿಚಾರಣೆಯ ಬಳಿಕ ಶ್ರೀರಾಮುಲು ಆಪ್ತ ರಾಜಣ್ಣ ವಾಪಸ್

ವಿಜಯೇಂದ್ರ ಟ್ವೀಟ್, ಸಿಸಿಬಿ ಪೊಲೀಸರಿಗೆ ಒತ್ತಡ ಹೆಚ್ಚಳ, ರಾಜಣ್ಣ ನನ್ನ ಪಿಎ ಅಲ್ಲ ನನಗೆ ಗೊತ್ತಿರುವ ಹುಡುಗ ಅಷ್ಟೇ ಎಂದ ಸಚಿವ ರಾಮುಲು

Published On - 4:03 pm, Fri, 2 July 21

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ